Breaking: ಭೋಪಾಲ್ನ ವಲ್ಲಭ ಭವನ ಸಚಿವಾಯಲದಲ್ಲಿ ಅಗ್ನಿ ಅವಘಡ: ಐವರು ಸಿಲುಕಿರುವ ಶಂಕೆ !
ಭೋಪಾಲ್ ಮಾರ್ಚ್ 9: ಮಧ್ಯಪ್ರದೇಶದ ರಾಜಧಾನಿ ಭೋಪಾಲ್ನ ವಲ್ಲಭ ಭವನ ಸಚಿವಾಯಲದಲ್ಲಿ ಇಂದು ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಈ ದೃಶ್ಯಗಳು ವೈರಲ್ ಆಗಿವೆ.
ವಲ್ಲಭ ಭವನದ 1, 4, 5 ಮತ್ತು 6ನೇ ಮಹಡಿಗಳಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ. ಈ ಬೆಂಕಿಯ ಕೆನ್ನಾಲಿಗೆಗೆ ಅನೇಕ ಪ್ರಮುಖ ದಾಖಲೆಗಳು ಸುಟ್ಟು ಬೂದಿಯಾಗಿದೆ. ಬೆಂಕಿಯ ಬಗ್ಗೆ ಮಾಹಿತಿ ಪಡೆದ ಭೋಪಾಲ್ ಅಗ್ನಿಶಾಮಕ ದಳವು ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ನಂದಿಸಲು ಪ್ರಯತ್ನಿಸಲಾಗುತ್ತಿದೆ. ಒಳಗಡೆ ಐವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಬೆಂಕಿ ಹೊತ್ತಿಕೊಳ್ಳಲು ಕಾರಣ ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ಈ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇನ್ನೂ ಕಟ್ಟಡದಲ್ಲಿ ಸಿಲುಕಿರುವವರಿಗಾಗಿ ಶೂಧ ಕಾರ್ಯ ಆರಂಭವಾಗಿದೆ. ಆಕಾಶದೆತ್ತರಕ್ಕೆ ಹೊಗೆ ಆವರಿಸಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಸುತ್ತಲು ಇರುವ ಕಟ್ಟಡಗಳಲ್ಲಿ ಜನರನ್ನು ಸುರಕ್ಷಿತವಾಗಿ ಸ್ಥಳಂತರಿಸಲಾಗಿದೆ. ಜೊತೆಗೆ ಬೆಂಕಿ ಹರಡದಂತೆ ನಂದಿಸಲಾಗುತ್ತಿದೆ.
ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ದೃಢಪಡಿಸಿದ ಮುಖ್ಯಾಧಿಕಾರಿ ಮೋಹನ್ ಯಾದವ್, "ಜಿಲ್ಲಾಧಿಕಾರಿಯಿಂದ ಬಂದ ಮಾಹಿತಿಯ ಆಧಾರದ ಮೇಲೆ, ಘಟನೆಯ ಬಗ್ಗೆ ವಿವರವಾದ ಮಾಹಿತಿಯನ್ನು ಸಂಗ್ರಹಿಸಲು ನಾನು ಸಿಎಸ್ಗೆ ನಿಗಾ ವಹಿಸುವಂತೆ ಹೇಳಿದ್ದೇನೆ ಮತ್ತು ಬೆಂಕಿ ಹತೋಟಿಗೆ ಬಂದಿದೆ ಎಂದು ಕೂಡ ತಿಳಿಸಿದ್ದಾರೆ. ಇನ್ನು ಮುಂದೆ ಇಂತಹ ಘಟನೆ ನಡೆಯದಂತೆ ನಾವು ನಿರ್ದೇಶನಗಳನ್ನು ನೀಡಿದ್ದೇವೆ. ಅಂತಹ ಘಟನೆಗಳು ಮತ್ತೆ ಸಂಭವಿಸದಂತೆ ನಾನು ಭಾವಿಸುತ್ತೇನೆ" ಎಂದು ಅವರು ಹೇಳಿದರು.
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವೀಡಿಯೋದಲ್ಲಿ ದಟ್ಟವಾದ ಕಪ್ಪು ಹೊಗೆ ಕಟ್ಟಡದಿಂದ ಹೊರಬರುವುದನ್ನು ತೋರಿಸುತ್ತದೆ. ಘಟನಾ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅಗ್ನಿಶಾಮಕ ವಾಹನಗಳನ್ನು ನೋಡಬಹುದಾಗಿದೆ. ಬೃಹತ್ ಬೆಂಕಿಯನ್ನು ನಂದಿಸಲು ಕಾರ್ಯಾಚರಣೆ ನಡೆಯುತ್ತಿದೆ. ಯಾವುದೇ ಸಾವುನೋವುಗಳು ಅಥವಾ ಗಾಯಗಳ ತಕ್ಷಣದ ವರದಿಗಳಿಲ್ಲ.
ಕಳೆದ ವರ್ಷ ಜೂನ್ನಲ್ಲಿ ಸಾತ್ಪುರ ಭವನದಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಭೋಪಾಲ್ನ ರಾಜ್ಯ ಸರ್ಕಾರಿ ಕಟ್ಟಡದಲ್ಲಿ ಸ್ಫೋಟಗೊಂಡ ಎರಡನೇ ಭಾರಿ ಬೆಂಕಿ ಇದಾಗಿದೆ. ಆ ಘಟನೆಯಲ್ಲಿ ಮಧ್ಯಪ್ರದೇಶ ಸರ್ಕಾರದ ಕಡತಗಳ ಸಾವಿರಾರು ಕಡತಗಳು ಮತ್ತು ಆಸ್ತಿಗಳು ಸುಟ್ಟು ಕರಕಲಾಗಿವೆ. ಸಾತ್ಪುರ ಭವನವು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳನ್ನು ಹೊಂದಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications