ಪೊಲೀಸರು ಸುತ್ತುವರೆದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ರೌಡಿಗಳು
ತಮ್ಮ ಅಡಗುದಾಣ ಸುತ್ತುವರಿದ ಪೊಲೀಸರಿಗೆ ಸಿಕ್ಕಿಬೀಳುವ ಭಯದಲ್ಲಿ ಮೂವರು ರೌಡಿಗಳ ಆತ್ಮಹತ್ಯೆ. ಹರ್ಯಾಣದ ಗ್ರಾಮವೊಂದರಲ್ಲಿ ನಡೆದ ಘಟನೆ. ಮೊದಲು ಪೊಲೀಸರೊಂದಿಗೆ ಗುಂಡಿನ ಚಕಮಕಿ ನಡೆಸಿದ್ದ ರೌಡಿಗಳು.
ಚಂಡೀಗಢ, ಜೂನ್ 13: ತಮ್ಮನ್ನು ಬಂಧಿಸಲು ಬಂದಿದ್ದ ಪೊಲೀಸರ ಪಡೆಯೊಂದು ತಮ್ಮ ಅಡಗುದಾಣವನ್ನು ಸುತ್ತುವರಿದ ಹಿನ್ನೆಲೆಯಲ್ಲಿ ಮೂವರು ಕುಖ್ಯಾತ ರೌಡಿಗಳು ತಮಗೆ ತಾವೇ ಗುಂಡು ಹಾರಿಸಿಕೊಂಡು ಸತ್ತು ಹೋಗಿರುವ ಘಟನೆ ಮಂಗಳವಾರ ಬೆಳಗ್ಗೆ ಹರ್ಯಾಣದ ಸಿರ್ಸಾ ಜಿಲ್ಲೆಯ ಗ್ರಾಮದಲ್ಲಿ ನಡೆದಿದೆ.
ಫರೀದಾಕೋಟ್ನ ಜಸ್ಪ್ರೀತ್ ಸಿಂಗ್ ಅಲಿಯಾಸ್ ಜಂಪಿ, ಬಂಟಿ ದಿಲ್ಲೋನ್ ಹಾಗೂ ನಿಶಾನ್ ಸಿಂಗ್ ಮೃತರು.
ಈ ಮೂವರು ಗ್ರಾಮವೊಂದರ ಮನೆಯಲ್ಲಿ ಅಡಗಿದ್ದರು. ಖಚಿತ ಮಾಹಿತಿಯ ಮೇರೆಗೆ ಇವರ ಅಡಗುದಾಣದ ಮೇಲೆ ಪೊಲೀಸರು ಮಂಗಳವಾರ ಬೆಳಗ್ಗೆ ದಾಳಿ ನಡೆಸಿದರು. ಹರ್ಯಾಣ ಮತ್ತು ಪಂಜಾಬ್ ಪೊಲೀಸರು ಜಂಟಿಯಾಗಿ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಪೊಲೀಸರು ರೌಡಿಗಳಿದ್ದ ಮನೆಯನ್ನು ಸುತ್ತುವರಿದು ಶರಣಾಗುವಂತೆ ಸೂಚಿಸಿದ್ದರು. ಆದರೆ, ರೌಡಿಗಳು ಪೊಲೀಸರ ಮೇಲೆ ಗುಂಡು ಹಾರಿಸಲು ಆರಂಭಿಸಿದರು. ಇದಕ್ಕೆ ಪ್ರತಿಯಾಗಿ ಪೊಲೀಸರಿಂದಲೂ ಗುಂಡು ಹಾರಿದವು. ಇದರಿಂದಾಗಿ, ಕೆಲಕಾಲ ಗುಂಡಿನ ಚಕಮಕಿ ನಡೆಯಿತು.
ಆದರೆ, ಬರಬರುತ್ತಾ ರೌಡಿಗಳ ಬಳಿಯಿದ್ದ ಗುಂಡುಗಳ ದಾಸ್ತಾನು ಖಾಲಿಯಾಗತೊಡಗಿತು. ಇನ್ನು, ತಮ್ಮಲ್ಲಿನ ಗುಂಡು ಖಾಲಿಯಾದರೆ, ತಾವು ಪೊಲೀಸರ ಬಲೆಗೆ ಬೀಳುವುದು ಖಚಿತ ಎಂದು ತಿಳಿದ ಆ ರೌಡಿಗಳು ತಮ್ಮ ಪಿಸ್ತೂಲುಗಳನ್ನು ಉಪಯೋಗಿಸಿ ತಾವೇ ತಾವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆಯೊಳಗಿದ್ದ ರೌಡಿಗಳು ತಮಗೆ ತಾವೇ ಗುಂಡಿಟ್ಟುಕೊಂಡಿದ್ದನ್ನು ಗಮನಿಸಿದ ಪೊಲೀಸರು ತಕ್ಷಣ ಮನೆಯ ಬಾಗಿಲು ಒಡೆದು ಒಳ ಪ್ರವೇಶಿದ್ದಾರೆ. ಆದರೆ, ಅಷ್ಟರಲ್ಲಿ ಬಂಟಿ ಮತ್ತು ಜಸ್ಪ್ರೀತ್ ಸ್ಥಳದಲ್ಲೇ ಮೃತಪಟ್ಟಿದ್ದರು. ಮತ್ತೊಬ್ಬ ರೌಡಿ, ನಿಶಾನ್ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಕೊನೆಯುಸಿರೆಳೆದಿದ್ದಾನೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications