ಮೊದಲ ಹಂತದ ಲೋಕಸಭಾ ಮತದಾನ ಎಲ್ಲಿ ಹೆಚ್ಚು? ಎಲ್ಲಿ ಕಡಿಮೆ?
ಸಣ್ಣಪುಟ್ಟ ಹಿಂಸಾಚಾರದ ಘಟನೆಗಳನ್ನು ಹೊರತುಪಡಿಸಿದರೆ ಗುರುವಾರದಂದು ಮೊದಲ ಹಂತದ ಲೋಕಸಭಾ ಚುನಾವಣೆ ಮತದಾನ ಶಾಂತಯುತವಾಗಿತ್ತು ಎಂದು ಉಪ ಚುನಾವಣಾ ಆಯುಕ್ತ ಉಮೇಶ್ ಸಿನ್ಹಾ ಹೇಳಿದ್ದಾರೆ. 20 ರಾಜ್ಯಗಳ 91 ಲೋಕಸಭಾ ಕ್ಷೇತ್ರಕ್ಕೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭೆಗೆ ಮತದಾನ ನಡೆಯಿತು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಉತ್ತಮ ಸಂಖ್ಯೆಯಲ್ಲಿ ಪಾಲ್ಗೊಂಡ ಮತದಾರರಿಗೆ ನಾವು ಧನ್ಯವಾದ ಹೇಳುತ್ತೇವೆ. ರಾಜ್ಯಗಳ ಆಡಳಿತ, ಭದ್ರತಾ ಸಿಬ್ಬಂದಿ ಹಾಗೂ ನೋಡಲ್ ಅಧಿಕಾರಿಗಳ ಬೆಂಬಲವನ್ನು ಇಷ್ಟು ಸಲೀಸಾಗಿ ಚುನಾವಣೆ ನಡೆಯಲು ಸಾಧ್ಯವಾಗಿದ್ದಕ್ಕೆ ಅವರಿಗೂ ಧನ್ಯವಾದ ತಿಳಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಅಂಡಮಾನ್-ನಿಕೋಬಾರ್ ನಲ್ಲಿನ ಒಂದೇ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಂಜೆ ಐದು ಗಂಟೆ ಹೊತ್ತಿಗೆ 56% ಮತದಾನ ಆಗಿತ್ತು. ಛತ್ತೀಸ್ ಗಢದ ಬಸ್ತಾರ್ ನಲ್ಲಿ ಸಂಜೆ 5ರ ಹೊತ್ತಿಗೆ 56% ಮತದಾನ ಆಗಿತ್ತು. ರಾಜ್ಯವಾಗಿ ರಚನೆಯಾದ ಮೇಲೆ ಇದೆ ಮೊದಲ ಬಾರಿಗೆ ಲೋಕಸಭೆ ಚುನಾವಣೆ ಎದುರಿಸಿದ ತೆಲಂಗಾಣದಲ್ಲಿ 60.6% ಮತದಾನ ಆಗಿದೆ.

ಜಮ್ಮು-ಕಾಶ್ಮೀರದ ಎರಡು ಸ್ಥಾನಗಳಿಗೆ ನಡೆದ ಮತದಾನ ಬಾರಾಮುಲ್ಲಾ ಮತ್ತು ಜಮ್ಮುವಿನಲ್ಲಿ ಕ್ರಮವಾಗಿ 32.29% ಹಾಗೂ 67.39%ನಷ್ಟು ಆಗಿದೆ. ಆಂಧ್ರಪ್ರದೇಶದಲ್ಲಿ 66%ನಷ್ಟು ಮತದಾನ ಆಗಿದೆ.
ಸಿಕ್ಕಿಂ, ಮಿಜೋರಾಂ ಮತ್ತು ನಾಗಾಲ್ಯಾಂಡ್ ನಲ್ಲಿ ಒಂದೇ ಹಂತದಲ್ಲಿ ಮತದಾನ ಮುಗಿದಿದೆ. ಅಲ್ಲೆಲ್ಲ ಕ್ರಮವಾಗಿ 69, 60 ಹಾಗೂ 78 ಪರ್ಸೆಂಟ್ ಮತದಾನ ಆಗಿದೆ. ಮಣಿಪುರದಲ್ಲಿ 78.2%, ತ್ರಿಪುರಾದಲ್ಲಿ ಅತಿ ಹೆಚ್ಚು 81.2%, ಅಸ್ಸಾಂನಲ್ಲಿ 68 ಹಾಗೂ ಪಶ್ಚಿಮ ಬಂಗಾಲದಲ್ಲಿ 81% ಮತದಾನ ಆಗಿದೆ.
ಎರಡನೇ ಹಂತದ ಮತದಾನ ಏಪ್ರಿಲ್ ಹದಿನೆಂಟರಂದು ನಡೆಯಲಿದೆ. ಮೊದಲ ಐದು ಹಂತದ ಮತದಾನಕ್ಕೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ಇನ್ನುಳಿದ ಹಂತದ ಮತದಾನಕ್ಕೆ ಏಪ್ರಿಲ್ ಹದಿನಾರು ಹಾಗೂ ಇಪ್ಪತ್ತೆರಡರಂದು ಹೊರಡಿಸಲಾಗುವುದು. ಲೋಕಸಭಾ ಚುನಾವಣೆಯ ಫಲಿತಾಂಶ ಮೇ ಇಪ್ಪತ್ಮೂರರಂದು ಹೊರಬೀಳಲಿದೆ.
ಏಪ್ರಿಲ್ 11ರಂದು ನಡೆದ ಮತದಾನದ ಕ್ಷೇತ್ರಗಳು ಒಟ್ಟು 91. ಆ ಪೈಕಿ 32 ಕ್ಷೇತ್ರಗಳಲ್ಲಿ ಬಿಜೆಪಿ ಸಂಸದರು ಸದ್ಯಕ್ಕೆ ಇದ್ದಾರೆ. ಇನ್ನೂ ಹದಿನಾರು ರಾಜ್ಯಗಳಲ್ಲಿ ಮತದಾನ ನಡೆಯಬೇಕಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications