Nirmala Sitharaman ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಏಮ್ಸ್ ಆಸ್ಪತ್ರೆಗೆ ದಾಖಲು
ನವದೆಹಲಿ, ಡಿಸೆಂಬರ್ 26: ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ, ಡಿಸೆಂಬರ್ 26 ರಂದು ನವದೆಹಲಿಯಲ್ಲಿರುವ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿರ್ಮಲ ಅವರನ್ನು ಸೋಮವಾರ ಮಧ್ಯಾಹ್ನದ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ತಿಳಿದು ಬಂದಿದೆ.
63 ವರ್ಷದ ನಿರ್ಮಲಾ ಸೀತಾರಾಮನ್ ಅವರನ್ನು ಸೋಮವಾರ ಮಧ್ಯಾಹ್ನ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ಕರೆದೊಯ್ದು ಖಾಸಗಿ ವಾರ್ಡ್ಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆಕೆ ಆಸ್ಪತ್ರೆಗೆ ದಾಖಲಾಗಿರುವ ಕಾರಣ ಇನ್ನೂ ತಿಳಿದುಬಂದಿಲ್ಲ.

ರಾಯಿಟರ್ಸ್ ವರದಿಗಳ ಪ್ರಕಾರ, ಪ್ರಸ್ತುತ ಸೀತಾರಾಮನ್ ಅವರ ಆರೋಗ್ಯ ಸ್ಥಿರವಾಗಿದೆ. "ನಥಿಂಗ್ ಸೀರಿಯಸ್. ಆಕೆ ಚೆನ್ನಾಗಿದ್ದಾರೆ" ಎಂದು ಮೂಲಗಳು ತಿಳಿಸಿವೆ. ಆಕೆಯನ್ನು ಏಕೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಈ ಬಗ್ಗೆ ಹಣಕಾಸು ಸಚಿವಾಲಯವು ಯಾವುದೇ ಮಾಹಿತಿ ನೀಡಲ್ಲ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಅತ್ಯುತ್ತಮ ವೈದ್ಯಕೀಯ ಆರೈಕೆಯನ್ನು ನೀಡಲಾಗುತ್ತಿದೆ. ಅವರ ಆರೋಗ್ಯದ ಕುರಿತು ಎಐಐಎಂಎಸ್ ವೈದ್ಯರು ಶೀಘ್ರದಲ್ಲೇ ಹೇಳಿಕೆ ನೀಡಲಿದ್ದಾರೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಸಂದರ್ಭದಲ್ಲಿ ಅವರಿಗೆ ಪುಷ್ಪನಮನ ಸಲ್ಲಿಸಿದ್ದರು. ಬಳಿಕ ನಿರ್ಮಲ ಸೀತಾರಾಮನ್ ದೆಹಲಿಯ ಸದೈವ್ ಅಟಲ್ ಅವರನ್ನು ಭೇಟಿ ಮಾಡಿದ್ದರು. ತಮಿಳುನಾಡಿನ ವಿಶ್ವವಿದ್ಯಾನಿಲಯದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಭಾರತವು ಜಾಗತಿಕ ಗುಣಮಟ್ಟದ ಔಷಧವನ್ನು ಸಮಂಜಸವಾದ ಬೆಲೆಯಲ್ಲಿ ಒದಗಿಸುವುದರಿಂದ ಭಾರತವನ್ನು ವಿಶ್ವದ ಫಾರ್ಮಸಿ ಎಂದು ಕರೆಯಲಾಗುತ್ತದೆ ಎಂದು ಹಣಕಾಸು ಸಚಿವೆ ಹೇಳಿದ್ದರು.
ಫೆಬ್ರವರಿ 1, 2023 ರಂದು ನಿರ್ಮಲ ಸೀತಾರಾಮನ್ ಫೆಡರಲ್ ಬಜೆಟ್ ಅನ್ನು ಮಂಡಿಸಲಿದ್ದಾರೆ. ಶುಕ್ರವಾರವಷ್ಟೇ ಸಚಿವರು ತಮ್ಮ ಮುಂಬರುವ ಬಜೆಟ್ ಸಾರ್ವಜನಿಕ ವೆಚ್ಚದ ಹಿನ್ನೆಲೆಯಲ್ಲಿ ಬೆಳವಣಿಗೆಯನ್ನು ಹೆಚ್ಚಿಸುವುದನ್ನು ಮುಂದುವರಿಸುತ್ತದೆ ಎಂದು ಹೇಳುವ ಮೂಲಕ ಹಿಂದಿನವರ ಸ್ಫೂರ್ತಿಯನ್ನು ಮುಂದುವರಿಸಲಾಗುವುದು ಎಂದು ಸುಳಿವು ನೀಡಿದ್ದರು.
ಭಾರತವು ಹಣದುಬ್ಬರವನ್ನು ಉತ್ತಮವಾಗಿ ನಿಭಾಯಿಸುವಲ್ಲಿ ಯಶಸ್ವಿಯಾಗಲಿದೆ. ಏಕೆಂದರೆ ಆಹಾರದ ಬೆಲೆಗಳ ಮೇಲಿನ ಪೂರೈಕೆಯ ಬದಿಯ ಒತ್ತಡವನ್ನು ಪರಿಹರಿಸಲು ಅದು ಈಗಾಗಲೇ ಉತ್ತಮ ಚೌಕಟ್ಟನ್ನು ಹೊಂದಿದೆ. ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧರಿಸಿದ ಚಿಲ್ಲರೆ ಹಣದುಬ್ಬರವು ಜನವರಿಯಿಂದ ರಿಸರ್ವ್ ಬ್ಯಾಂಕ್ನ ಆರಾಮದಾಯಕ ಮಟ್ಟವಾದ ಶೇಕಡಾ 6 ಕ್ಕಿಂತ ಹೆಚ್ಚಿದೆ ಎಂದು ಅವರು ಆಶಯ ವ್ಯಕ್ತಪಡಿಸಿದ್ದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications