ಅಜ್ಞಾತವಾಸದಿಂದ ವರ್ಮಾ ರಿಟರ್ನ್, ರಜನಿ ಬಗ್ಗೆ ಟ್ವೀಟ್
Recommended Video

ಬೆಂಗಳೂರು, ಜನವರಿ 02: ಜನಪ್ರಿಯ, ವಿವಾದಾತ್ಮಕ ಚಿತ್ರಕರ್ಮಿ ರಾಮ್ ಗೋಪಾಲ್ ವರ್ಮಾ ಅವರು ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ಗೆ ರೀ ಎಂಟ್ರಿ ಕೊಟ್ಟಿದ್ದಾರೆ.
ಟ್ವಿಟ್ಟರ್ ಗೆ ಬಂದ ವರ್ಮಾ, ಸೂಪರ್ ಸ್ಟಾರ್ ರಜನಿಕಾಂತ್ ಅವರ ರಾಜಕೀಯ ಪ್ರವೇಶದ ಬಗ್ಗೆ ಟ್ವೀಟ್ ಮಾಡಿದ್ದಾರೆ. ರಜನಿಕಾಂತ್ ಅವರು ರಾಜಕೀಯಕ್ಕೆ ಎಂಟ್ರಿ ಕೊಟ್ಟಿರುವುದನ್ನು ಸ್ವಾಗತಿಸಿದ್ದಾರೆ. ಮುಂದಿನ ದಿನಗಳಲ್ಲಿ ತಮಿಳುನಾಡಿನ ಎಲ್ಲ ಜನರು ರಜನಿಗೆ ಮಾತ್ರ ವೋಟ್ ಮಾಡಲಿದ್ದಾರೆ ಎಂದಿದ್ದಾರೆ.
ಬಾಲಿವುಡ್, ಕಾಲಿವುಡ್, ಟಾಲಿವುಡ್ ನಲ್ಲಿ ಜನಪ್ರಿಯ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿರುವ ರಾಮ್ ಗೋಪಾಲ್ ವರ್ಮಾ ಅವರು ವಿವಾದಾತ್ಮಕ ಟ್ವೀಟ್ ಮಾಡುವುದರಲ್ಲಿ ಎತ್ತಿದ ಕೈ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಅಪರಾಧಿ ಎನಿಸಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವುದನ್ನು ಲೇವಡಿ ಮಾಡಿ ಟ್ವೀಟ್ ಮಾಡಿದ್ದು ಭಾರಿ ಸುದ್ದಿಯಾಗಿತ್ತು.

ಬೆಂಗಳೂರು ಈಗ ತಮಿಳುನಾಡಿನ ರಾಜಧಾನಿ
ಜಯಲಲಿತಾ ಜೈಲು ಪಾಲಾಗಿರುವುದು ಹಾಗೂ ಅವರ ಅಭಿಮಾನಿಗಳ ಅತಿರೇಕದ ವರ್ತನೆ ಬಗ್ಗೆ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದರು.
ಪರಪ್ಪನ ಅಗ್ರಹಾರವೇ ಆಡಳಿತ ಕೇಂದ್ರವಾಗಿದೆ. ಭಾರತ ಒಂದಾಗಿದೆ ಅನ್ನೋದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕಿಲ್ಲ' ಎಂಬರ್ಥದಲ್ಲಿ ಟ್ವೀಟ್ ಮಾಡಿ, ಬೆಂಗಳೂರು ಈಗ ತಮಿಳುನಾಡಿನ ರಾಜಧಾನಿಯಾಗಿಬಿಟ್ಟಿದೆ ಎಂದಿದ್ದರು.
|
ರಜನಿ ಬಗ್ಗೆ ಈ ಹಿಂದೆ ಕೂಡಾ ಟ್ವೀಟ್
ಟ್ವಿಟ್ಟರ್ ಅಜ್ಞಾತವಾಸಕ್ಕೆ ಒಳಗಾಗಿದ್ದ ನಾನು ಪವನ್ ಕಲ್ಯಾಣ್ ಅವರ ಅಜ್ಞಾತವಾಸಿ ಚಿತ್ರದಿಂದ ಸ್ಫೂರ್ತಿಗೊಂಡು ಮತ್ತೆ ಬಂದಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಈ ಹಿಂದೆ ಕೋಟಿಗೊಬ್ಬ 2 ಚಿತ್ರದ ನಟನೆಗಾಗಿ ಕಿಚ್ಚ ಸುದೀಪ್ ರನ್ನು ಹೊಗಳಿದ್ದ ವರ್ಮಾ ಅವರು ಈ ರೀತಿ ವೈವಿಧ್ಯ ಪಾತ್ರ ರಜನಿ ಕೂಡಾ ಮಾಡಿಲ್ಲ ಎಂದಿದ್ದರು.
|
ರಜನಿ ರಾಜಕೀಯ ಪ್ರವೇಶದ ಬಗ್ಗೆ
ಟ್ವಿಟ್ಟರ್ ಗೆ ಬಂದ ವರ್ಮಾ, ಸೂಪರ್ ಸ್ಟಾರ್ ರಜನಿಕಾಂತ್ ಅವರ ರಾಜಕೀಯ ಪ್ರವೇಶದ ಬಗ್ಗೆ ಟ್ವೀಟ್ ಮಾಡಿದ್ದಾರೆ. ರಜನಿಕಾಂತ್ ಅವರು ರಾಜಕೀಯಕ್ಕೆ ಎಂಟ್ರಿ ಕೊಟ್ಟಿರುವುದನ್ನು ಸ್ವಾಗತಿಸಿದ್ದಾರೆ. ಮುಂದಿನ ದಿನಗಳಲ್ಲಿ ತಮಿಳುನಾಡಿನ ಎಲ್ಲ ಜನರು ರಜನಿಗೆ ಮಾತ್ರ ವೋಟ್ ಮಾಡಲಿದ್ದಾರೆ ಎಂದಿದ್ದಾರೆ.
|
ವರ್ಮಾ ಟ್ವೀಟ್ ಗೆ ಟಾಂಗ್
ರಜನಿ ಎಂಟ್ರಿ ಏನು ಥಂಡರ್ ಆಗಿಲ್ಲ. ನರಿ ಥರಾ ಎಂಟ್ರಿಕೊಡುತ್ತಿದ್ದಾರೆ. ಜಯಲಲಿತಾ ಅವರು ಬದುಕಿದ್ದಾಗ ರಜನಿ ರಾಜಕೀಯ ಪ್ರವೇಶಿಸಬೇಕಿತ್ತು. ಚಿರಂಜೀವಿ ಅವರು ವೈ ಎಸ್ ಆರ್ ಬದುಕಿದ್ದಾಗ ರಾಜಕೀಯ ಎಂಟ್ರಿ ಪಡೆದರು. ಚಿರು ಸೋತರೂ ಅವರ ಎಂಟ್ರಿಯಲ್ಲಿ ಧಮ್ ಇತ್ತು.
|
ನೀವು ಯಾಕೆ ರಾಜಕೀಯ ಸೇರಬಾರದು
ವರ್ಮಾ ಅವರೇ ನೀವು ಯಾಕೆ ರಾಜಕೀಯ ಸೇರಬಾರದು ಅಥವಾ ಹೊಸ ಪಕ್ಷ ಕಟ್ಟಬಾರದು. ಸ್ಟಾರ್ ಗಳನ್ನು ಪ್ರಶ್ನಿಸುವ ನೀವು ಪಕ್ಷ ಕಟ್ಟಿದರೆ ಚೆನ್ನಾಗಿರುತ್ತದೆ ಎಂದು ಸಲಹೆ ನೀಡಿದ ಫ್ಯಾನ್ಸ್.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು












Click it and Unblock the Notifications