Breaking; ಬೆಂಗಳೂರು-ಹೌರಾ ರೈಲು ಬೋಗಿಯಲ್ಲಿ ಬೆಂಕಿ, ಸ್ಪಷ್ಟನೆ
ಚಿತ್ತೂರು, ನವೆಂಬರ್ 27; ಬೆಂಗಳೂರು-ಹೌರಾ ಎಕ್ಸ್ಪ್ರೆಸ್ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೋಗಿಯಲ್ಲಿದ್ದ ಪ್ರಯಾಣಿಕರು ಸುರಕ್ಷಿತವಾಗಿದ್ದು, ಬೆಂಕಿ ಹತೋಟಿಗೆ ಬಂದಿದೆ ಎಂಬ ಸುದ್ದಿ ಬಂದಿತ್ತು. ಈ ಸುದ್ದಿಗೆ ರೈಲ್ವೆ ಇಲಾಖೆ ಸ್ಪಷ್ಟನೆ ನೀಡಿದೆ.
ಭಾನುವಾರ ಆಂಧ್ರ ಪ್ರದೇಶದ ಚಿತ್ತೂರಿನಲ್ಲಿ ಬೆಂಗಳೂರು-ಹೌರಾ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಯಾವುದೇ ಪ್ರಯಾಣಿಕರಿಗೆ ಗಾಯಗಳಾದ ಬಗ್ಗೆ ವರದಿಗಳು ಬಂದಿಲ್ಲ ಎಂಬ ಸುದ್ದಿಗಳು ಹಬ್ಬಿದ್ದವು.

ಬೋಗಿಯಲ್ಲಿದ್ದ ಪ್ರಯಾಣಿಕರನ್ನು ಸ್ಥಳೀಯ ಪೊಲೀಸರು ರಕ್ಷಣೆ ಮಾಡಿದ್ದಾರೆ. ಅಗ್ನಿಶಾಮಕದಳದ ಸಿಬ್ಬಂದಿ ಸಹ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ಕೈಗೊಂಡರು ಎಂಬ ವರದಿಗಳಿಗೆ ಇಲಾಖೆ ಸ್ಪಷ್ಟನೆ ನೀಡಿದೆ.
ಬೆಂಗಳೂರಿನ ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಹೌರಾ ಎಕ್ಸ್ಪ್ರೆಸ್ ರೈಲು ನೈಋತ್ಯ ರೈಲ್ವೆ ಬೆಂಗಳೂರು ವಲಯದ ಕುಪ್ಪಂ ರೈಲು ನಿಲ್ದಾಣದ ಸಮೀಪ ಬಂದಾಗ ಬೆಂಕಿ ಕಾಣಿಸಿಕೊಂಡಿತ್ತು ಎಂಬ ಟ್ವೀಟ್ಗಳು ಹರಿದಾಡುತ್ತಿದ್ದವು.
Chittoor, Andhra Pradesh | Local police rushed to rescue passengers after a fire broke out in a bogie of the Bangalore - Howrah express train. No casualties have yet been reported. Fire is being doused. Further details awaited pic.twitter.com/gO4XVFxSod
— ANI (@ANI) November 27, 2022
ರೈಲ್ವೆ ಇಲಾಖೆ ಸ್ಪಷ್ಟೀಕರಣ; ಚಿತ್ತೂರು ಜಿಲ್ಲೆಯಲ್ಲಿ ರೈಲಿಗೆ ಬೆಂಕಿ ಬಿದ್ದಿದೆ ಎಂದು ಕೆಲವು ಮಾಧ್ಯಮಗಳಲ್ಲಿ ತಪ್ಪು ವರದಿಗಳು ಬಂದಿವೆ. ಈ ಕುರಿತು ಸ್ಪಷ್ಟಪಡಿಸಲಾಗುತ್ತಿದೆ ಎಂದು ಇಲಾಖೆ ಸಾರ್ವಜನಿಕ ಸಂಪರ್ಕಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.
ರೈಲು ಸಂಖ್ಯೆ 12246 ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್ - ಹೌರಾ ದುರೊಂತೋ ಎಕ್ಸ್ಪ್ರೆಸ್ ಚಿತ್ತೂರು ಜಿಲ್ಲೆ (ಬೆಂಗಳೂರು ವಿಭಾಗ/ ನೈರುತ್ಯ ರೈಲ್ವೆ) ಕುಪ್ಪಂ ನಿಲ್ದಾಣವನ್ನು ಸಮೀಪಿಸುತ್ತಿರುವಾಗ ರೈಲು ನಿರ್ವಾಹಕರು ಸುಮಾರು 12.50 ಗಂಟೆಗೆ ಒಂದು ಬೋಗಿಯಲ್ಲಿ ಹೊಗೆ ಬರುತ್ತಿರುವುದನ್ನು ಗಮನಿಸಿದರು.
ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ ಪ್ರಕಾರ, ರೈಲು ಸಿಬ್ಬಂದಿಯಿಂದ ತಕ್ಷಣವೇ ರೈಲನ್ನು ನಿಲ್ಲಿಸಿ ಪರಿಶೀಲಿಸಲಾಯಿತು. SE LWSCN 193669/S9 ಬೋಗಿಯಲ್ಲಿ ಬ್ರೇಕ್ ಬ್ಲಾಕ್ನ ಘರ್ಷಣೆಯಿಂದಾಗಿ ಬ್ರೇಕ್ ಬೈಂಡಿಂಗ್ ಮತ್ತು ಹೊಗೆ ಬಂದಿರುವುದು ಕಂಡುಬಂದಿದೆ.
ರೈಲು ಸಿಬ್ಬಂದಿ ತಕ್ಷಣ ಅದನ್ನು ಸರಿಪಡಿಸಿ 1.33 ಗಂಟೆಗೆ ರೈಲುಗಾಡಿ ಪುನಃ ಪ್ರಾರಂಭಿಸಿದರು. ಯಾವುದೇ ಪ್ರಯಾಣಿಕರಿಗೆ ಯಾವುದೇ ಗಾಯ/ ಹಾನಿ ಸಂಭವಿಸಿಲ್ಲ ಎಂದು ತಿಳಿಸಲಾಗಿದೆ.
-
Indian Railway: ಬಣ್ಣದಿಂದಲೇ ರೈಲುಗಳ ವ್ಯತ್ಯಾಸ ಗುರುತಿಸುವುದು ಹೇಗೆ? -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications