ರಸಗೊಬ್ಬರ ಕಂಪನಿಗಳಿಂದ ಪ್ರತಿನಿತ್ಯ 50 ಮೆಟ್ರಿಕ್ ಟನ್ ವೈದ್ಯಕೀಯ ಆಮ್ಲಜನಕ ಉತ್ಪಾದನೆ
ನವದೆಹಲಿ, ಏಪ್ರಿಲ್ 28: ಭಾರತದಲ್ಲಿ ಕೊರೊನಾ ಎರಡನೇ ಅಲೆಯಲ್ಲಿ ಅತಿ ಹೆಚ್ಚಿನ ಕೊರೊನಾ ಪ್ರಕರಣಗಳು ದಾಖಲಾಗುತ್ತಿದ್ದು, ಆಸ್ಪತ್ರೆಗೆ ಅಧಿಕ ಮಂದಿ ದಾಖಲಾಗುತ್ತಿರುವುದರಿಂದ ವೈದ್ಯಕೀಯ ಆಮ್ಲಜನಕದ ಕೊರತೆ ತೀವ್ರವಾಗಿದೆ. ದೇಶ ವಿದೇಶದ ಹಲವೆಡೆಯಿಂದ ಆಮ್ಲಜನಕ ನೆರವು ಸಿಗುತ್ತಿದ್ದರೂ ಈಗಿರುವ ಬೇಡಿಕೆ ಮಟ್ಟವನ್ನು ತಲುಪಲಾಗುತ್ತಿಲ್ಲ.
ಹೀಗಾಗಿ ತಮ್ಮ ರಸಗೊಬ್ಬರ ಉತ್ಪಾದನಾ ಘಟಕಗಳಲ್ಲಿ ಆಮ್ಲಜನಕ ಉತ್ಪಾದನೆಯ ಸಾಧ್ಯತೆಗಳ ಕುರಿತು ಚರ್ಚೆ ನಡೆಸಲು ರಸಗೊಬ್ಬರ ತಯಾರಿಕೆಯ ಸಾರ್ವಜನಿಕ ವಲಯ, ಖಾಸಗಿ ವಲಯ ಹಾಗೂ ಕೋ ಆಪರೇಟಿವ್ ವಲಯಗಳ ಕಂಪನಿಗಳೊಂದಿಗೆ ರಾಸಾಯನಿಕ ಹಾಗೂ ರಸಗೊಬ್ಬರ ರಾಜ್ಯ ಖಾತೆ ಸಚಿವ ಮನ್ಸುಖ್ ಮಾಂಡವೀಯ ಬುಧವಾರ ಸಭೆ ನಡೆಸಿದ್ದಾರೆ.
ದೇಶ ಇಂಥ ಬಿಕ್ಕಟ್ಟಿನ ಸಮಯದಲ್ಲಿ ಆಮ್ಲಜನಕ ಉತ್ಪಾದನಾ ಸಾಮರ್ಥ್ಯವನ್ನು ಹಿಗ್ಗಿಸಿಕೊಳ್ಳಬೇಕಿದೆ. ರಸಗೊಬ್ಬರ ಕಂಪನಿಗಳು ಈ ಸಾಂಕ್ರಾಮಿಕದ ವಿರುದ್ಧದ ದೇಶದ ಹೋರಾಟಕ್ಕೆ ಕೈಜೋಡಿಸಬೇಕಿದೆ. ರಸಗೊಬ್ಬರ ಕಂಪನಿಗಳು ಆಮ್ಲಜನಕ ಉತ್ಪಾದನೆಯ ನಿಟ್ಟಿನಲ್ಲಿ ಯೋಜಿಸಿ, ಆಮ್ಲಜನಕವನ್ನು ತುರ್ತು ಪೂರೈಕೆ ಮಾಡಿ ಸಮಾಜಕ್ಕೆ ಸಹಾಯ ಮಾಡಬೇಕು ಎಂದು ರಸಗೊಬ್ಬರ ಕಂಪನಿಗಳಿಗೆ ಸಚಿವರು ಕರೆ ನೀಡಿದ್ದಾರೆ.

ರಸಗೊಬ್ಬರ ಕಂಪನಿಗಳು ಈ ನಡೆಯನ್ನು ಸ್ವಾಗತಿಸಿದ್ದು, ಕೊರೊನಾ ಬಿಕ್ಕಟ್ಟಿನ ವಿರುದ್ಧ ಹೋರಾಡಲು ಸರ್ಕಾರದ ಪ್ರಯತ್ನಗಳಿಗೆ ಬೆಂಬಲ ನೀಡುವುದಾಗಿ ಘೋಷಿಸಿವೆ. ರಸಗೊಬ್ಬರ ಘಟಕಗಳಿಂದ ಕೊರೊನಾ ರೋಗಿಗಳಿಗೆ ದಿನನಿತ್ಯ 50 ಮೆಟ್ರಿಕ್ ಟನ್ ವೈದ್ಯಕೀಯ ಆಮ್ಲಜನಕವನ್ನು ನಿರೀಕ್ಷಿಸಬಹುದು ಎಂದು ಸಭೆಯಲ್ಲಿ ನಿರ್ಧಾರಕ್ಕೆ ಬರಲಾಗಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications