Get Updates
Get notified of breaking news, exclusive insights, and must-see stories!

ಭಾರತದ ಸಂವಿಧಾನ ಮೂಲ ದಾಖಲೆಯಲ್ಲಿ ಶ್ರೀರಾಮಚಂದ್ರ

ನವದೆಹಲಿ, ಆ.5: ಆಯೋಧ್ಯೆಯಲ್ಲಿ ಶ್ರೀರಾಮ ಚಂದ್ರ ಮಂದಿರ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನಡೆಯುತ್ತಿರುವ ಸಂದರ್ಭದಲ್ಲೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ವಿಶೇಷವಾದ ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ.

ಈ ಶುಭ ಸಂದರ್ಭದಲ್ಲಿ ಈ ಚಿತ್ರ ಹಂಚಿಕೊಳ್ಳುವ ಮನಸ್ಸಾಯಿತು ಎಂದಿರುವ ರವಿಶಂಕರ್ ಪ್ರಸಾದ್ ಅವರು ಹಂಚಿಕೊಂಡಿದ್ದು ಶ್ರೀರಾಮ ಚಂದ್ರನ ವಿಶೇಷ ಚಿತ್ರ.

ಭಾರತೀಯ ಸಂವಿಧಾನದ ಮೂಲ ಪ್ರತಿ, ದಾಖಲೆಯ ಮೇಲ್ಭಾಗದಲ್ಲಿ ಶ್ರೀರಾಮಚಂದ್ರನ ಚಿತ್ರವಿದೆ. ಲಂಕೆಯಲ್ಲಿ ರಾವಣನನ್ನು ಕೊಂದ ಶ್ರೀರಾಮ, ಮಾತಾ ಸೀತಾ, ಸೋದರ ಲಕ್ಷ್ಮಣನ ಜೊತೆಗೆ ಅಯೋಧ್ಯೆಗೆ ಹಿಂತಿರುಗುತ್ತಿರುವ ಚಿತ್ರ ಇದಾಗಿದೆ ಎಂದು ರವಿಶಂಕರ್ ಪ್ರಸಾದ್ ಟ್ವೀಟ್ ಮಾಡಿದ್ದಾರೆ.

Felt like sharing it: An image of Lord Ram in the Indian Constitution

ಭಾರತದಲ್ಲಿ ಪಾಲನೆಯಾಗಬೇಕಿರುವ ಮೂಲಭೂತ ಹಕ್ಕುಗಳ ಅಧ್ಯಾಯ ಆರಂಭಕ್ಕೂ ಮುನ್ನ ಕಾಣುವ ಈ ಚಿತ್ರವನ್ನು ಈ ಕ್ಷಣ ಹಂಚಿಕೊಳ್ಳುವ ಮನಸ್ಸಾಯಿತು ಎಂದು ಹೇಳಿದರು. ರಾಮಲಲ್ಲಾಗೆ ರಾಮ ಜನ್ಮ ಭೂಮಿ ಆಸ್ತಿ ದೊರಕಿಸಿಕೊಡಲು ನಡೆಸಿದ ಕಾನೂನು ಹೋರಾಟದಲ್ಲಿ ರವಿಶಂಕರ್ ಪ್ರಸಾದ್ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂಬುದನ್ನು ಮರೆಯುವಂತಿಲ್ಲ.

ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ್ ಭಾಗವತ್ , ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿ ಸಾಧು ಸಂತರು, ಗಣ್ಯಾತಿಗಣ್ಯರ ಸಮ್ಮುಖದಲ್ಲಿ ಶುಭ ಲಗ್ನದಲ್ಲಿ ಪ್ರಧಾನಿ ಮೋದಿ ಅವರು ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನೆರವೇರಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+