ದೆಹಲಿಯ ಸಲೂನ್ನಲ್ಲಿ ಗುಂಡಿನ ದಾಳಿ: ಇಬ್ಬರು ಯುವಕರ ಸಾವು- ಫೈರಿಂಗ್ ವಿಡಿಯೋ ಸೆರೆ
ದೆಹಲಿ ಫೆಬ್ರವರಿ 10: ದೆಹಲಿಯ ನಜಾಫ್ಗಢ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ದುಷ್ಕರ್ಮಿಗಳು ಮನಬಂದಂತೆ ಗುಂಡು ಹಾರಿಸಿ ಇಬ್ಬರು ಯುವಕರನ್ನು ಕೊಂದಿದ್ದಾರೆ. ಶಸ್ತ್ರಸಜ್ಜಿತ ದುಷ್ಕರ್ಮಿಗಳು ಸಲೂನ್ಗೆ ನುಗ್ಗಿ ಇಬ್ಬರನ್ನೂ ಸಮೀಪದಿಂದ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.
ಮೃತರನ್ನು ನಂಗ್ಲಿ ಸಕ್ರಾವತಿ ನಿವಾಸಿಗಳಾದ ಸೋನು ಮತ್ತು ಆಶಿಶ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯ ನಂತರ ಪೊಲೀಸರು ದ್ವೇಷದ ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಲೂನ್ನಲ್ಲಿ ಗುಂಡಿನ ದಾಳಿ
ನಜಾಫ್ಗಢದ ಇಂದಿರಾ ಪಾರ್ಕ್ ಪ್ರದೇಶದಲ್ಲಿರುವ ಯುನಿಸೆಕ್ಸ್ ಸಲೂನ್ನಲ್ಲಿ ಶುಕ್ರವಾರ ಫೆಬ್ರವರಿ 9ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಯುವಕನೊಬ್ಬ ಗುಂಡು ಹಾರಿಸಿದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ತೆರಳಿದರು. ಆಗ ಇಬ್ಬರು ಯುವಕರಿಗೆ ಗುಂಡು ಹಾರಿಸಿದ್ದು ಮೋಹನ್ ಗಾರ್ಡನ್ನಲ್ಲಿರುವ ತಾರಕ್ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು.
ಮಾಹಿತಿ ತಿಳಿದ ತಕ್ಷಣ ಪೊಲೀಸರು ಆಸ್ಪತ್ರೆಗೆ ತೆರಳಿದರು. ಆಗ ನಜಫ್ಗಢದ ಸಲೂನ್ನಲ್ಲಿ ಇಬ್ಬರು ಯುವಕರು ಗುಂಡು ಹಾರಿಸಿರುವುದು ಬೆಳಕಿಗೆ ಬಂದಿದ್ದು, ಪರಿಚಯಸ್ಥ ನೀರಜ್ ಗಾಯಾಳುಗಳನ್ನು ತಾರಕ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ವೈದ್ಯರು ಇಬ್ಬರೂ ಮೃತಪಟ್ಟಿರುವುದಾಗಿ ಘೋಷಿಸಿದರು. ಪೊಲೀಸರು ಎರಡೂ ಶವಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ನಂತರ ಸ್ಥಳೀಯ ಪೊಲೀಸರು ಅಪರಾಧ ಮತ್ತು ವಿಧಿವಿಜ್ಞಾನ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದರು. ಫೋರೆನ್ಸಿಕ್ ತಂಡ ಸ್ಥಳದಿಂದ ಸಾಕ್ಷ್ಯ ಸಂಗ್ರಹಿಸಿದೆ.

ಪೊಲೀಸರಿಂದ ತನಿಖೆ
ಶುಕ್ರವಾರ ಮಧ್ಯಾಹ್ನ ಇಂದಿರಾ ಪಾರ್ಕ್ನಲ್ಲಿರುವ ಸಲೂನ್ನಲ್ಲಿ ನಂಗ್ಲಿ ಸಕ್ರಾವತಿ ನಿವಾಸಿಗಳಾದ ಸೋನು ಮತ್ತು ಆಶಿಶ್ ಎಂಬುವವರೊಂದಿಗೆ ದಾಳಿಕೋರರು ಜಗಳವಾಡುತ್ತಿರುವ ಬಗ್ಗೆ ಪೊಲೀಸರಿಗೆ ಕರೆ ಬಂದಿದೆ. ಪೊಲೀಸ್ ಸ್ಥಳಕ್ಕೆ ಹೋಗುವಷ್ಟರಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಸಲೂನ್ ಒಳಗೆ ಆಶಿಶ್ ತಲೆಗೆ ಮೂರು ಬಾರಿ ಮತ್ತು ಎದೆಗೆ ಒಂದು ಬಾರಿ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಈ ವೇಳೆ ಸೋನು ಹೊರಗೆ ಹೋಗಿದ್ದು, ಹೊರಗಿನ ದುಷ್ಕರ್ಮಿಗಳು ಅವರ ತಲೆಗೆ ಹಿಂದಿನಿಂದ ಗುಂಡು ಹಾರಿಸಿದ್ದಾರೆ.
ಘಟನೆ ವೇಳೆ ಸಲೂನ್ನಲ್ಲಿ ಕೆಲವರು ಇದ್ದರು. ಗುಂಡು ಹಾರಿದ ತಕ್ಷಣ ಗದ್ದಲ ಉಂಟಾಯಿತು ಮತ್ತು ಜನರು ತಮ್ಮನ್ನು ರಕ್ಷಿಸಿಕೊಳ್ಳಲು ಅಲ್ಲಿಂದು ಓಡಿ ಹೋಗಿದ್ದಾರೆ. ಸೋನು ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣ ದಾಖಲಾಗಿಲ್ಲ ಎಂದು ತನಿಖೆಯಿಂದ ತಿಳಿದುಬಂದಿದೆ. ಆಶಿಶ್ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿದ್ದವು. ಇಬ್ಬರನ್ನೂ ವೈಷಮ್ಯದಿಂದ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಹಳೆ ದ್ವೇಷದಿಂದ ಕೊಲೆ ಶಂಕೆ
ಕೆಲ ದಿನಗಳ ಹಿಂದೆ ಸಂಜೀವ್ ಎಂಬ ಯುವಕನೊಂದಿಗೆ ಆಶಿಶ್ ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿದ್ದ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅವರ ನಡುವೆ ರಾಜಿ ಮಾಡಿಕೊಳ್ಳುವ ಪ್ರಯತ್ನವೂ ನಡೆದಿದೆ. ಆದರೆ ಈ ವಿಚಾರದಲ್ಲಿ ಯಾವುದೇ ಒಪ್ಪಂದಕ್ಕೆ ಬರಲಿಲ್ಲ. ಇಬ್ಬರೂ ಪರಸ್ಪರ ದ್ವೇಷವನ್ನು ಇಟ್ಟುಕೊಂಡಿದ್ದರು. ಪೊಲೀಸರು ಸಂಜೀವ್ನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಎಲ್ಲಾ ಆಯಾಮಗಳಿಂದ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅಲ್ಲದೇ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದುಷ್ಕರ್ಮಿಗಳನ್ನು ಪತ್ತೆ ಹಚ್ಚಲಾಗುತ್ತಿದೆ.
ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಜಾಫ್ಗಢ್ನಲ್ಲಿರುವ ಸಲೂನ್ನಲ್ಲಿ ಇಬ್ಬರು ಯುವಕರನ್ನು ದುಷ್ಕರ್ಮಿಗಳು ಹತ್ಯೆಗೈದಿರುವುದು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಇಬ್ಬರು ದುಷ್ಕರ್ಮಿಗಳು ಕೈಯಲ್ಲಿ ಪಿಸ್ತೂಲ್ ಹಿಡಿದುಕೊಂಡು ಸಲೂನ್ ಪ್ರವೇಶಿಸಿರುವುದು ದೃಶ್ಯಾವಳಿಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ದುಷ್ಕರ್ಮಿಗಳಿಬ್ಬರೂ ಒಳಗಿರುವ ಕೊಠಡಿಗಳಲ್ಲಿ ಯಾರಿಗೋ ಹುಡುಕುತ್ತಿದ್ದರು.
ಬಳಿಕ ದುಷ್ಕರ್ಮಿಯೊಬ್ಬ ಆಶಿಶ್ನ ತಲೆ ಮತ್ತು ಎದೆಯ ಭಾಗಕ್ಕೆ ಗುಂಡು ಹಾರಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಗುಂಡಿನ ದಾಳಿಯ ವೇಳೆ ಮಹಿಳೆಯೊಬ್ಬರು ಕೊಠಡಿಯಿಂದ ಹೊರಬಂದರು, ಆದರೆ ದುಷ್ಕರ್ಮಿ ಗುಂಡಿನ ದಾಳಿಯನ್ನು ನೋಡಿದ ನಂತರ ಅವರು ಮತ್ತೆ ಕೋಣೆಗೆ ಪ್ರವೇಶಿಸಿದರು. ಇದೆಲ್ಲವೂ ಸಿಸಿಟಿವಿಯಲ್ಲಿ ಸೆರೆಯಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications