ಆಂಬ್ಯುಲೆನ್ಸ್ ನಿರಾಕರಿಸಿದ ಸರ್ಕಾರಿ ಆಸ್ಪತ್ರೆ: ಮಗಳ ಮೃತದೇಹ ಬೈಕ್ ಮೇಲೆ ಸಾಗಿಸಿದ ತಂದೆ
ಭೋಪಾಲ್, ಮೇ. 17: ಮಧ್ಯಪ್ರದೇಶದ ಶಹದೋಲ್ನ ಸರ್ಕಾರಿ ಆಸ್ಪತ್ರೆಯೊಂದು ಆಂಬ್ಯುಲೆನ್ಸ್ ನಿರಾಕರಿಸಿದ ಕಾರಣ ತಂದೆಯೊಬ್ಬರು ತಮ್ಮ ಮಗಳ ಮೃತದೇಹವನ್ನು ಬೈಕ್ ಮೇಲೆಯೇ ತಮ್ಮ ಹಳ್ಳಿಗೆ ತೆಗೆದುಕೊಂಡು ಹೋಗಿರುವ ಮನಮಿಡಿಯುವ ಘಟನೆ ವರದಿಯಾಗಿದೆ. ಘಟನೆಗೆ ಸಾಮಾಜಿಕ ಜಾಲತಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.
ಶಹದೋಲ್ನಿಂದ 70 ಕಿಮೀ ದೂರದಲ್ಲಿರುವ ಕೋಟಾ ಗ್ರಾಮದ ನಿವಾಸಿ ಲಕ್ಷ್ಮಣ್ ಸಿಂಗ್ ಅವರು, ಸೋಮವಾರ ರಾತ್ರಿ ಅವರ 13 ವರ್ಷದ ಮಗಳು ಮಾಧುರಿ ಕುಡಗೋಲು ರಕ್ತಹೀನತೆಯಿಂದ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ತೆಗೆದುಕೊಂಡು ಹೋಗಲು ಆಸ್ಪತ್ರೆಯ ಅಧಿಕಾರಿಗಳನ್ನು ವಾಹನಕ್ಕಾಗಿ ಕೇಳಿದ್ದೆವು ಆದರೆ 15 ಕಿ.ಮೀಗೂ ಹೆಚ್ಚು ದೂರದ ಸ್ಥಳಗಳಿಗೆ ವಾಹನಗಳು ಲಭ್ಯವಿಲ್ಲ ಎಂದು ತಿಳಿಸಲಾಯಿತು ಎಂದು ಹೇಳಿದ್ದಾರೆ.

"ನಾವು ಆಸ್ಪತ್ರೆಯಲ್ಲಿ ಶವ ವಾಹನವನ್ನು ಕೇಳಿದ್ದೆವು. ಆದರೆ ಅದು 15 ಕಿಮೀಗಿಂತ ಹೆಚ್ಚು ಲಭ್ಯವಿರುವುದಿಲ್ಲ ಎಂದು ಅವರು ಹೇಳಿದರು. ತಾವೇ ವ್ಯವಸ್ಥೆ ಮಾಡುವಂತೆ ಹೇಳಿದರು. ಹಣದ ಕೊರತೆಯಿಂದಾಗಿ ನಾವು ನಮ್ಮ ಮಗಳ ಮೃತ ದೇಹವನ್ನು ಬೈಕ್ನಲ್ಲಿ ತೆಗೆದುಕೊಂಡು ಹೋಗಿದ್ದೇವೆ" ಎಂದು ಲಕ್ಷ್ಮಣ್ ಸಿಂಗ್ ಹೇಳಿದ್ದಾರೆ.
ಶಹದೋಲ್ ಜಿಲ್ಲಾಧಿಕಾರಿ ವಂದನಾ ವೈದ್ಯ ಅವರು ತಮ್ಮ ಗ್ರಾಮದಿಂದ ಸುಮಾರು 20 ಕಿಮೀ ದೂರದಲ್ಲಿದ್ದರು. ಮತ್ತೊಂದು ಗ್ರಾಮಕ್ಕೆ ತೆರಳುತ್ತಿದ್ದ ಜಿಲ್ಲಾಧಿಕಾರಿ ವಂದನಾ ವೈದ್ಯ ಅವರು ಮಗಳ ಮೃತದೇಹವನ್ನು ತಮ್ಮ ಗ್ರಾಮಕ್ಕೆ ಕೊಂಡೊಯ್ಯಲು ಸಹಾಯ ಮಾಡಿದ್ದಾರೆ. ಹೀಗಾಗಿ ಅಂತಿಮ ವಿಧಿಗಳಿಗಾಗಿ ಮಗಳ ದೇಹವನ್ನು ಮನೆಗೆ ಕೊಂಡೊಯ್ಯಲು ಸಾಧ್ಯವಾಯಿತು ಎಂದು ತಿಳಿಸಿದ್ದಾರೆ

ಶಹದೋಲ್ ಜಿಲ್ಲಾಧಿಕಾರಿ ವಂದನಾ ವೈದ್ಯ ಕುಟುಂಬಕ್ಕೆ ಸ್ವಲ್ಪ ಆರ್ಥಿಕ ಸಹಾಯವನ್ನು ಒದಗಿಸಿದ್ದು, ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications