ನಾಗ್ಪುರದ ತರಬೇತಿ ಕೇಂದ್ರಕ್ಕೆ ದಾಖಲಾದ ಮೊದಲ ಬ್ಯಾಚ್ನ ಅಗ್ನೀವೀರರು
ನಾಗ್ಪುರ , ಜ. 02: ಬ್ರಿಗೇಡ್ ಆಫ್ ದಿ ಗಾರ್ಡ್ಸ್ನ ಮೊದಲ ಅಗ್ನಿವೀರ್ ಬ್ಯಾಚ್ನ ಸದಸ್ಯರು ತರಬೇತಿಗಾಗಿ ನಾಗ್ಪುರದ ಕ್ಯಾಂಪ್ಟಿಯ ಗಾರ್ಡ್ಸ್ ರೆಜಿಮೆಂಟಲ್ ಸೆಂಟರ್ನಲ್ಲಿ ದಾಖಲಾಗಿದ್ದಾರೆ.
ತರಬೇತಿಗಾಗಿ ದಿ ಗಾರ್ಡ್ಸ್ ರೆಜಿಮೆಂಟಲ್ ಸೆಂಟರ್ಗೆ ದಾಖಲಾಗಿರುವ ಈ ಅಗ್ನಿವೀರರು ವಿವಿಧ ನೇಮಕಾತಿ ಕಚೇರಿಗಳಿಂದ ಡಿಸೆಂಬರ್ 25 ರಿಂದ ಡಿಸೆಂಬರ್ 31ರ ನಡುವೆ ಇಲ್ಲಿಗೆ ಬಂದಿದ್ದಾರೆ. ಒಟ್ಟು 112 ಅಗ್ನಿವೀರರು ಆರು ತಿಂಗಳುಗಳ ಕಾಲ ಈ ಕೇಂದ್ರದಲ್ಲಿ ತರಬೇತಿ ಪಡೆಯಲಿದ್ದಾರೆ.
ಕ್ಯಾಂಪ್ಟಿಯ ಗಾರ್ಡ್ಸ್ ರೆಜಿಮೆಂಟಲ್ ಸೆಂಟರ್ನಲ್ಲಿ ಆರು ತಿಂಗಳ ಅವಧಿಯ ತರಬೇತಿ ಸೋಮವಾರ (ಜನವರಿ 2) ಆರಂಭವಾಗಿದೆ. ತರಬೇತಿ ಪೂರ್ಣಗೊಂಡ ನಂತರ, ಭಾರತೀಯ ಸೇನೆಯಲ್ಲಿ ಹೆಚ್ಚಿನ ವಿಶೇಷ ತರಬೇತಿಗಾಗಿ ಅಗ್ನಿವೀರರನ್ನು ಅವರ ಘಟಕಗಳಿಗೆ ವಾಪಸ್ ಕಳುಹಿಸಲಾಗುತ್ತದೆ.

ಅಗ್ನಿಪಥ್ ಯೋಜನೆಯ ಹೊಸ ನೇಮಕಾತಿಯಾಗಿ ಕ್ಯಾಂಪ್ಟಿಯ ಗಾರ್ಡ್ಸ್ ರೆಜಿಮೆಂಟಲ್ ಸೆಂಟರ್ನಲ್ಲಿ ತರಬೇತಿ ಪಡೆಯುವ ಮೊದಲ ಅಗ್ನಿವೀರರ ಬ್ಯಾಚ್ ಇದಾಗಿದೆ.
ಕಳೆದ ವಾರ ಜಮ್ಮು ಮತ್ತು ಕಾಶ್ಮೀರದಿಂದ ಆಯ್ಕೆಯಾದ ಮೊದಲ ಬ್ಯಾಚ್ 'ಅಗ್ನಿವೀರರು' ತರಬೇತಿಗಾಗಿ ಭಾರತೀಯ ಸೇನೆಗೆ ಸೇರಿದ್ದರು. ದೈಹಿಕ ಪರೀಕ್ಷೆಗಳು, ವೈದ್ಯಕೀಯ ಪರೀಕ್ಷೆಗಳು, ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಸೇರಿದಂತೆ ಕಠಿಣ ಪರೀಕ್ಷೆಗಳ ನಂತರ ಸರಿಸುಮಾರು 200 ಅಭ್ಯರ್ಥಿಗಳನ್ನು ಅಗ್ನಿಪಥ್ ಯೋಜನೆ ಅಡಿಯಲ್ಲಿ ಆಯ್ಕೆ ಮಾಡಲಾಗಿದೆ.
ಆಯ್ಕೆಯಾದವರನ್ನು ಡಿಸೆಂಬರ್ 24, 2022 ರಂದು ಭಾರತೀಯ ಸೇನೆಯ ವಿವಿಧ ರೆಜಿಮೆಂಟ್ಗಳ ಸುಮಾರು 30 ತರಬೇತಿ ಕೇಂದ್ರಗಳಿಗೆ ಶ್ರೀನಗರದ ಸೇನಾ ನೇಮಕಾತಿ ಕಚೇರಿಯಿಂದ ಕಳುಹಿಸಲಾಗಿತ್ತು. ಈ ಜಮ್ಮು ಮತ್ತು ಕಾಶ್ಮೀರದಿಂದ ಆಯ್ಕೆಯಾದ ಅಭ್ಯರ್ಥಿಗಳಿಗೆ ಜನವರಿ 1 ರಿಂದ ತರಬೇತಿ ಜಾರಿಯಾಗಿದೆ.

ಕಳೆದ ಜೂನ್ 14 ರಂದು ಅಗ್ನಿಪಥ್ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಈ ಯೋಜನೆಯಡಿ ವಾರ್ಷಿಕವಾಗಿ ಸುಮಾರು 45,000 ರಿಂದ 50,000 ಸೈನಿಕರನ್ನು ನೇಮಿಸಿಕೊಳ್ಳಲಾಗುತ್ತದೆ. ಈ ಸೈನಿಕರಿಗೆ ನಾಲ್ಕು ವರ್ಷಗಳ ಅವಧಿಗೆ ತರಬೇತಿ ನೀಡಲಾಗುವುದು, ನಂತರ ಅವರಲ್ಲಿ ಕೇವಲ 25 ಪ್ರತಿಶತದಷ್ಟು ಸೈನಿಕರನ್ನು ಮಾತ್ರ ಕಾಯಂ ಸೇವೆಗೆ ನಿಯೋಜಿಸಲಾಗುವುದು. ಉಳಿದವರಿಗೆ ಪಿಂಚಣಿ ನೀಡಿ ಕಳುಹಿಸಲಾಗುತ್ತದೆ. ಈ ಯೋಜನೆಗೆ ಸಾಕಷ್ಟು ವಿರೋಧ ಉಂಟಾಗಿದ್ದು, ದೇಶಾದ್ಯಂತ ಪ್ರತಿಭಟನೆ ನಡೆದಿತ್ತು.
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications