ಕನ್ನಡ ಸೇರಿ 22 ಭಾಷೆಗಳಲ್ಲೂ ಐಬಿಪಿಎಸ್ ಪರೀಕ್ಷೆ: ವಿತ್ತ ಸಚಿವಾಲಯ
ನವದೆಹಲಿ, ಜುಲೈ 13: ''ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಹುದ್ದೆಗಳಿಗೆ ನೇಮಕ ಮಾಡುವ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ಕನ್ನಡದಲ್ಲಿ ಪರೀಕ್ಷೆ ಬರೆಯಲು ಆಸ್ಪದ ನೀಡಿಲ್ಲ,'' ಎಂಬ ವರದಿಗಳು ಬಂದಿರುವ ಬಗ್ಗೆ ವಿತ್ತ ಸಚಿವಾಲಯ ಸ್ಪಷ್ಟನೆ ನೀಡಿದೆ.
ಇತ್ತೀಚೆಗೆ ಮಾಧ್ಯಮದ ಕೆಲವು ವಿಭಾಗಗಳಲ್ಲಿ, ಭಾರತೀಯ ಸಂವಿಧಾನದಲ್ಲಿ 22 ಭಾಷೆಗಳಿಗೆ ಮಾನ್ಯತೆ ನೀಡಿದ್ದರೂ ಸಹ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್), ಸಾರ್ವಜನಿಕ ವಲಯದ ಬ್ಯಾಂಕುಗಳ (ಪಿಎಸ್ಬಿ) ಗುಮಾಸ್ತರ ವೃಂದ(ಕ್ಲರಿಕಲ್ ಕೇಡರ್) ನೇಮಕಕ್ಕೆ ಕೇವಲ ಎರಡು ಭಾಷೆಗಳಲ್ಲಿ ಅಂದರೆ ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ಮಾತ್ರ ನಡೆಸಲಾಗುತ್ತಿದೆ ಎಂಬ ಜಾಹಿರಾತಿನ ಕುರಿತು ವರದಿಗಳು ಪ್ರಕಟವಾಗಿರುವುದು ಗಮನಕ್ಕೆ ಬಂದಿದೆ. ಈ ವರದಿಗಳಲ್ಲಿ ಕೇಂದ್ರ ಹಣಕಾಸು ಸಚಿವರು 2019ರಲ್ಲಿ ಸ್ಥಳೀಯ ಭಾಷೆಗಳಲ್ಲೇ ಬ್ಯಾಂಕಿಂಗ್ ಪರೀಕ್ಷೆಗಳನ್ನು ನಡೆಸುವ ಕುರಿತು ಭರವಸೆ ನೀಡಿದ್ದ ಹೇಳಿಕೆಯನ್ನೂ ಸಹ ಉಲ್ಲೇಖಿಸಲಾಗಿದೆ.
ಈ ಹಿನ್ನೆಲೆ ಹಣಕಾಸು ಸಚಿವಾಲಯ ಈ ಮೂಲಕ ಸ್ಪಷ್ಟಪಡಿಸುವುದೆಂದರೆ ಹಣಕಾಸು ಸಚಿವರ ಹೇಳಿಕೆ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು (ಆರ್ಆರ್ಬಿ)ಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದು ಈ ಮೂಲಕ ತಿಳಿಸಲಾಗಿದೆ. ಸ್ಥಳೀಯ ಯುವಕರಿಗೆ ಸಮಾನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ ಸರ್ಕಾರ 2019ರಲ್ಲಿ ಆರ್ ಆರ್ ಬಿಗಳ ಕಚೇರಿ ಸಹಾಯಕ ಮತ್ತು ಅಧಿಕಾರಿ ವೃಂದ-1 ಇವುಗಳ ನೇಮಕಾತಿಗೆ ಹಿಂದಿ ಮತ್ತು ಇಂಗ್ಲಿಷ್ ಮಾತ್ರವಲ್ಲದೆ, ಕೊಂಕಣಿ ಮತ್ತು ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿತ್ತು. ಅದರನ್ವಯ ಈ ನೇಮಕಾತಿಗಳಿಗೆ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಗಳಲ್ಲೂ ಸಹ ನಡೆಸಲಾಗುತ್ತಿದೆ.

ಸಾರ್ವಜನಿಕ ವಲಯದ ಬ್ಯಾಂಕುಗಳ (ಪಿಎಸ್ಬಿಗಳ) ಗುಮಾಸ್ತರ ವೃಂದದ ನೇಮಕಾತಿಗೆ ಸ್ಥಳೀಯ/ಪ್ರಾದೇಶಿಕ ಭಾಷೆಗಳಲ್ಲೇ ಪರೀಕ್ಷೆಗಳನ್ನು ನಡೆಸಬೇಕೆಂಬ ಬೇಡಿಕೆಯ ಬಗ್ಗೆ ಸಮಗ್ರವಾಗಿ ಪರಿಶೀಲಿಸಲು ಸಮಿತಿಯೊಂದನ್ನು ರಚಿಸಲಾಗಿದೆ. ಆ ಸಮಿತಿ 15 ದಿನಗಳೊಳಗೆ ತನ್ನ ಶಿಫಾರಸ್ಸುಗಳನ್ನು ಸಲ್ಲಿಸಲಿದೆ. ಹಾಗಾಗಿ ಪ್ರಸ್ತುತ ಐಬಿಪಿಎಸ್ ಆರಂಭಿಸಿದ್ದ ಪರೀಕ್ಷಾ ಪ್ರಕ್ರಿಯೆಯನ್ನು ಸಮಿತಿ ಶಿಫಾರಸ್ಸು ನೀಡುವವರೆಗೆ ತಡೆಹಿಡಿಯಲಾಗುವುದು.
-
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ರಾಜ್ಯ ಬಜೆಟ್ನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ -
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ -
ಸಿನಿಮಾ ಚಿತ್ರೀಕರಣ ಅನುಮತಿಗೆ "ಸಿನಿ ಮಿತ್ರ" ಆನ್ಲೈನ್ ವ್ಯವಸ್ಥೆ: ಸ್ಯಾಂಡಲ್ವುಡ್ಗೆ ಸಿದ್ದರಾಮಯ್ಯ ಬಜೆಟ್ ಕೊಟ್ಟಿದ್ದೇನು? -
45,000 ಕೋಟಿ ರೂಪಾಯಿ ಸಂಗ್ರಹ ಗುರಿ, ಮದ್ಯಪ್ರಿಯರಿಗೆ ದಿಢೀರ್ ಎದುರಾಯ್ತು ಆಘಾತ... Karnataka Budget 2026 -
5,00,00,000 ರೂಪಾಯಿ, ಕನ್ನಡ ನಾಡಿನ ಭಕ್ತರಿಗೆ ಭರ್ಜರಿ ಉಡುಗೊರೆ... Karnataka Budget 2026 -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಬಜೆಟ್ನಲ್ಲಿ ಘೋಷಣೆ -
Karnataka Budget 2026: ಮಾ.6 ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ, ಸಮಯ, ನೇರ ಪ್ರಸಾರ ಲಿಂಕ್, ವಿವರ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Karnataka Budget 2026: 4.5 ಲಕ್ಷ ಕೋಟಿಯ ರಾಜ್ಯ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಗುವುದೇ ಭರ್ಜರಿ ಕೊಡುಗೆ? -
ಒಕ್ಕೂಟ ವ್ಯವಸ್ಥೆ ಸಂವಿಧಾನದ ಮೂಲಭೂತ ರಚನೆಯ ಭಾಗ: ತಮಿಳುನಾಡು ಸಿಎಂ ಸ್ಟಾಲಿನ್ ಪತ್ರಕ್ಕೆ ಸಿದ್ದರಾಮಯ್ಯ ಉತ್ತರ











Click it and Unblock the Notifications