70 Hours Work: ವಾರಕ್ಕೆ 70 ಗಂಟೆ ಕೆಲಸ, ಸುಧಾ ಮೂರ್ತಿ ಹೇಳಿದ್ದೇನು?
ಇನ್ಫೊಸಿಸ್ ಮುಖ್ಯಸ್ಥರಾದ ನಾರಾಯಣ ಮೂರ್ತಿ ಇತ್ತೀಚೆಗೆ ಕೊಟ್ಟಿದ್ದ ಹೇಳಿಕೆಯು, ಭಾರಿ ಸಂಚಲನ ಸೃಷ್ಟಿಸಿ ಚರ್ಚೆಗೆ ವೇದಿಕೆ ಒದಗಿಸಿದೆ. ಒಂದು ಕಡೆ ನಾರಾಯಣ ಮೂರ್ತಿ ಅವ್ರು ಹೇಳಿದ್ದು ಸರಿ, ಅದನ್ನ ಫಾಲೋ ಮಾಡಬೇಕು ಅಂತಾ ಕೆಲವರು ಹೇಳಿಕೆ ನೀಡುತ್ತಿದ್ದಾರೆ. ಈ ನಡುವೆ ಇನ್ನೂ ಕೆಲವರು ಮೂರ್ತಿ ಅವರ ಹೇಳಿಕೆ ಬಗ್ಗೆ ಬೇಸರ ಹೊರಹಾಕುತ್ತಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಸುಧಾ ಮೂರ್ತಿ ಅವರು ಈ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ.
ಅಂದಹಾಗೆ ಭಾರತದ ಒಟ್ಟಾರೆ ಉತ್ಪಾದಕತೆ ಹೆಚ್ಚಿಸಲು ಯುವ ಜನರು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಲು ಸಿದ್ಧರಿರಬೇಕು ಎಂದು ಇನ್ಫೊಸಿಸ್ ಸಹ ಸಂಸ್ಥಾಪಕರಾದ ನಾರಾಯಣ ಮೂರ್ತಿ ಅವರು ಹೇಳಿದ್ದರು. ಈ ಕುರಿತು ಸಾಕಷ್ಟು ಚರ್ಚೆ ಶುರುವಾಗಿತ್ತು. ಅಲ್ಲದೆ ಈಗಿನ ಯುವ ಸಮೂಹದಲ್ಲಿ ಹೆಚ್ಚಾಗುತ್ತಿರುವ ಒತ್ತಡ ಮತ್ತೆ ಇದರಿಂದ ಉಂಟಾಗುತ್ತಿರುವ ವಿವಿಧ ಆರೋಗ್ಯ ಸಮಸ್ಯೆಗಳ ಬಗ್ಗೆ ಚರ್ಚೆ ಜೋರಾಗಿತ್ತು. ಆದರೆ ಇಷ್ಟೆಲ್ಲಾ ಬೆಳವಣಿಗೆ ನಡುವೆ, ನಾರಾಯಣ ಮೂರ್ತಿ ಅವರ ಹೇಳಿಕೆ ಬಗ್ಗೆ ಸುಧಾ ಮೂರ್ತಿ ಅವರು ಪ್ರತಿಕ್ರಿಯಿಸಿದ್ದಾರೆ.

ಸುಧಾ ಮೂರ್ತಿ ಹೇಳಿದ್ದು ಏನು?
ಅಂದಹಾಗೆ ಸುಧಾ ಮೂರ್ತಿ ಅವರ ಪತಿ ಮತ್ತು ಇನ್ಫೊಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ಸಿಕ್ಕಿದೆ. ಈ ಬಗ್ಗೆ ಈಗ ಮಾತನಾಡಿರುವ ಸುಧಾ ಮೂರ್ತಿ ಅವರು, 'ಸ್ವತಃ ನಾರಾಯಣ ಮೂರ್ತಿ ಅವರೇ ವಾರಕ್ಕೆ 80 ರಿಂದ 90 ಗಂಟೆ ಕಾಲ ದುಡಿದಿದ್ದು ಅದನ್ನೇ ಈಗ ಹೇಳಿದ್ದಾರೆ' ಎಂದಿದ್ದಾರೆ. ಈ ಮೂಲಕ ನಾರಾಯಣ ಮೂರ್ತಿ ಅವರ ಹೇಳಿಕೆಯನ್ನ ಸುಧಾ ಮೂರ್ತಿ ಅವರು ಸಮರ್ಥಿಸಿಕೊಂಡಿದ್ದಾರೆ. ಕಠಿಣ ಪರಿಶ್ರಮದ ಬಗ್ಗೆ ನಾರಾಯಣ ಮೂರ್ತಿ ನಂಬಿಕೆ ಹೊಂದಿದ್ದರು. ತಮ್ಮ ಅನುಭವವ ಹಂಚಿಕೊಂಡಿದ್ದಾರೆ ಎಂದಿದ್ದಾರೆ, ಕನ್ನಡದ ಹಿರಿಯ ಬರಹಗಾರ್ತಿಯೂ ಆಗಿರುವ ಸುಧಾ ಮೂರ್ತಿ ಅವರು.
'ಕಡಿಮೆ ಕೆಲಸ ಮಾಡುವ ಬಗ್ಗೆ ಅವರಿಗೆ ತಿಳಿದಿಲ್ಲ'
ಮತ್ತೊಂದು ಕಡೆ ತಮ್ಮ ಮಾತನ್ನು ಮುಂದುವರಿಸಿ ನಾರಾಯಣ ಮೂರ್ತಿ ಅವರ ಕಾಯಕ ಶ್ರದ್ಧೆ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ ಅವರು, 'ಅವರು ಪ್ರತಿ ವಾರಕ್ಕೆ 80ರಿಂದ 90 ಗಂಟೆ ಕಾಲ ಕೆಲಸ ಮಾಡುತ್ತಿದ್ರು. ಇದಕ್ಕಿಂತ ಕಡಿಮೆ ಕೆಲಸ ಮಾಡುವ ಬಗ್ಗೆ ಅವರಿಗೆ ತಿಳಿದೇ ಇಲ್ಲ. ಕಠಿಣ ಪರಿಶ್ರಮದ ಬಗ್ಗೆ ಅವರಿಗೆ ಬಹಳ ನಂಬಿಕೆಯಿದೆ. ಅವರು ಏನು ನಂಬಿದ್ದರೋ ಅದನ್ನೇ ಈಗ ಹೇಳಿದ್ದಾರೆ' ಎಂದಿದ್ದಾರೆ.
ಒಟ್ನಲ್ಲಿ ಭಾರತದ ಐಟಿ ಕ್ಷೇತ್ರದ ದಿಗ್ಗಜನ ಮಾತಿನ ಬಗ್ಗೆ ಚರ್ಚೆ ಶುರುವಾಗಿದೆ. ಈ ಕುರಿತು ಈಗ ಸುಧಾ ಮೂರ್ತಿ ಅವರು ಕೂಡ ಸ್ಪಷ್ಟನೆ ನೀಡಿದ್ದಾರೆ. ಹೀಗಾಗಿ ಈ ಬಗ್ಗೆ ನಡೆಯುವ ಚರ್ಚೆ ಇಲ್ಲಿಗೆ ನಿಂತು ಹೋಗುತ್ತಾ? ಅಥವಾ ಹೀಗೆ ಮುಂದುವರಿಯುತ್ತಾ? ಅನ್ನೋದನ್ನು ಕಾದು ನೋಡಬೇಕಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications