Delhi Explosion: ದೆಹಲಿ ಕೆಂಪು ಕೋಟೆ ಬಳಿ ಭೀಕರ ಸ್ಫೋಟ: ಅಗ್ನಿಶಾಮಕ ಅಧಿಕಾರಿ ಹೇಳಿದ್ದೇನು?
Delhi Explosion: ಕೆಂಪು ಕೋಟೆ ಸಮೀಪದ ಲಾಲ್ ಕಿಲಾ ಮೆಟ್ರೋ ನಿಲ್ದಾಣ ಗೇಟ್ ಸಂಖ್ಯೆ 1ರ ಬಳಿ ಇಂದು (ನವೆಂಬರ್ 10) ಎರಡು ಕಾರುಗಳಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಸಾವು-ನೋವುಗಳು ಸಹ ಆಗಿವೆ. ಈ ಬಗ್ಗೆ ಅಗ್ನಿಶಾಮಕ ಅಧಿಕಾರಿ ಪ್ರತಿಕ್ರಿಯಿಸಿದ್ದಾರೆ. ಹಾಗಾದ್ರೆ ಏನು ಹೇಳಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸ್ಫೋಟದಲ್ಲಿ ಮೃತರ 9ಕ್ಕೆ ಏರಿಕೆಯಾಗಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಳ ಆಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಇಂದು ಸಂಜೆ ಸುಮಾರು 7ಗಂಟೆ ವೇಳಗೆ ಈ ಸ್ಫೋಟ ಸಂಭವಿಸಿದ್ದು, ಉಗ್ರ ಕೃತ್ಯದ ಶಂಕೆ ವ್ಯಕ್ತವಾಗಿದೆ. ಇನ್ನೂ ಈ ಭೀಕರ ಸ್ಫೋಟಕ್ಕೆ ದೆಹಲಿ ಜನ ಬೆಚ್ಚಿಬಿದ್ದಿದ್ದಾರೆ.

ಸಿಎನ್ಜಿ ಸ್ಫೋಟಿಸಿರುವ ಶಂಕೆ ಸಹ ಕೂಡ ವ್ಯಕ್ತವಾಗಿದೆ. ಈಗಾಗಲೇ 7ಕ್ಕೂ ಹೆಚ್ಚು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ದೆಹಲಿ ಪೊಲೀಸ್ ವಿಶೇಷ ಘಟಕ, ಬಾಂಬ್ ನಿಷ್ಕ್ರಿಯ ದಳಗಳೂ ಘಟನಾ ಸ್ಥಳಕ್ಕೆ ತೆರಳಿದ್ದು, ಸ್ಫೋಟಕ್ಕೆ ನಿಖರ ಕಾರಣದ ಬಗ್ಗೆ ತನಿಖೆ ಮುಂದುವರೆಸಿವೆ. ಇದರ ಬೆನ್ನಲ್ಲೇ ದೆಹಲಿ ಪೊಲೀಸರು ಇಡೀ ರಾಜ್ಯಾದ್ಯಂತ ಹೈಅಲರ್ಟ್ ಘೋಷಣೆ ಮಾಡಿದ್ದಾರೆ.
ಅಗ್ನಿಶಾಮಕ ಅಧಿಕಾರಿ ಹೇಳಿದ್ದೇನು?: ಇನ್ನೂ ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟದ ಬಗ್ಗೆ ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ ಎ.ಕೆ.ಮಲಿಕ್ ಮಾತನಾಡಿದ್ದಾರೆ. "ಚಾಂದನಿ ಚೌಕ್ ಮೆಟ್ರೋ ನಿಲ್ದಾಣದ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ ಎಂದು ನಮಗೆ ಮಾಹಿತಿ ಸಿಕ್ಕಿತು. ನಾವು ತಕ್ಷಣ ಹೈ ಅಲರ್ಟ್ ಆದೆವು ಮತ್ತು ಅಗ್ನಿಶಾಮಕ ದಳಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು. ಸಂಜೆ 7:29ಕ್ಕೆ, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಇನ್ನೂ ಸಾವು-ನೋವುಗಳು ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ. ಅದ್ಯ ನಮ್ಮ ಎಲ್ಲಾ ತಂಡಗಳು ಸ್ಥಳದಲ್ಲಿವೆ", ಎಂದು ತಿಳಿಸಿದ್ದಾರೆ.
ಈ ಭಯಾನಕ ಸ್ಫೋಟಕ್ಕೆ ಮೃತ ದೇಹಗಳು ಛಿದ್ರ-ಛಿದ್ರವಾಗಿದೆ. ಸ್ಥಳಕ್ಕೆ ಆಗಮಿಸಿರುವ ಭದ್ರತಾ ಪಡೆಗಳು ಮೃತದೇಹಗಳನ್ನು ಹೊರ ತೆಗೆಯುವ ಕಾರ್ಯಾಚರಣೆ ಮುಂದುವರೆಸಿವೆ. ಇನ್ನೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಂದು ದೆಹಲಿ ಸಮೀಪ ವಿವಿಧೆಡೆ 2,900 ಕೆಜಿ ಸ್ಫೋಟಕ ವಸ್ತುಗಳನ್ನ ಪತ್ತೆಹಚ್ಚಿ ಜಪ್ತಿ ಮಾಡಿದ್ದರು. ಇದಾದ ಬೆನ್ನಲ್ಲೇ ಈ ಭೀಕರ ಸ್ಫೋಟ ಸಂಭವಿಸಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications