'ಮಾನವ ಗುರಾಣಿ', ಭಾರತೀಯ ಸೇನೆ ವಿರುದ್ದ ಎಫ್ಐಆರ್
ಪ್ರತಿಭಟನಾಕಾರರ ಕಲ್ಲು ತೂರಾಟದಿಂದ ತಪ್ಪಿಸಿಕೊಳ್ಳಲು ಸೇನೆಯ ಅಧಿಕಾರಿಗಳು ಕಾಶ್ಮೀರಿ ಯುವಕನನ್ನೇ ಜೀಪಿನ ಮುಂಭಾಗಕ್ಕೆ ಕಟ್ಟಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಅಂತರಾಷ್ಟ್ರೀಯ ಚರ್ಚೆಗೆ ಗ್ರಾಸವಾಗಿತ್ತು.
ಜಮ್ಮು ಮತ್ತು ಕಾಶ್ಮೀರ, ಏಪ್ರಿಲ್ 17: ಕಾಶ್ಮೀರಿ ಯುವಕನನ್ನು ಜೀಪಿನ ಮುಂಭಾಗಕ್ಕೆ ಗುರಾಣಿಯಂತೆ ಕಟ್ಟಿದ ಭಾರತದ ಸೇನೆಯ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪ್ರತಿಭಟನಾಕಾರರ ಕಲ್ಲು ತೂರಾಟದಿಂದ ತಪ್ಪಿಸಿಕೊಳ್ಳಲು ಸೇನೆಯ ಅಧಿಕಾರಿಗಳು ಕಾಶ್ಮೀರಿ ಯುವಕನನ್ನೇ ಜೀಪಿನ ಮುಂಭಾಗಕ್ಕೆ ಕಟ್ಟಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಅಂತರಾಷ್ಟ್ರೀಯ ಚರ್ಚೆಗೆ ಗ್ರಾಸವಾಗಿತ್ತು.
ಈ ಘಟನೆ ಕುರಿತಂತೆ ವಿವರವಾದ ವರದಿ ನೀಡಲು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಸೂಚಿಸಿದ್ದರು. ಇದಾದ ಬೆನ್ನಿಗೆ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಸೇನೆಯ ವಿರುದ್ಧ ಪ್ರಥಮ ವರ್ತಮಾನ ವರದಿ ದಾಖಲಿಸಿದ್ದಾರೆ.[ದೇವೇಗೌಡ ಬಗ್ಗೆ ಟ್ವೀಟ್ ಮಾಡಿದ ಒಮರ್, ಕೆರಳಿದ ಸಿಟಿ ರವಿ]

ಇನ್ನು ಘಟನೆ ಕುರಿತಂತೆ ಸೇನೆಯೂ ವಿವರವಾದ ತನಿಖೆ ನಡೆಸುತ್ತಿದೆ. ಇದೇ ವೇಳೆ ಘಟನೆಗೆ ಸಂಬಂಧಿಸಿದಂತೆ ಭಾರತ ಸರಕಾರ ಸೇನೆಯ ಬೆನ್ನಿಗೆ ನಿಲ್ಲಲು ನಿರ್ಧರಿಸಿದೆ ಎಂದು ಉನ್ನತ ಮೂಲಗಳು ಒನ್ ಇಂಡಿಯಾಗೆ ಹೇಳಿಕೆ ನೀಡಿವೆ.
ಹೀಗಿದ್ದೂ ಬಿಜೆಪಿ ಮತ್ತು ಪಿಡಿಪಿ ನೇತೃತ್ವದ ಸಮ್ಮಿಶ್ರ ಸರಕಾರವಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಏಪ್ರಿಲ್ 9ರಂದು ಶ್ರೀನಗರ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುವ ವೇಳೆ ಈ ಘಟನೆ ನಡೆದಿತ್ತು. ಕಲ್ಲು ತೂರಾಟ ನಡೆಸುತ್ತಿದ್ದ ಗುಂಪನ್ನು ಹಾದು ಹೋಗಲು ಬುದ್ಗಾಮ್ ಜಿಲ್ಲೆಗೆ ಸೇರಿದ ಸೀತಾಹರಣ್ ಗ್ರಾಮದ ಪಾರೂಕ್ ಅಹ್ಮದ್ ದಾರ್ ಎನ್ನುವ ಯುವಕನನ್ನು ಜೀಪಿನ ಮುಂಭಾಗಕ್ಕೆ ಕಟ್ಟಲಾಗಿತ್ತು. ಈ ಮೂಲಕ ಕಲ್ಲು ತೂರಾಟದ ವಿರುದ್ಧ ಮನುಷ್ಯನನ್ನೇ ಸೇನೆ ಗುರಾಣಿಯಂತೆ ಬಳಸಿಕೊಂಡಿತ್ತು.[ಕಾಶ್ಮೀರ ಮರು ಮತದಾನ ಶೇ. 2 ! ಕಣಿವೆ ರಾಜ್ಯದ ಇತಿಹಾಸದಲ್ಲೇ ಅತಿ ಕಳಪೆ]
ವಿಶೇಷ ಎಂದರೆ ಉಪಚುನಾವಣೆಯಲ್ಲಿ ಕೇವಲ ಶೇಕಡಾ 7.14 ಮತದಾನವಾಗಿತ್ತು. ಇದರಲ್ಲೇ ಫಾರೂಕ್ ಅಹ್ಮದ್ ದರ್ ಕೂಡಾ ಮತದಾನ ಮಾಡಿದ್ದರು. ಮತದಾನ ಮುಗಿಸಿ ಬರುವಾಗ ಸೇನೆ ಅವರನ್ನು ಈ ರೀತಿ ಜೀಪಿಗೆ ಕಟ್ಟಿತ್ತು. ಸೇನೆಯ 53 ರಾಷ್ಟ್ರೀಯ ರೈಫ್ಸ್ ವಿಭಾಗ ಈ ಕೃತ್ಯ ಎಸಗಿತ್ತು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications