Saif Ali Khan: ಸೈಫ್ ಅಲಿ ಖಾನ್ ಮೇಲೆ ಹಲ್ಲೆ ಪ್ರಕರಣಕ್ಕೆ ರೋಚಕ ತಿರುವು!
ಬಾಲಿವುಡ್ ನಟ ಸೈಫ್ ಅಲಿ ಖಾನ್ರ ಮನೆಗೆ ನುಗ್ಗಿ ಚಾಕುವಿನಿಂದ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಈಗ ರೋಚಕ ತಿರುವು ಸಿಕ್ಕಿದೆ. ಸೈಫ್ ಅಲಿ ಖಾನ್ ಅವರ ಮನೆಯಿಂದ ಸಂಗ್ರಹಿಸಿರುವ 19 ಸೆಟ್ ಬೆರಳುಚ್ಚಗಳು ಆರೋಪಿ ಎಂದು ಬಂಧಿಸಲಾಗಿರುವ ಶರೀಫುಲ್ ಇಸ್ಲಾಂ ಅವರ ಬೆರಳಚ್ಚುಗಳಿಗೆ ಹೊಂದಾಣಿಕೆಯಾಗುತ್ತಿಲ್ಲ ಎಂದು ಪ್ರಕರಣದ ತನಿಖೆಯಲ್ಲಿ ತಿಳಿದುಬಂದಿದೆ.
ಮುಂಬೈ ಪೊಲೀಸರು ಸೈಫ್ ಅಲಿ ಖಾನ್ ಅವರ ಮನೆಯಲ್ಲಿ ಸಿಕ್ಕಿರುವ ಬೆರಳಚ್ಚುಗಳನ್ನು ರಾಜ್ಯ ಅಪರಾಧ ತನಿಖಾ ಇಲಾಖೆಯ (ಸಿಐಡಿ) ಬೆರಳಚ್ಚು ಬ್ಯೂರೋಗೆ ಕಳುಹಿಸಿದ್ದರು. ಅವರು ನೀಡಿರುವ ವರದಿಯಲ್ಲಿ ಶರೀಫುಲ್ ಇಸ್ಲಾಂ ಅವರ ಬೆರಳಚ್ಚಿಗೆ ಹೊಂದಿಕೆಯಾಗುತ್ತಿಲ್ಲ ಎಂದು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.

ಬೆರಳಚ್ಚು ವರದಿ ನೆಗೆಟಿವ್ ಬಂದಿದೆ ಎಂದು ಸಿಐಡಿ ಅಧಿಕಾರಿಗಳು ಮುಂಬೈ ಪೊಲೀಸರಿಗೆ ತಿಳಿಸಿದ್ದಾರೆ. ಹೆಚ್ಚಿನ ಪರೀಕ್ಷೆಗಾಗಿ ಮುಂಬೈ ಪೊಲೀಸರು ಮತ್ತಷ್ಟು ಬೆರಳಚ್ಚಿನ ಮಾದರಿಗಳನ್ನು ಸಿಐಡಿ ಬೆರಳಚ್ಚು ಬ್ಯೂರೋಗೆ ಕಳಿಸಿಕೊಟ್ಟಿದ್ದಾರೆ.
ತನಿಖೆಯಲ್ಲಿ ರೋಚಕ ತಿರುವು
ಜನವರಿ 15 ರಂದು ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ್ದು ಸೈಫ್ ಅಲಿ ಖಾನ್ ಮೇಲೆ ದಾಳಿ ಮಾಡಿದ್ದರು. ಕಳ್ಳನಿಗೆ ಪ್ರತಿರೋಧ ತೋರಿದ್ದರಿಂದ ಕಳ್ಳ ಅವರ ಮೇಲೆ ದಾಳಿ ಮಾಡಿದ್ದರು, 54 ವರ್ಷದ ಸೈಫ್ ಅಲಿ ಖಾನ್ ಇರಿತದಿಂದ ಗಾಯಗೊಂಡಿದ್ದರು. ಬಳಿಕ ಸೈಫ್ ಅಲಿ ಖಾನ್ರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಾಕುವಿನ ಚೂರು ಸೈಫ್ ಅಲಿ ಖಾನ್ರ ದೇಹದಲ್ಲೇ ಸೇರಿಕೊಂಡಿತ್ತು, ಕೂದಲೆಳೆ ಅಂತರದಲ್ಲಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಹೇಳಿದ್ದರು. ಮಂಗಳವಾರ ಸೈಫ್ ಅಲಿ ಖಾನ್ರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು ಒಂದು ವಾರ ವಿಶ್ರಾಂತಿ ಪಡೆಯಲು ವೈದ್ಯರು ಸೂಚನೆ ಕೊಟ್ಟಿದ್ದಾರೆ.
ಬಂಧಿತ ಆರೋಪಿ ಶರೀಫುಲ್ ಬಾಂಗ್ಲಾದೇಶ ಪ್ರಜೆಯಾಗಿದ್ದು ಅಕ್ರಮವಾಗಿ ಭಾರತಕ್ಕೆ ಬಂದಿದ್ದಾನೆ. ಹಣ ನೀಡಿದರೆ ಭಾರತದ ನಕಲಿ ಪೌರತ್ವ ದಾಖಲೆ ಮಾಡಿಸಿಕೊಡುತ್ತೇನೆ ಎಂದು ಯಾರೋ ಹೇಳಿದ್ದರಿಂದ ಸೈಫ್ ಅಲಿ ಖಾನ್ರ ಮನೆಯಲ್ಲಿ ಕಳ್ಳತನ ಮಾಡಲು ಹೋಗಿದ್ದೆ ಎಂದು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಈಗ ಅಕ್ರಮವಾಗಿ ದಾಖಲೆ ಮಾಡಿಸಿಕೊಡುತ್ತೇನೆ ಎಂದು ಭರವಸೆ ಕೊಟ್ಟವನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಹೆಚ್ಚಿನ ಭದ್ರತೆ ಹೊಂದಿರುವ ನಟ ಸೈಫ್ ಅಲಿ ಖಾನ್ ಮನೆಗೆ ಕಳ್ಳನೊಬ್ಬ ನುಗ್ಗಿದ್ದಲ್ಲದೆ ಈ ರೀತಿ ಹಲ್ಲೆ ಮಾಡಿದ್ದು ದೇಶದಲ್ಲೇ ಸಂಚಲನ ಸೃಷ್ಟಿಸಿತ್ತು. ಅಷ್ಟು ಭದ್ರತೆ ಇದ್ದಾಗಲೂ ಆತ ಒಳ ನುಗ್ಗಿದ್ದು ಹೇಗೆ ಎನ್ನುವ ಅನುಮಾನ ಹಲವರನ್ನು ಕಾಡುತ್ತಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು ಕೆಲವೇ ದಿನಗಳಲ್ಲಿ ನಿಜ ಏನೆಂದು ಬಯಲಾಗಲಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications