ಶಬರಿಮಲೆಗೆ ಭೇಟಿ ನೀಡಿದ ಎರಡನೇ ಕಮ್ಯೂನಿಸ್ಟ್ ಸಿಎಂ
Recommended Video

ತಿರುವನಂತಪುರಂ, ಅ 19: ಕಮ್ಯೂನಿಸ್ಟ್ (ಸಿಪಿಐ-ಎಂ) ಮುಖ್ಯಮಂತ್ರಿಯೊಬ್ಬರು ಪುರಾಣಪ್ರಸಿದ್ದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಯಲಕ್ಕೆ ಭೇಟಿ ನೀಡಿ, ಪ್ರಸಾದ ಸ್ವೀಕರಿಸಿದ್ದಾರೆ. ಮಾಜಿ ಸಿಎಂ ವಿ ಎಸ್ ಅಚ್ಯುತಾನಂದನ್ ನಂತರ ಪಿಣರಾಯಿ, ಶಬರಿಮಲೆಗೆ ಭೇಟಿ ನೀಡಿದ ಎರಡನೇ ಮಾರ್ಕಿಸ್ಟ್ ಸಿಎಂ ಆಗಿದ್ದಾರೆ.
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಅ 17) ದೇವಸ್ಥಾನಕ್ಕೆ ಭೇಟಿ ನೀಡಿ, ಮೂರು ತಿಂಗಳುಗಳ ಕಾಲ ನಡೆಯುವ 'ಮಂಡಲ ಮಕರವಿಳಕ್ಕು' ಕಾರ್ಯಕ್ರಮದ ಪೂರ್ವತಯಾರಿಯನ್ನು ವೀಕ್ಷಿಸಿದರು.

ತುಂತುರು ಮಳೆಯಲ್ಲಿ ಎಂಟು ಕಿಲೋಮೀಟರ್ ದೂರವನ್ನು ನಡೆದುಕೊಂಡೇ ಕ್ರಮಿಸಿದ ವಿಜಯನ್, ತೊಂಬತ್ತು ನಿಮಿಷ ಬೆಟ್ಟ ಹತ್ತಿ ದೇವಾಲಯಕ್ಕೆ ಬಂದಿದ್ದೇನೆ. ಇದೊಂದು ಉತ್ತಮ ಅನುಭವ, ದೇವಾಲಯದ ಸರ್ವತೋಮುಖ ಅಭಿವೃದ್ದಿಗೆ ನಮ್ಮ ಸರಕಾರ ಬದ್ದವಾಗಿದೆ ಎಂದಿದ್ದಾರೆ.
ನವೆಂಬರ್ ನಿಂದ ಜನವರಿ ತಿಂಗಳವರೆಗೆ ನಡೆಯುವ ಮಕರವಿಳಕ್ಕು ಧಾರ್ಮಿಕ ಕಾರ್ಯಕ್ರಮಕ್ಕೆ ದೇಶದ ಮೂಲೆಮೂಲೆಗಳಿಂದ ಲಕ್ಷಾಂತರ ಭಕ್ತರು ಬರುತ್ತಾರೆ. ಈ ವೇಳೆ ಸೂಕ್ತ ಸೌಲಭ್ಯ ನೀಡಬೇಕಾಗುತ್ತದೆ. ಭಕ್ತಾದಿಗಳಿಗೆ ಯಾವ ರೀತಿಯ ತೊಂದರೆಯಾಗಬಾರದೆಂದು ಆಡಳಿತ ಮಂಡಳಿ ಮತ್ತು ಮುಜರಾಯಿ ಇಲಾಖೆಗೆ ಸೂಚಿಸಿದ್ದೇನೆಂದು ವಿಜಯನ್ ಹೇಳಿದ್ದಾರೆ.
ಮುಖ್ಯಮಂತ್ರಿಗಳ ಜೊತೆ ಮುಜರಾಯಿ ಖಾತೆಯ ಸಚಿವ ಕಡಕಂಪಲ್ಲಿ ಸುರೇಂದ್ರನ್ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಹಾಜರಿದ್ದರು.
ನೂತನ ಪ್ರಧಾನ ಅರ್ಚಕ: ತ್ರಿಶೂರ್ ಜಿಲ್ಲೆಯ ಕೊಡಕಾರದ ಎ.ವಿ.ಉನ್ನಿಕೃಷ್ಣನ್ ನಂಬೂದಿರಿ ಮುಂದಿನ ಒಂದು ವರ್ಷದ ಅವಧಿಗೆ ಶಬರಿಮಲೆ ದೇವಾಲಯದ ಪ್ರಧಾನ ಅರ್ಚಕರಾಗಿ (ತಂತ್ರಿ) ನೇಮಕಗೊಂಡಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications