ಒರಿಸ್ಸಾದಲ್ಲಿ ನವೀನ್ ಪಟ್ನಾಯಕ್ ಗೆ ತಲೆನೋವಾದ ಬಿಜೆಪಿ ಸಾಧನೆ
ಒರಿಸ್ಸಾದಲ್ಲಿ ಸ್ಥಳೀಯ ಸಂಸ್ಥೆಗಳಿಗಾಗಿ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಊಹಿಸಲೂ ಅಸಾಧ್ಯವಾದ ಸಾಧನೆ ಮಾಡುವ ಮೂಲಕ, ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಗೆ ಇದು ತಲೆನೋವಾಗಿ ಪರಿಣಮಿಸಿದೆ.
ಭುವನೇಶ್ವರ, ಫೆ 19: ಒರಿಸ್ಸಾದಲ್ಲಿ ಸ್ಥಳೀಯ ಸಂಸ್ಥೆಗಳಿಗಾಗಿ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಊಹಿಸಲೂ ಅಸಾಧ್ಯವಾದ ಸಾಧನೆ ಮಾಡುವ ಮೂಲಕ, ಬಿಜೆಪಿಯ ಈ ಸಾಧನೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಗೆ ತಲೆನೋವಾಗಿ ಪರಿಣಮಿಸಿದೆ.
ಮೂರು ಹಂತದಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೊದಲ ಹಂತದ ಚುನಾವಣೆ ಈಗಾಗಲೇ ಮುಗಿದಿದ್ದು, ಎರಡನೇ ಹಂತದ ಚುನಾವಣೆ ಭಾನುವಾರ (ಫೆ 19) ನಡೆಯುತ್ತಿದ್ದರೆ, ಕೊನೆಯ ಹಂತದ ಚುನಾವಣೆ ಫೆ 21ರಂದು ನಡೆಯಲಿದೆ. ಫೆಬ್ರವರಿ 25ರಂದು ಫಲಿತಾಂಶ ಹೊರಬೀಳಲಿದೆ.

ಸ್ಥಳೀಯ ಅಧಿಕಾರಿಗಳ ಮಾಹಿತಿಯ ಪ್ರಕಾರ ಮೊದಲ ಹಂತದಲ್ಲಿ 537 ಜಿಲ್ಲಾ ಪಂಚಾಯತ್ ಕ್ಷೇತ್ರಕ್ಕೆ ಚುನಾವಣೆ ನಡೆದಿದ್ದು, ಅದರಲ್ಲಿ ನವೀನ್ ಪಟ್ನಾಯಕ್ ಅವರ ಬಿಜೆಡಿ 300, ಬಿಜೆಪಿ 180 ಮತ್ತು ಕಾಂಗ್ರೆಸ್ 40ಸ್ಥಾನವನ್ನು ತನ್ನದಾಗಿಸಿಕೊಂಡಿದೆ.
ಇನ್ನು ನಾಲ್ಕು ಜಿಲ್ಲೆಗಳಲ್ಲಿ ಬಿಜೆಪಿ ಯಾರ ಬೆಂಬಲವೂ ಇಲ್ಲದೇ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಕಾಲಹಂದಿ, ಮಯೂರಬಂಜ್, ಭರ್ಗಾ ಮತ್ತು ಬಾಲಂಗೀರ್ ಜಿಲ್ಲೆಗಳಲ್ಲಿ ಬಿಜೆಪಿ ತನ್ನ ಪ್ರಾಭಲ್ಯ ಸ್ಥಾಪಿಸಿದೆ.
ಬಲ್ಲ ಮಾಹಿತಿಗಳ ಪ್ರಕಾರ, ಮೊದಲ ಹಂತದ ಚುನಾವಣೆಯಲ್ಲಿ ಕಾಂಗ್ರೆಸ್ ದಯನೀಯ ಸೋಲು ಅನುಭವಿಸಿದೆ. ಕಳೆದ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ (2012) ಬಿಜೆಪಿ ಖಾತೆಯನ್ನೇ ತೆರೆದಿರಲಿಲ್ಲ.
ಬಿಜೆಪಿಯ ಈ ಸಾಧನೆಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಈಗಾಗಲೇ ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ. (ಮಾಹಿತಿ : ಟೈಮ್ಸ್ ಆಫ್ ಇಂಡಿಯಾ)
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು












Click it and Unblock the Notifications