ತರಬೇತಿಗಾಗಿ ಭಾರತೀಯ ಸೇನೆಗೆ ಸೇರಿದ ಜಮ್ಮು ಮತ್ತು ಕಾಶ್ಮೀರದ ಮೊದಲ ಬ್ಯಾಚ್ನ ಅಗ್ನಿವೀರರು
ನವದೆಹಲಿ, ಡಿ. 26: ಜಮ್ಮು ಮತ್ತು ಕಾಶ್ಮೀರದಿಂದ ಆಯ್ಕೆಯಾದ ಮೊದಲ ಬ್ಯಾಚ್ 'ಅಗ್ನಿವೀರರು' ಸೋಮವಾರ ತರಬೇತಿಗಾಗಿ ಭಾರತೀಯ ಸೇನೆಗೆ ಸೇರಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ದೈಹಿಕ ಪರೀಕ್ಷೆಗಳು, ವೈದ್ಯಕೀಯ ಪರೀಕ್ಷೆಗಳು, ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಸೇರಿದಂತೆ ಕಠಿಣ ಪರೀಕ್ಷೆಗಳ ನಂತರ ಸರಿಸುಮಾರು 200 ಅಭ್ಯರ್ಥಿಗಳನ್ನು ಅಗ್ನಿಪಥ್ ಯೋಜನೆ ಅಡಿಯಲ್ಲಿ ಆಯ್ಕೆ ಮಾಡಲಾಗಿದೆ.
ಆಯ್ಕೆಯಾದವರನ್ನು ಡಿಸೆಂಬರ್ 24, 2022 ರಂದು ಭಾರತೀಯ ಸೇನೆಯ ವಿವಿಧ ರೆಜಿಮೆಂಟ್ಗಳ ಸುಮಾರು 30 ತರಬೇತಿ ಕೇಂದ್ರಗಳಿಗೆ ಶ್ರೀನಗರದ ಸೇನಾ ನೇಮಕಾತಿ ಕಚೇರಿಯಿಂದ ಕಳುಹಿಸಲಾಗಿದೆ. ಅಭ್ಯರ್ಥಿಗಳು 25 ಮತ್ತು 30 ಡಿಸೆಂಬರ್ 2022 ರ ನಡುವೆ ತರಬೇತಿಗಾಗಿ ದಾಖಲಾಗಿದ್ದು. ಅವರ ತರಬೇತಿಯು 2023ರ ಜನವರಿ 1 ರಿಂದ ಜಾರಿಗೆ ಬರಲಿದೆ.

ಜೂನ್ 14 ರಂದು ಅಗ್ನಿಪಥ್ ಯೋಜನೆಯನ್ನು ಘೋಷಿಸಲಾಯಿತು. ಈ ಯೋಜನೆಯಡಿ ವಾರ್ಷಿಕವಾಗಿ ಸುಮಾರು 45,000 ರಿಂದ 50,000 ಸೈನಿಕರನ್ನು ನೇಮಿಸಿಕೊಳ್ಳಲಾಗುತ್ತದೆ. ಈ ಸೈನಿಕರಿಗೆ ನಾಲ್ಕು ವರ್ಷಗಳ ಅವಧಿಗೆ ತರಬೇತಿ ನೀಡಲಾಗುವುದು, ನಂತರ ಅವರಲ್ಲಿ ಶೇ.25ರಷ್ಟು ಸೈನಿಕರನ್ನು ಮಾತ್ರ ಕಾಯಂ ಸೇವೆಗೆ ನಿಯೋಜಿಸಲಾಗುವುದು.
ಈ ನಿಯಮಗಳ ಪ್ರಕಾರ, ಹದಿನೇಳೂವರೆಯಿಂದ 21 ವರ್ಷ ವಯಸ್ಸಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಈ ಯುವಜನತೆಯನ್ನು ನಾಲ್ಕು ವರ್ಷಗಳ ಅಧಿಕಾರಾವಧಿಗೆ ಸೇನೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ನಾಲ್ಕು ವರ್ಷಗಳ ನಂತರ ಯೋಜನೆಯಲ್ಲಿ ಆಯ್ಕೆಯಾದವರಲ್ಲಿ ಶೇಕಡಾ 25 ರಷ್ಟು ಜನರಿಗೆ ಖಾಯಂ ಉದ್ಯೋಗ ದೊರೆಯಲಿದೆ.

ಉಳಿದ ಶೇಕಡಾ ಎಪ್ಪತೈದು ಪ್ರತಿಶತ ಜನರಿಗೆ 11.71 ಲಕ್ಷ ರೂಪಾಯಿ ಪಿಂಚಣಿ ನೀಡಲಾಗುವುದು. ಇದರಿಂದ ರಕ್ಷಣಾ ಬಜೆಟ್ನಲ್ಲಿನ ಪಿಂಚಣಿ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದು ಸರ್ಕಾರ ತಿಳಿಸಿತ್ತು.
ಈ ಯೋಜನೆ ಘೋಷಣೆಯಾದ ಬೆನ್ನಲ್ಲೇ ಅಗ್ನಿಪಥ್ ವಿರುದ್ಧ ಹಲವಾರು ರಾಜ್ಯಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದವು. ಹಿಂಸಾತ್ಮಕ ಪ್ರತಿಭಟನೆಗಳಿಗೂ ಸಾಕ್ಷಿಯಾಯಿತು. ಬಳಿಕ ಸರ್ಕಾರವು ನೇಮಕಾತಿಗಾಗಿ ಗರಿಷ್ಠ ವಯಸ್ಸಿನ ಮಿತಿಯನ್ನು 23 ವರ್ಷಗಳಿಗೆ ವಿಸ್ತರಿಸಿತು.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications