ಸ್ವಧರ್ಮಿಯರಿಂದ ಕಿರುಕುಳ, ಬೇಸತ್ತು ಹಿಂದೂ ಧರ್ಮಕ್ಕೆ ಮತಾಂತರ
ಪಾಟ್ನಾ, ಜುಲೈ 06: ಮುಸ್ಲಿಂ ವಕೀಲರೊಬ್ಬರ ಕುಟುಂಬವೊಂದು ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಘಟನೆ, ಬಿಹಾರಾ ಬೆಗುಸರಾಯಿ ಜಿಲ್ಲೆಯಲ್ಲಿ ವರದಿಯಾಗಿದೆ. ಇಸ್ಲಾಂ ಧರ್ಮವನ್ನು ತೊರೆಯಲು ಮುಖ್ಯ ಕಾರಣ, ನೆರೆ ಮನೆಯವರ ಕಿರುಕುಳ ಎನ್ನಲಾಗಿದೆ.
ಮೊಹಮ್ಮದ್ ಅನ್ವರ್ (46) ಅವರ ಮೇಲೆ ಷರಿಯಾ ಕಾನೂನು ಹೇರಿಕೆ ಮಾಡಲಾಗಿತ್ತು. ಇದನ್ನು ವಿರೋಧಿಸಿದ ಅನ್ವರ್ ಅವರಿಗೆ ಬೆದರಿಕೆ, ಕಿರುಕುಳ ಆರಂಭವಾಗಿತ್ತು. ಇದರಿಂದ ಬೇಸತ್ತ ವಕೀಲ ಅನ್ವರ್ ಹಾಗೂ ಅವರ ಪುತ್ರರಾದ ಮೊಹಮ್ಮದ್ ಅಮೀರ್ (11) ಹಾಗೂ ಮೊಹಮ್ಮದ್ ಶಬೀರ್ (9) ಅವರು ಹಿಂದೂ ಧರ್ಮವನ್ನು ಒಪ್ಪಿಕೊಂಡಿದ್ದಾರೆ.

ವಕೀಲ ಅನ್ವರ್ ಅವರ ಹೆಸರು ಈಗ ಆನಂದ್ ಭಾರತಿ ಹಾಗೂ ಮಕ್ಕಳ ಹೆಸರು ಅಮನ್ ಭಾರತಿ ಹಾಗೂ ಸುಮನ್ ಭಾರತಿ ಎಂದಾಗಿದೆ. ವಿಶೇಷವೆಂದರೆ, ಅನ್ವರ್ ಅವರ ಪತ್ನಿ ಶಬನಮ್ ಅವರು ಇನ್ನೂ ಮತಾಂತರ, ಧರ್ಮಾಂತರವಾಗಿಲ್ಲ. ನಂತರ ಅವರು ಹಿಂದೂ ಧರ್ಮ ಒಪ್ಪಿಕೊಳ್ಳಲಿದ್ದಾರೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ನಾನು ಹಾಗೂ ನನ್ನ ಕುಟುಂಬ ದೇಗುಲ ಹಾಗೂ ಮಸೀದಿ ಎರಡಕ್ಕೂ ಹೋಗುತ್ತಿದ್ದೆವು. ಅದರೆ, ಹಿಂದೂಗಳ ಆಯೋಜನೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ ನಿರ್ಬಂಧ ಹೇರಲಾಯಿತು. ವಿಧಿ ಇಲ್ಲದೆ, ಬಜರಂಗ ದಳದ ನೆರವು ಕೋರಿದೆ. ಹಿಂದೂ ಎಂದರೆ ಮತ, ಜಾತಿ, ಪಂಥವಲ್ಲ, ಅದೊಂದು ಧರ್ಮ, ಜೀವನ ಶೈಲಿ ಎಂದು ನನಗೆ ಮನವರಿಕೆ ಮಾಡಿಕೊಟ್ಟರು. ಸ್ವಇಚ್ಛೆಯಿಂದ ಹಿಂದೂ ಧರ್ಮವನ್ನು ಪಾಲಿಸಲು ತೊಡಗಿದ್ದೇನೆ ಎಂದು ಅನ್ವರ್ ಅಲಿಯಾಸ್ ಆನಂದ್ ಹೇಳಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications