FIR on CM Atishi: ದೆಹಲಿ ಸಿಎಂ ಅತಿಶಿ ವಿರುದ್ಧ ಎಫ್ಐಆರ್ ದಾಖಲು, ಕಾರಣವೇನು?
ನವದೆಹಲಿ, ಜನವರಿ 14: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕ್ರೇಜಿವಾಲ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಆ ಹುದ್ದೆಗೇರಿದ ಸಿಎಂ ಆದ ಅತಿಶಿ ಅವರಿಗೆ ಸಂಕಷ್ಟ ಎದುರು ಆಗಿದೆ. ದೆಹಲಿ ಪೊಲೀಸರು ಅತಿಶಿ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆ 2025 ಹೊತ್ತಿನಲ್ಲಿ ಸಿಎಂ ವಿರುದ್ಧ ಬಿಎನ್ಎಸ್ 223 (ಎ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ದೆಹಲಿ ವಿಧಾನಸಭಾ ಚುನಾವಣೆ 2025 ವಿಧಾನಸಭಾ ಸಂದರ್ಭದಲ್ಲಿ ದೆಹಲಿ ರಾಜ್ಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿ ಆಗಿದೆ. ದೆಹಲಿ ಮುಖ್ಯಮಂತ್ರಿ ಅತಿಶಿ ಅವರು ವಿರುದ್ಧ ಮಂಗಳವಾರ FIR ದಾಖಲಿಸಲಾಗಿದೆ. ರಾಜಕೀಯ ಉದ್ದೇಶಕ್ಕಾಗಿ ಸರ್ಕಾರಿ ವಾಹನ ಬಳಸುವ ಮೂಲಕ ಅತಿಶಿ ಅವರು ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ದೆಹಲಿ ಚುನಾವಣೆಯಲ್ಲಿ ಪ್ರಾಬಲ್ಯ ಸಾಧಿಸಲು, ಮೂರನೇ ಭಾರಿಗೆ ಅಧಿಕಾರ ಹಿಡಿಯಲು ಸಿದ್ಧವಾಗಿರುವ ಆಮ್ ಆದ್ಮಿ ಪಕ್ಷವು ಯಾವುದೇ ಎಫ್ಐಆರ್ ದಾಖಲಾಗಿಲ್ಲ ಎಂದು ತಿಳಿಸಿದೆ. ಆರೋಪ ಒಪ್ಪಿಕೊಳ್ಳಲು ನಿರಾಕರಿಸಿದೆ.
ಈ ವಿಚಾರಕ್ಕೆ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ. ಬೇರೆ ಪಕ್ಷಗಳನಾಯಕರು ಬಹಿರಂಗವಾಗಿ ಹಣ, ಸೀರೆ ಹಂಚುತ್ತಾರೆ. ಮತ ಸೆಳೆಯಲು ಚಿನ್ನದ ಸರ ನೀಡುತ್ತಿದ್ದಾರೆ. ಅಂತವರ ವಿರುದ್ಧ ಯಾವ ಪ್ರಕರಣ ದಾಖಲಾಗಿಲ್ಲ. ಆದರೆ ಮುಖ್ಯಮಂತ್ರಿಗಳ ವಿರುದ್ಧ ತತಕ್ಷಣ ಪ್ರಕರಣ ದಾಖಲಿಸಿದ್ದಾರೆ. ಇದು ಖಂಡನೀಯರ ಎಂದರು.
ಇಂದಿನ ಕೊಳೆತ ವ್ಯವಸ್ಥೆ ಬದಲಾಯಿಸಬೇಕು. ಈ ಕೊಳೆ ಸ್ವಚ್ಛಗೊಳಿಸಬೇಕು. ನಮ್ಮ ಎಎಪಿ ಇಂತಹ ವ್ಯವಸ್ಥೆ ವಿರುದ್ಧ ಹೋರಾಡುತ್ತದೆ. ಇವೆರಡು ಪಕ್ಷಗಳು ಕೊಳೆತ ಸ್ಥಿತಿಯಲ್ಲಿವೆ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಅವರು ಗುಡುಗಿದರು.
ಇಂದಿನ ಘಟನೆ ರಾಜಕೀಯ ಲಾಭಕ್ಕಾಗಿ ಮಾಡಿದ ಘಟನೆ ಆಗಿದೆ. ಸರ್ಕಾರಿ ಅಧಿಕಾರಿಗಳು, ಸಂಸ್ಥೆಗಳ ದುರಪಯೋಗ ಇದರಲ್ಲಿ ಎದ್ದು ಕಾಣುತ್ತದೆ ಎಂದು ಅವರು ಅರ್ಥೈಸಿದ್ದಾರೆ.
ಅಸಗಿಗೆ ಆಗಿದ್ದೇನು? ನಿಯಮ ಉಲ್ಲಂಘನೆ ಆಯ್ತಾ?
ದೆಹಲಿ ಚುನಾವಣೇ ಘೋಷಣೆ ಆದ ಬಳಿಕ, ಜನವರಿ 7ರಂದು ಲೋಕೋಪಯೋಗಿ ಇಲಾಖೆ ಸರ್ಕಾರಿ ವಾಹನ ಬಳಿಕೆ ಮಾಡಲಾಗಿದೆ. ಚುನಾವಣೆ ಪ್ರಚಾರಕ್ಕಾಗಿ ಬಳಸಿ, ಅದರಲ್ಲಿ ಎಎಪಿಯ ಚುನಾವಣಾ ಕಚೇರಿಗೆ ಚುನಾವಣಾ ಪ್ರಚಾರ ಸಾಮಗ್ರಿಗಳನ್ನು ತಲುಪಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.
ಈ ಸಂಬಂಧ ದೆಹಲಿಯ ಕಲ್ಕಾಜಿ ನಿವಾಸಿ ಕೆ.ಎಸ್. ದುಗ್ಗಲ್ ಅವರು ಸಿಎಂ ಅತಿಶಿ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.
ಕಲ್ಕಾಜಿಯ ಶಾಸಕರಾಗಿರುವ ಅತಿಶಿ ಅವರು ಮತ್ತೆ ಚುನಾವಣೆಗೆ ನಿಲ್ಲಲು ಸಿದ್ಧತೆ ನಡೆಸಿದ್ದಾರೆ. ಇದೇ ಕ್ಷೇತ್ರದಲ್ಲಿ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಸಂಸದ ರಮೇಶ್ ಬಿಧುರಿ ಅವರು ಕಣಕ್ಕಿಳಿಯಲಿದ್ದಾರೆ. ಶೀಘ್ರವೇ ಅತಿಶಿ ಅವರು ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications