ಭಾರತದ ಸಂವಿಧಾನ ಮೂಲ ದಾಖಲೆಯಲ್ಲಿ ಶ್ರೀರಾಮಚಂದ್ರ
ನವದೆಹಲಿ, ಆ.5: ಆಯೋಧ್ಯೆಯಲ್ಲಿ ಶ್ರೀರಾಮ ಚಂದ್ರ ಮಂದಿರ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನಡೆಯುತ್ತಿರುವ ಸಂದರ್ಭದಲ್ಲೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ವಿಶೇಷವಾದ ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ.
ಈ ಶುಭ ಸಂದರ್ಭದಲ್ಲಿ ಈ ಚಿತ್ರ ಹಂಚಿಕೊಳ್ಳುವ ಮನಸ್ಸಾಯಿತು ಎಂದಿರುವ ರವಿಶಂಕರ್ ಪ್ರಸಾದ್ ಅವರು ಹಂಚಿಕೊಂಡಿದ್ದು ಶ್ರೀರಾಮ ಚಂದ್ರನ ವಿಶೇಷ ಚಿತ್ರ.
Original document of the Constitution of India has a beautiful sketch of Lord Ram, Mata Sita and Laxman returning to Ayodhya after defeating Ravan.
— Ravi Shankar Prasad (@rsprasad) August 5, 2020
This is available at the beginning of the chapter related to Fundamental Rights.
Felt like sharing this with you all.#JaiShriRam pic.twitter.com/jCV9d8GWTO
ಭಾರತೀಯ ಸಂವಿಧಾನದ ಮೂಲ ಪ್ರತಿ, ದಾಖಲೆಯ ಮೇಲ್ಭಾಗದಲ್ಲಿ ಶ್ರೀರಾಮಚಂದ್ರನ ಚಿತ್ರವಿದೆ. ಲಂಕೆಯಲ್ಲಿ ರಾವಣನನ್ನು ಕೊಂದ ಶ್ರೀರಾಮ, ಮಾತಾ ಸೀತಾ, ಸೋದರ ಲಕ್ಷ್ಮಣನ ಜೊತೆಗೆ ಅಯೋಧ್ಯೆಗೆ ಹಿಂತಿರುಗುತ್ತಿರುವ ಚಿತ್ರ ಇದಾಗಿದೆ ಎಂದು ರವಿಶಂಕರ್ ಪ್ರಸಾದ್ ಟ್ವೀಟ್ ಮಾಡಿದ್ದಾರೆ.

ಭಾರತದಲ್ಲಿ ಪಾಲನೆಯಾಗಬೇಕಿರುವ ಮೂಲಭೂತ ಹಕ್ಕುಗಳ ಅಧ್ಯಾಯ ಆರಂಭಕ್ಕೂ ಮುನ್ನ ಕಾಣುವ ಈ ಚಿತ್ರವನ್ನು ಈ ಕ್ಷಣ ಹಂಚಿಕೊಳ್ಳುವ ಮನಸ್ಸಾಯಿತು ಎಂದು ಹೇಳಿದರು. ರಾಮಲಲ್ಲಾಗೆ ರಾಮ ಜನ್ಮ ಭೂಮಿ ಆಸ್ತಿ ದೊರಕಿಸಿಕೊಡಲು ನಡೆಸಿದ ಕಾನೂನು ಹೋರಾಟದಲ್ಲಿ ರವಿಶಂಕರ್ ಪ್ರಸಾದ್ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂಬುದನ್ನು ಮರೆಯುವಂತಿಲ್ಲ.
ಆರ್ಎಸ್ಎಸ್ ಸರಸಂಘಚಾಲಕ ಮೋಹನ್ ಭಾಗವತ್ , ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿ ಸಾಧು ಸಂತರು, ಗಣ್ಯಾತಿಗಣ್ಯರ ಸಮ್ಮುಖದಲ್ಲಿ ಶುಭ ಲಗ್ನದಲ್ಲಿ ಪ್ರಧಾನಿ ಮೋದಿ ಅವರು ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನೆರವೇರಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications