ಶಬರಿಮಲೆಗೆ ಭೇಟಿ ನೀಡಿದ ಎರಡನೇ ಕಮ್ಯೂನಿಸ್ಟ್ ಸಿಎಂ
Recommended Video

ತಿರುವನಂತಪುರಂ, ಅ 19: ಕಮ್ಯೂನಿಸ್ಟ್ (ಸಿಪಿಐ-ಎಂ) ಮುಖ್ಯಮಂತ್ರಿಯೊಬ್ಬರು ಪುರಾಣಪ್ರಸಿದ್ದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಯಲಕ್ಕೆ ಭೇಟಿ ನೀಡಿ, ಪ್ರಸಾದ ಸ್ವೀಕರಿಸಿದ್ದಾರೆ. ಮಾಜಿ ಸಿಎಂ ವಿ ಎಸ್ ಅಚ್ಯುತಾನಂದನ್ ನಂತರ ಪಿಣರಾಯಿ, ಶಬರಿಮಲೆಗೆ ಭೇಟಿ ನೀಡಿದ ಎರಡನೇ ಮಾರ್ಕಿಸ್ಟ್ ಸಿಎಂ ಆಗಿದ್ದಾರೆ.
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಅ 17) ದೇವಸ್ಥಾನಕ್ಕೆ ಭೇಟಿ ನೀಡಿ, ಮೂರು ತಿಂಗಳುಗಳ ಕಾಲ ನಡೆಯುವ 'ಮಂಡಲ ಮಕರವಿಳಕ್ಕು' ಕಾರ್ಯಕ್ರಮದ ಪೂರ್ವತಯಾರಿಯನ್ನು ವೀಕ್ಷಿಸಿದರು.

ತುಂತುರು ಮಳೆಯಲ್ಲಿ ಎಂಟು ಕಿಲೋಮೀಟರ್ ದೂರವನ್ನು ನಡೆದುಕೊಂಡೇ ಕ್ರಮಿಸಿದ ವಿಜಯನ್, ತೊಂಬತ್ತು ನಿಮಿಷ ಬೆಟ್ಟ ಹತ್ತಿ ದೇವಾಲಯಕ್ಕೆ ಬಂದಿದ್ದೇನೆ. ಇದೊಂದು ಉತ್ತಮ ಅನುಭವ, ದೇವಾಲಯದ ಸರ್ವತೋಮುಖ ಅಭಿವೃದ್ದಿಗೆ ನಮ್ಮ ಸರಕಾರ ಬದ್ದವಾಗಿದೆ ಎಂದಿದ್ದಾರೆ.
ನವೆಂಬರ್ ನಿಂದ ಜನವರಿ ತಿಂಗಳವರೆಗೆ ನಡೆಯುವ ಮಕರವಿಳಕ್ಕು ಧಾರ್ಮಿಕ ಕಾರ್ಯಕ್ರಮಕ್ಕೆ ದೇಶದ ಮೂಲೆಮೂಲೆಗಳಿಂದ ಲಕ್ಷಾಂತರ ಭಕ್ತರು ಬರುತ್ತಾರೆ. ಈ ವೇಳೆ ಸೂಕ್ತ ಸೌಲಭ್ಯ ನೀಡಬೇಕಾಗುತ್ತದೆ. ಭಕ್ತಾದಿಗಳಿಗೆ ಯಾವ ರೀತಿಯ ತೊಂದರೆಯಾಗಬಾರದೆಂದು ಆಡಳಿತ ಮಂಡಳಿ ಮತ್ತು ಮುಜರಾಯಿ ಇಲಾಖೆಗೆ ಸೂಚಿಸಿದ್ದೇನೆಂದು ವಿಜಯನ್ ಹೇಳಿದ್ದಾರೆ.
ಮುಖ್ಯಮಂತ್ರಿಗಳ ಜೊತೆ ಮುಜರಾಯಿ ಖಾತೆಯ ಸಚಿವ ಕಡಕಂಪಲ್ಲಿ ಸುರೇಂದ್ರನ್ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಹಾಜರಿದ್ದರು.
ನೂತನ ಪ್ರಧಾನ ಅರ್ಚಕ: ತ್ರಿಶೂರ್ ಜಿಲ್ಲೆಯ ಕೊಡಕಾರದ ಎ.ವಿ.ಉನ್ನಿಕೃಷ್ಣನ್ ನಂಬೂದಿರಿ ಮುಂದಿನ ಒಂದು ವರ್ಷದ ಅವಧಿಗೆ ಶಬರಿಮಲೆ ದೇವಾಲಯದ ಪ್ರಧಾನ ಅರ್ಚಕರಾಗಿ (ತಂತ್ರಿ) ನೇಮಕಗೊಂಡಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications