'ಮಾನವ ಗುರಾಣಿ', ಭಾರತೀಯ ಸೇನೆ ವಿರುದ್ದ ಎಫ್ಐಆರ್
ಪ್ರತಿಭಟನಾಕಾರರ ಕಲ್ಲು ತೂರಾಟದಿಂದ ತಪ್ಪಿಸಿಕೊಳ್ಳಲು ಸೇನೆಯ ಅಧಿಕಾರಿಗಳು ಕಾಶ್ಮೀರಿ ಯುವಕನನ್ನೇ ಜೀಪಿನ ಮುಂಭಾಗಕ್ಕೆ ಕಟ್ಟಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಅಂತರಾಷ್ಟ್ರೀಯ ಚರ್ಚೆಗೆ ಗ್ರಾಸವಾಗಿತ್ತು.
ಜಮ್ಮು ಮತ್ತು ಕಾಶ್ಮೀರ, ಏಪ್ರಿಲ್ 17: ಕಾಶ್ಮೀರಿ ಯುವಕನನ್ನು ಜೀಪಿನ ಮುಂಭಾಗಕ್ಕೆ ಗುರಾಣಿಯಂತೆ ಕಟ್ಟಿದ ಭಾರತದ ಸೇನೆಯ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪ್ರತಿಭಟನಾಕಾರರ ಕಲ್ಲು ತೂರಾಟದಿಂದ ತಪ್ಪಿಸಿಕೊಳ್ಳಲು ಸೇನೆಯ ಅಧಿಕಾರಿಗಳು ಕಾಶ್ಮೀರಿ ಯುವಕನನ್ನೇ ಜೀಪಿನ ಮುಂಭಾಗಕ್ಕೆ ಕಟ್ಟಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಅಂತರಾಷ್ಟ್ರೀಯ ಚರ್ಚೆಗೆ ಗ್ರಾಸವಾಗಿತ್ತು.
ಈ ಘಟನೆ ಕುರಿತಂತೆ ವಿವರವಾದ ವರದಿ ನೀಡಲು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಸೂಚಿಸಿದ್ದರು. ಇದಾದ ಬೆನ್ನಿಗೆ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಸೇನೆಯ ವಿರುದ್ಧ ಪ್ರಥಮ ವರ್ತಮಾನ ವರದಿ ದಾಖಲಿಸಿದ್ದಾರೆ.[ದೇವೇಗೌಡ ಬಗ್ಗೆ ಟ್ವೀಟ್ ಮಾಡಿದ ಒಮರ್, ಕೆರಳಿದ ಸಿಟಿ ರವಿ]

ಇನ್ನು ಘಟನೆ ಕುರಿತಂತೆ ಸೇನೆಯೂ ವಿವರವಾದ ತನಿಖೆ ನಡೆಸುತ್ತಿದೆ. ಇದೇ ವೇಳೆ ಘಟನೆಗೆ ಸಂಬಂಧಿಸಿದಂತೆ ಭಾರತ ಸರಕಾರ ಸೇನೆಯ ಬೆನ್ನಿಗೆ ನಿಲ್ಲಲು ನಿರ್ಧರಿಸಿದೆ ಎಂದು ಉನ್ನತ ಮೂಲಗಳು ಒನ್ ಇಂಡಿಯಾಗೆ ಹೇಳಿಕೆ ನೀಡಿವೆ.
ಹೀಗಿದ್ದೂ ಬಿಜೆಪಿ ಮತ್ತು ಪಿಡಿಪಿ ನೇತೃತ್ವದ ಸಮ್ಮಿಶ್ರ ಸರಕಾರವಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಏಪ್ರಿಲ್ 9ರಂದು ಶ್ರೀನಗರ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುವ ವೇಳೆ ಈ ಘಟನೆ ನಡೆದಿತ್ತು. ಕಲ್ಲು ತೂರಾಟ ನಡೆಸುತ್ತಿದ್ದ ಗುಂಪನ್ನು ಹಾದು ಹೋಗಲು ಬುದ್ಗಾಮ್ ಜಿಲ್ಲೆಗೆ ಸೇರಿದ ಸೀತಾಹರಣ್ ಗ್ರಾಮದ ಪಾರೂಕ್ ಅಹ್ಮದ್ ದಾರ್ ಎನ್ನುವ ಯುವಕನನ್ನು ಜೀಪಿನ ಮುಂಭಾಗಕ್ಕೆ ಕಟ್ಟಲಾಗಿತ್ತು. ಈ ಮೂಲಕ ಕಲ್ಲು ತೂರಾಟದ ವಿರುದ್ಧ ಮನುಷ್ಯನನ್ನೇ ಸೇನೆ ಗುರಾಣಿಯಂತೆ ಬಳಸಿಕೊಂಡಿತ್ತು.[ಕಾಶ್ಮೀರ ಮರು ಮತದಾನ ಶೇ. 2 ! ಕಣಿವೆ ರಾಜ್ಯದ ಇತಿಹಾಸದಲ್ಲೇ ಅತಿ ಕಳಪೆ]
ವಿಶೇಷ ಎಂದರೆ ಉಪಚುನಾವಣೆಯಲ್ಲಿ ಕೇವಲ ಶೇಕಡಾ 7.14 ಮತದಾನವಾಗಿತ್ತು. ಇದರಲ್ಲೇ ಫಾರೂಕ್ ಅಹ್ಮದ್ ದರ್ ಕೂಡಾ ಮತದಾನ ಮಾಡಿದ್ದರು. ಮತದಾನ ಮುಗಿಸಿ ಬರುವಾಗ ಸೇನೆ ಅವರನ್ನು ಈ ರೀತಿ ಜೀಪಿಗೆ ಕಟ್ಟಿತ್ತು. ಸೇನೆಯ 53 ರಾಷ್ಟ್ರೀಯ ರೈಫ್ಸ್ ವಿಭಾಗ ಈ ಕೃತ್ಯ ಎಸಗಿತ್ತು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications