ಹಿಂದೂ ದೇಗುಲ ಒಳಗೆ ಪ್ಯಾಂಟ್ ಬಿಚ್ಚಿ ಅಪವಿತ್ರ...!ಆರೋಪಿ & ತಂದೆ ಬಂಧನ: Video
ಪುಣೆ, ಮೇ 04: ಹಿಂದೂಗಳ ದೇವಾಲಯ ಮೇಲೆ ಕಲ್ಲು ತೂರಾಟ, ಮೆರವಣಿಗೆ ವೇಳೆ ಮಾಂಸ ಎಸೆತ, ದೇವಾಲಯ ಅಪವಿತ್ರಗೊಳಿಸುವ ಹಾಗೂ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಕೆಲ ಮಾಡುತ್ತಲೇ ಬರಲಾಗುತ್ತಿದೆ. ಇದೀಗ ಪುಣೆಯಲ್ಲಿ ಮತ್ತೊಂದು ಘಟನೆ ನಡೆದಿದೆ. ದೇವನಸ್ಥಾನದ ಒಳಗೆ ನುಗ್ಗಿ ಚಡ್ಡಿ ಬಿಚ್ಚಿ ಮಾಡಬಾರದ್ದು ಮಾಡಿ, ಅನ್ನಪೂರ್ಣ ದೇವಿಯ ವಿಗ್ರಹವನ್ನು ಅಪವಿತ್ರಗೊಳಿಸಿದ್ದಾನೆ. ಆರೋಪಿ ಹಾಗೂ ಆತನ ತಂದೆಯನ್ನು ಪೊಲೀಸರು ಶನಿವಾರ (ಮೇ 3) ಬಂಧಿಸಿದ್ದಾರೆ.
ಪುಣೆ ಜಿಲ್ಲೆಯ ಪೌಡ್ ಗ್ರಾಮದ ನಾಗೇಶ್ವರ ದೇವಸ್ಥಾನದಲ್ಲಿ ಅನ್ನಪೂರ್ಣ ದೇವಿಯ ವಿಗ್ರಹವನ್ನು ಅಪವಿತ್ರ ಮಾಡಲಾಗಿದೆ. ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆರೋಪದ ಮೇಲೆ ವ್ಯಕ್ತಿ ಮತ್ತು ಆತನ ಮಗನನ್ನು ಬಂಧಿಸಿರುವ ಬಗ್ಗೆ ಪೊಲೀಸರು ಖಚಿತಪಡಿಸಿದ್ದಾರೆ. ಈ ಸಂಬಂಧ ಪುಣೆಯ ಪೌಡ್ ಗ್ರಾಮದಲ್ಲಿ ಹಿಂದುಪರ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳಿಗೆ ತಕ್ಕ ಶಿಕ್ಷೆ ಆಗುವಂತೆ ಆಗ್ರಹಿಸಿದ್ದಾರೆ.

ಆರೋಪಿ ಯುವನ ಹೆಸರು, ವಯಸ್ಸಿನ ಮಾಹಿತಿ ಲಭ್ಯವಾಗಿಲ್ಲ. ಆತನ ತಂದೆ ನೌಶಾದ್ ಶೇಖ್ ಸೇರಿ (44) ಇಬ್ಬರನ್ನು ಬಂಧಿಸಿದ್ದನ್ನೂ ಪುಣೆ ಗ್ರಾಮೀಣ ಪೊಲೀಸರ ಹವೇಲಿ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಸುನಿಲ್ ಪೂಜಾರಿ ದೃಢಪಡಿಸಿದ್ದಾರೆ. ಪ್ರಕರಣದ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ವಿಭಾಗಗಳ ಅಡಿಯಲ್ಲಿ ಸೆಕ್ಷನ್ 196, 298, 299, 302, 351(2), ಮತ್ತು 3(5) ಅಡಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಸ್ಥಳದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿದೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಭದ್ರತಾ ಸಿಬ್ಬಂದಿ ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಅಗತ್ಯ ಎಚ್ಚರಿಕೆ ಕೈಗೊಳ್ಳಲಾಗಿದೆ ಎಂದು ಎಎನ್ಐ ವರದಿ ಮಾಡಿದೆ.
Any 'Secular' Here? Any 'Secular' Advices? pic.twitter.com/S2BKpobl0X
— BhikuMhatre (@MumbaichaDon) May 3, 2025
ವಿಡಿಯೋದಲ್ಲಿ ಏನಿದೆ?
ವಿಡಿಯೋದಲ್ಲಿ ಆರೋಪಿ ಯುವಕ ನಂದಿ, ಶಿವನ ಇರುವ ನಾಗೇಶ್ವರ ದೇವ್ಥಾನದ ಒಳಕ್ಕೆ ಹೋಗುತ್ತಾರೆ. ಗರ್ಭಗುಡಿಯಲ್ಲಿ ಪ್ಯಾಂಟ್, ಚಡ್ಡಿ ಬಿಚ್ಚಿ ಮೂತ್ರ ವಿಸರ್ಜನೆ ರೀತಿಯಲ್ಲಿ ಕೂರುತ್ತಾನೆ. ನಂತರ ಉದ್ದ ಮಲಗಿದ್ದಾನೆ ದೇವಸ್ಥಾನದಲ್ಲಿ ಅಸಹ್ಯಕರವಾಗಿ ವರ್ತಿಸಿದ್ದಾರೆ. ಈ ಮೂಲಕ ದೇವಾಲದ ಪಾವಿತ್ರ್ಯತೆಗೆ ಧಕ್ಕೆ ತಂದಿದ್ದಾನೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications