ಐವರು ನ್ಯಾಯಮೂರ್ತಿಗಳ ಕೈಯಲ್ಲಿ ಮೂರು ತಲಾಖ್ ಹಣೆಬರಹ
ನವದೆಹಲಿ, ಮೇ 11 : ಮುಸ್ಲಿಂ ಗಂಡಂದಿರು ಮೂರು ಬಾರಿ ತಲಾಖ್ ಹೇಳಿ ಹೆಂಡತಿಗೆ ವಿಚ್ಛೇದನ ನೀಡುವುದು ಕಾನೂನಾತ್ಮಕವಾಗಿದೆಯೋ ಇಲ್ಲವೋ ಎಂಬುದನ್ನು ಸುಪ್ರೀಂ ಕೋರ್ಟಿನ ಐವರು ನ್ಯಾಯಮೂರ್ತಿಗಳು ನಿರ್ಧರಿಸಲಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೆಹರ್ ನೇತೃತ್ವದ ನ್ಯಾಯಪೀಠದಲ್ಲಿ ಇರುವ ಇತರ ನ್ಯಾಯಮೂರ್ತಿಗಳು ಕುರಿಯನ್ ಜೋಸೆಫ್, ಆರ್ ಎಫ್ ನಾರಿಮನ್, ಯುಯು ಲಲಿತ್ ಮತ್ತು ಅಬ್ದುಲ್ ನಜೀರ್.[ತಲಾಖ್ ಹೇಳಿ 3 ತಿಂಗಳು ವಾಪಸ್ ಪಡೆಯದಿದ್ದರೆ 'ವಿಚ್ಛೇದನ'ವೇ? ಸುಪ್ರೀಂ ಪ್ರಶ್ನೆ]

ಸುಪ್ರೀಂ ಕೋರ್ಟಿನ ಈ ನ್ಯಾಯಮೂರ್ತಿಗಳು ಒಂದೊಂದು ಸಮುದಾಯಕ್ಕೆ ಸೇರಿದವರಾದರೂ ಅವರು ಯಾವುದೇ ಸಮುದಾಯಕ್ಕೆ ಸೇರಿದವರಲ್ಲ. ಯಾವುದೇ ಜಾತಿ, ಧರ್ಮದ ಹಂಗಿಲ್ಲದೆ ನಿಷ್ಪಕ್ಷಪಾತವಾಗಿ ನ್ಯಾಯ ಒದಗಿಸುವವರು.
ಮುಸ್ಲಿಂ ಸಮುದಾಯದಲ್ಲಿ ಶತಮಾನಗಳಿಂದ ಚಾಲ್ತಿಯಲ್ಲಿರುವ, ಕಾನೂನು ಬಾಹಿರವಾಗಿರುವ ಈ ಹೀನ ಪದ್ಧತಿಯನ್ನು ಕಿತ್ತೊಗೆಯಬೇಕೆಂದು ಮುಸ್ಲಿಂ ಮಹಿಳೆಯರೇ 7 ಅರ್ಜಿಗಳನ್ನು ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಈ ಮಹಿಳೆಯರಲ್ಲಿ ಕೆಲವರು ಫೇಸ್ ಬುಕ್ ಮತ್ತು ಟ್ವಿಟ್ಟರಲ್ಲಿ ವಿಚ್ಛೇದನಕ್ಕೊಳಗಾಗಿದ್ದಾರೆ.[ವಾರಾಣಸಿಯಲ್ಲಿ ಮುಸ್ಲಿಂ ಮಹಿಳೆಯರು ಹನುಮಾನ್ ಚಾಲಿಸಾ ಓದಿದ್ದೇಕೆ?]
ಸುಪ್ರೀಂ ಕೋರ್ಟ್ ತೀರ್ಪು ನೀಡಿದ ನಂತರ, ತಕ್ಕಂತೆ ಕಾನೂನು ತಿದ್ದುಪಡಿಯನ್ನು ಸಂಸದರು ತರಬೇಕಾಗುತ್ತದೆ. ತಲಾಖ್ ಮುಸ್ಲಿಂ ಧರ್ಮಕ್ಕೆ ಮೂಲಭೂತವಾಗಿದೆಯೆ ಎಂಬ ವಿಷಯದ ಬಗ್ಗೆ ಎರಡೂ ಬದಿಗಿನ ವಾದಗಳನ್ನು ಆಲಿಸಿದ ನಂತರ ನ್ಯಾಯಮೂರ್ತಿಗಳು ತೀರ್ಪು ನೀಡಲಿದ್ದಾರೆ.
1937ರಿಂದ ಮುಸ್ಲಿಂ ವೈಯಕ್ತಿಕ ಕಾನೂನು ಮಾತ್ರ ಮುಸ್ಲಿಂ ಸಮುದಾಯಕ್ಕೆ ಅನ್ವಯವಾಗುತ್ತದೆ. ಮೂರು ಬಾರಿ ತಲಾಖ್ ನೀಡುವುದು ಮೂಲಭೂತ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಎನ್ಡಿಎ ವಾದ ಮಂಡಿಸುತ್ತಲೇ ಇದೆ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications