PM Modi 3.0: ಕೇರಳದ ಒಬ್ಬ ಬಿಜೆಪಿ ಕೇಂದ್ರ ಸಚಿವ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸ್ಥಾನಕ್ಕೆ ಗುಡ್ಬೈ?
ಭಾನುವಾರ ದೇಶದ ಪ್ರಧಾನಿ ಆಗಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರ ಮಾಡಿದ್ದಾರೆ. ಈ ಸಮಾರಂಭದಲ್ಲಿ ದೇಶ ವಿದೇಶದ ಹಲವು ಗಣ್ಯರು ಭಾಗವಹಿಸಿದ್ದರು. ಅಲ್ಲದೆ ಎನ್ಡಿಎ ಮೈತ್ರಿಕೂಟದ ಸಂಸದರೂ ಸಹ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಕೇರಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವಿನ ನಗೆ ಬೀರಿದೆ. ಈ ಬಾರಿ ತಿಸಾರ ಕ್ಷೇತ್ರದಿಂದ ಬಿಜೆಪಿ ಟಿಕೆಟೆ ಪಡೆದಿದ್ದ ನಟ ಸುರೇಶ್ ಗೋಪಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಇವರು ತಮ್ಮ ಪ್ರತಿ ಸ್ಪರ್ಧಿ ಸಿಪಿಐನ ವಿಎಸ್ ಸುನಿಲ್ ಕುಮಾರ್ ಅವರನ್ನು 74686 ಮತಗಳಿಂದ ಮಣಿಸಿ ಜಯ ಸಾಧಿಸಿದರು. ಕೇರಳದಲ್ಲಿ ಬಿಜೆಪಿ ಗೆಲುವು ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಸುರೇಶ್ ಗೋಪಿ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ.

ಸಚಿವ ಸುರೇಶ್ ಗೋಪಿ ತಮ್ಮ ಸ್ಥಾನವನ್ನು ಸದ್ಯದಲ್ಲಿ ತೊರೆಯುವುದಾಗಿ ಭಾನುವಾರ ನೀಡಿದ ಸಂದರ್ಶನ ಒಂದರಲ್ಲಿ ತಿಳಿಸಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದ ಬಳಿಕ ವಾಹಿನಿಯೊಂದರ ಜೊತೆ ಮಾತನಾಡಿದ ಅವರು, ಶೀಘ್ರವೇ ಆ ಹುದ್ದೆಯಿಂದ ಮುಕ್ತಿ ಸಿಗಲಿದೆ ಎಂಬ ಭಾವನೆ ಮೂಡಿದೆ.
ಸ್ಥಾನ ತ್ಯಜಿಸಲು ಕಾರಣ ಏನು?
ಸಚಿವ ಸ್ಥಾನದ ಆಕಾಂಕ್ಷಿ ನಾನಲ್ಲ ಎಂದು ಸುರೇಶ್ ಹೇಳಿದ್ದಾರೆ. ಅಲ್ಲದೆ ಇನ್ನು ನನ್ನ ಕೈಯಲ್ಲಿ ಹಲವು ಚಿತ್ರಗಳು ಇವೆ. ಈಗಾಗಲೇ ನಾನು ಚಿತ್ರಗಳಿಗೆ ಸಹಿ ಮಾಡಿದ್ದೇನೆ. ಅವುಗಳನ್ನು ನಾನು ಪೂರ್ಣಗೊಳಿಸಬೇಕಿ. ಅಲ್ಲದೆ ತ್ರಿಶೂರ್ ಸಂಸದನಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಸುರೇಶ್ ಗೋಪಿ ಅವರು ಸಂಸದರಾಗಿ ತಮ್ಮ ಕ್ಷೇತ್ರಕ್ಕೆ ದುಡಿಯಲು ಬಯಸಿದ್ದು, ಸಚಿವ ಸ್ಥಾನದ ಅವಶ್ಯಕತೆ ಇಲ್ಲ ಎಂದರು. ತಾವು ಈ ಹುದ್ದೆಯನ್ನು ಕೇಳಿಲ್ಲ ಎಂದ ಹೇಳಿದ್ದಾರೆ. ಶೀಘ್ರವೇ ಈ ಹುದ್ದೆಯಿಂದ ಕೆಳಗಿಳಿಯುವುದಾಗಿ ತಿಳಿಸಿದ್ದಾರೆ. ಯಾವುದೇ ಬೆಲೆ ತೆತ್ತಾದರೂ ತಮ್ಮ ಸಿನಿಮಾಗಳನ್ನು ಮಾಡಲು ಇಚ್ಛಿಸುತ್ತೇನೆ ಮತ್ತು ತ್ರಿಶೂರ್ ಜನರಿಗಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ಕೇಳರದಲ್ಲಿರುವ ಒಟ್ಟು 20 ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ 14, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ 2, ಸಿಪಿಐ (ಎಂ), ಬಿಜೆಪಿ, ಕೆಇಸಿ, ಆರ್ಎಸ್ಪಿ ತಲಾ ಒಂದು ಸ್ಥಾನಗಳಲ್ಲಿ ಗೆಲುವು ದಾಖಲಿಸಿವೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications