ಬೇರೆ ಮಹಿಳೆಯೊಂದಿಗೆ ಸಿಕ್ಕಿಬಿದ್ದ ನಿರ್ಮಾಪಕ; ಪತ್ನಿಯ ಮೇಲೆ ಕಾರು ಹರಿಸಿದ!
ಮುಂಬೈ, ಅ. 27: ಬೇರೆ ಮಹಿಳೆಯೊಂದಿಗೆ ಕಾರಿನಲ್ಲಿ ಸಿಕ್ಕಿಬಿದ್ದ ಹಿಂದಿ ಸಿನಿಮಾ ನಿರ್ಮಾಪಕರೊಬ್ಬರು ತಮ್ಮ ಪತ್ನಿ ಮೇಲೆ ಕಾರು ಹರಿಸಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಚಲನಚಿತ್ರ ನಿರ್ಮಾಪಕ ಕಮಲ್ ಕಿಶೋರ್ ಮಿಶ್ರಾ ಅವರು ತಮ್ಮ ವಾಹನದಲ್ಲಿ ಮತ್ತೊಬ್ಬ ಮಹಿಳೆಯೊಂದಿಗೆ ಇರುವುದನ್ನು ಕಂಡ ಅವರ ಪತ್ನಿಗೆ ಕಾರಿನಿಂದ ಡಿಕ್ಕಿ ಹೊಡೆದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಕ್ಟೋಬರ್ 19 ರಂದು ಉಪನಗರ ಅಂಧೇರಿಯಲ್ಲಿ (ಪಶ್ಚಿಮ) ವಸತಿ ಕಟ್ಟಡದ ಪಾರ್ಕಿಂಗ್ ಪ್ರದೇಶದಲ್ಲಿ ನಡೆದ ಘಟನೆಯಲ್ಲಿ ಕಮಲ್ ಮಿಶ್ರಾ ಅವರ ಪತ್ನಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂಬೋಲಿ ಪೊಲೀಸ್ ಠಾಣೆಯ ಅಧಿಕಾರಿ ಪ್ರಕಾರ, ಚಿತ್ರ ನಿರ್ಮಾಪಕನ ಪತ್ನಿ ತನ್ನ ಪತಿ ವಿರುದ್ಧ ದೂರು ದಾಖಲಿಸಿದ್ದಾರೆ. ನಿರ್ಮಾಪಕ ಕಮಲ್ ಮಿಶ್ರಾ ತನ್ನ ಕಾರಿನಿಂದ ಡಿಕ್ಕಿ ಹೊಡೆದ ನಂತರ ಆತನ ಪತ್ನಿ ನೆಲದ ಮೇಲೆ ಬೀಳುತ್ತಿರುವ ಘಟನೆಯ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ನಿರ್ಮಾಪಕನ ಪತ್ನಿ ದಾಖಲಿಸಿರುವ ದೂರಿನ ಪ್ರಕಾರ, ಕಮಲ್ ಮಿಶ್ರಾ ಅವರ ಪತ್ನಿ ತನ್ನ ಪತಿಯನ್ನು ಹುಡುಕುತ್ತಾ ಹೊರಬಂದಾಗ ಪಾರ್ಕಿಂಗ್ ಪ್ರದೇಶದಲ್ಲಿ ಕಾರಿನಲ್ಲಿ ಇನ್ನೊಬ್ಬ ಮಹಿಳೆಯೊಂದಿಗೆ ಇರುವುದನ್ನು ನೋಡಿದ್ದಾರೆ. ಕಾರನ್ನು ಅಡ್ಡಗಟ್ಟಿ ಪ್ರಶ್ನೆ ಮಾಡಿದ ಹೋದ ಕಾರಣ ಚಿತ್ರ ನಿರ್ಮಾಪಕ ಮತ್ತು ಆತನ ಪತ್ನಿ ನಡುವೆ ವಾಗ್ವಾದ ನಡೆದಿದೆ. ಚಾಲಕನ ಸೀಟ್ನಲ್ಲಿ ಕುಳಿತಿದ್ದ ಮಿಶ್ರಾ ಕಾರನ್ನು ತನ್ನ ಪತ್ನಿಯ ಮೇಲೆ ಹರಿಸಿದ್ದಾರೆ. ಆಕೆ ನೆಲಕ್ಕೆ ಬಿದ್ದ ಕಾರಣ ಆಕೆಯ ಕಾಲು, ತಲೆ ಮತ್ತು ಕೈಗಳಿಗೆ ಗಾಯಗಳಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೂರಿನ ಆಧಾರದ ಮೇಲೆ, ಕಮಲ್ ಮಿಶ್ರಾ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ 279 (ವೇಗದ ಚಾಲನೆ) ಮತ್ತು 337 (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವುದು) ಸೇರಿದಂತೆ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ನಾವು ಆರೋಪಿಗಳಿಗಾಗಿ ಹುಡುಕುತ್ತಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಂಬೋಲಿ ಪೊಲೀಸರು ತಿಳಿಸಿದ್ದಾರೆ.
ಕಮಲ್ ಮಿಶ್ರಾ ಹಿಂದಿಯ 'ದೇಹತಿ ಡಿಸ್ಕೋ' ಚಿತ್ರದ ನಿರ್ಮಾಪಕರು
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications