ಸ್ವಿಸ್ ಬ್ಯಾಂಕ್ ಖಾತೆದಾರರ ವಿವರ ಬಹಿರಂಗಪಡಿಸಲು ಕೇಂದ್ರ ಸರ್ಕಾರ ನಕಾರ
ನವದೆಹಲಿ, ಡಿಸೆಂಬರ್ 26: ಭಾರತ ಮತ್ತು ಸ್ವಿಟ್ಜರ್ಲೆಂಡ್ ನಡುವೆ ನಡೆದ ತೆರಿಗೆ ಒಪ್ಪಂದದ ಅಡಿಯಲ್ಲಿ ಪಡೆದುಕೊಂಡಿರುವ ಸ್ವಿಸ್ ಬ್ಯಾಂಕ್ ಖಾತೆದಾರರ ವಿವರಗಳನ್ನು ಗೋಪ್ಯತೆಯ ಕಾರಣದಿಂದ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹಣಕಾಸು ಸಚಿವಾಲಯ ಹೇಳಿದೆ.
ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿದ್ದ ಅರ್ಜಿಯೊಂದಕ್ಕೆ ಪ್ರತಿಕ್ರಿಯಿಸಿರುವ ಹಣಕಾಸು ಸಚಿವಾಲಯ, ಇತರೆ ವಿದೇಶಿ ಬ್ಯಾಂಕುಗಳಿಂದಲೂ ಸಂಗ್ರಹಿಸಿರುವ ಕಪ್ಪುಹಣದ ವಿವರಗಳನ್ನು ಕೂಡ ಬಹಿರಂಗಪಡಿಸಲು ನಿರಾಕರಿಸಿದೆ.
'ಪರಸ್ಪರ ಗೋಪ್ಯತಾ ಒಪ್ಪಂದಗಳಿಗೆ ಬದ್ಧರಾಗಿ ಅಂತಹ ತೆರಿಗೆ ಒಪ್ಪಂದಗಳ ಅಡಿಯಲ್ಲಿ ಮಾಹಿತಿಗಳನ್ನು ವಿನಿಮಯ ಮಾಡಿಕೊಳ್ಳಲಾಗುತ್ತದೆ. ಹೀಗಾಗಿ ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ 8 (1) (a) ಮತ್ತು 8 (1) (f) ಅಡಿ ವಿದೇಶಿ ಸರ್ಕಾರಗಳಿಂದ ಪಡೆದ/ಕೇಳಲಾದ ಮಾಹಿತಿಗಳನ್ನು ಹಾಗೂ ತೆರಿಗೆ ಸಂಬಂಧಿಸಿದ ಮಾಹಿತಿಗಳನ್ನು ಬಹಿರಂಗಪಡಿಸದೆ ಇರಲು ವಿನಾಯಿತಿ ನೀಡಲಾಗಿದೆ' ಎಂದು ಪಿಟಿಐ ಸುದ್ದಿಸಂಸ್ಥೆಯ ಪತ್ರಕರ್ತರೊಬ್ಬರು ಸಲ್ಲಿಸಿದ್ದ ಆರ್ಟಿಐ ಅರ್ಜಿಗೆ ಸರ್ಕಾರ ಪ್ರತಿಕ್ರಿಯೆ ನೀಡಿದೆ.

ಸ್ವಿಟ್ಜರ್ಲೆಂಡ್ನ ಬ್ಯಾಂಕುಗಳಲ್ಲಿ ಭಾರತೀಯರು ಇರಿಸಿರುವ ಹಣದ ವಿವರಗಳನ್ನು ಪಡೆದುಕೊಂಡಿರುವುದಾಗಿ ಸರ್ಕಾರ ಈ ಹಿಂದೆ ಪ್ರಕಟಿಸಿತ್ತು. ಈ ವಿವರಗಳನ್ನು ಬಹಿರಂಗಪಡಿಸುವಂತೆ ಕೋರಿ ಆರ್ಟಿಐ ಅಡಿ ಅರ್ಜಿ ಸಲ್ಲಿಸಲಾಗಿತ್ತು. ಜತೆಗೆ ಭಾರತದೊಂದಿಗೆ ಹಂಚಿಕೊಂಡಿರುವ ದಾಖಲೆಗಳ ವಿವರಗಳು ಸೇರಿದಂತೆ ವಿದೇಶಗಳಲ್ಲಿ ಸ್ವೀಕೃತವಾಗಿರುವ ಕಪ್ಪುಹಣದ ಮಾಹಿತಿಗಳನ್ನು ನೀಡುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.
ಮಾಹಿತಿ ವಿನಿಯಮ ಒಪ್ಪಂದದಡಿ ಕೇಂದ್ರ ಸರ್ಕಾರವು ಸ್ವಿಟ್ಜರ್ಲೆಂಡ್ನಿಂದ ಭಾರತೀಯ ಖಾತೆದಾರರ ಮಾಹಿತಿಗಳ ಮೊದಲ ಪಟ್ಟಿಯನ್ನು ಪಡೆದುಕೊಂಡಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications