ಪಂಜಾಬ್ನ ಲೂಧಿಯಾನ ಕೋರ್ಟ್ ಬಳಿ ಗುಂಡಿನ ದಾಳಿ
ಎರಡು ಗುಂಪುಗಳ ನಡುವಿನ ಹಳೆ ವೈಷಮ್ಯ ಘರ್ಷಣೆಗೆ ಕಾರಣ ಪಂಜಾಬ್ನ ಲುಧಿಯಾನ ನ್ಯಾಯಾಲಯ ಸಂಕೀರ್ಣದ ಬಳಿ ಗುಂಡಿನ ದಾಳಿ ನಡೆದಿದೆ.
ಅಮೃತಸರ, ಫೆಬ್ರವರಿ 7: ಮಂಗಳವಾರ ಪಂಜಾಬ್ನ ಲುಧಿಯಾನ ನ್ಯಾಯಾಲಯ ಸಂಕೀರ್ಣದ ಬಳಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಏರ್ಪಟ್ಟು ಇಬ್ಬರ ಮೇಲೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎರಡು ಗುಂಪುಗಳ ನಡುವಿನ ಹಳೆ ವೈಷಮ್ಯ ಘರ್ಷಣೆಗೆ ಕಾರಣ ಎಂದು ಶಂಕಿಸಲಾಗಿದೆ. ಹಿಮಾಂಶು ಮತ್ತು ಜಸ್ಪ್ರೀತ್ ಸಿಂಗ್ ಪ್ರಕರಣದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹೋಗುತ್ತಿದ್ದಾಗ ಮತ್ತೊಂದೆಡೆ ಎರಡು ಗುಂಪುಗಳ ನಡುವೆ ತೀವ್ರ ವಾಗ್ವಾದ ನಡೆದು ಘರ್ಷಣೆಗೆ ಕಾರಣವಾಯಿತು. ಘರ್ಷಣೆ ವೇಳೆ ಇಬ್ಬರ ಮೇಲೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡ ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ರಾಜೇಶ್ ಶರ್ಮಾ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಲೂಧಿಯಾನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಹೊರಗೆ ಮೂರು ಬುಲೆಟ್ ಶಾಟ್ಗಳನ್ನು ಹಾರಿಸಲಾಗಿದ್ದು, ಇಬ್ಬರು ಗಾಯಗೊಂಡಿದ್ದು, ಕೊಚಾರ್ ಮಾರ್ಕೆಟ್ ಪ್ರದೇಶದಲ್ಲಿ ಭೀತಿಯನ್ನು ಉಂಟುಮಾಡಿದೆ. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಪೊಲೀಸರು ಸ್ಥಳಕ್ಕೆ ತಲುಪುವಷ್ಟರಲ್ಲಿ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಅವರಿಗಾಗಿ ಹುಡುಕಾಟ ನಡೆಯುತ್ತಿದೆ.
ನ್ಯಾಯಾಲಯದ ಆವರಣದ ಹೊರಗೆ ಗುಂಡು ಹಾರಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಎಸಿಪಿ ಸುಮಿತ್ ಸೂದ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಘಟನೆ ನಡೆದಾಗ ಮಾಡೆಲ್ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಮನೆ ಅತಿಕ್ರಮಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೂಧಿಯಾನ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಲು ಎರಡೂ ಕಡೆಯವರು ಬಂದಿದ್ದರು ಎಂದು ವರದಿಗಳು ತಿಳಿಸಿವೆ.












Click it and Unblock the Notifications