Get Updates
Get notified of breaking news, exclusive insights, and must-see stories!

ಮಿಜೋರಾಂ ಚುನಾವಣೆಯಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ ಅಭ್ಯರ್ಥಿ ಡಾ. ಛಕ್ಮಾ

ಐಜ್ವಾಲ್, ಡಿಸೆಂಬರ್ 11: ಕಾಂಗ್ರೆಸ್ ಮುಕ್ತ ಭಾರತ ಕನಸು ಹೊತ್ತಿರುವ ಭಾರತೀಯ ಜನತಾ ಪಕ್ಷ(ಬಿಜೆಪಿ) ಕ್ಕೆ ಮಿಜೋರಾಂನಲ್ಲೂ ಶುಭ ಸುದ್ದಿ ಸಿಕ್ಕಿದೆ. ಆಡಳಿತಾರೂಢ ಕಾಂಗ್ರೆಸ್ ಹಿಂದಿಕ್ಕಿ ಮಿಜೋ ನ್ಯಾಷನಲ್ ಫ್ರಂಟ್(ಎಂಎನ್ಎಫ್) ಆಡಳಿತಕ್ಕೆ ಬರಲು ಸಜ್ಜಾಗುತ್ತಿದೆ.

3.40 ಸಮಯದ ಟ್ರೆಂಡ್ ನಂತೆ 40 ಸ್ಥಾನಗಳ ಪೈಕಿ ಎಂಎನ್ಎಫ್ 26 ಸ್ಥಾನಗಳಿಸಿದ್ದರೆ, ಕಾಂಗ್ರೆಸ್ 5 ಹಾಗೂ ಬಿಜೆಪಿ 1 ಸ್ಥಾನ ಗಳಿಸಿದೆ.

ಬಿಜೆಪಿ ಈ ಸಲ 39 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ, ಆದರೆ ಕೇವಲ ಓರ್ವ ಅಭ್ಯರ್ಥಿ ಮಾತ್ರ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಗೆಲುವಿನ ಖಾತೆ ತೆರೆದು ಹೊಸ ಇತಿಹಾಸ ಸೃಷ್ಟಿಸಿದೆ.

ಮಿಜೋರಾಂನಲ್ಲಿ ಇನ್ನೊಂದೆಡೆ ಹಾಲಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಲಾಲ್ ಥನ್ವಾಲಾ ಅವರು ಸೋಲು ಕಂಡಿದ್ದಾರೆ.

ಬಿಜೆಪಿ ಅಭ್ಯರ್ಥಿ ಡಾ. ಬಿ.ಡಿ ಛಕ್ಮಾಗೆ ಗೆಲುವಿನ ನಗೆ

ಬಿಜೆಪಿ ಅಭ್ಯರ್ಥಿ ಡಾ. ಬಿ.ಡಿ ಛಕ್ಮಾಗೆ ಗೆಲುವಿನ ನಗೆ

ನಾಥುರಾಮ್ ಲಾಲ್ ತನ್ಹಾವಾಲ್ ಅವರ ಸರ್ಕಾರದಲ್ಲಿ ರೇಷ್ಮೆ ಹಾಗೂ ಮೀನುಗಾರಿಕೆ ಸಚಿವರಾಗಿ ಡಾ. ಬುದ್ಧ ಧನ್ ಛಕ್ಮಾ ಅವರು ಕಾರ್ಯನಿರ್ವಹಿಸುತ್ತಿದ್ದರು. ವಿಧಾನಸಭೆ ಚುನಾವಣೆಗೂ ಕೆಲ ತಿಂಗಳ ಹಿಂದೆಯಷ್ಟೇ ಡಾಕ್ಟರ್ ಬುದ್ಧ ಧನ್ ಛಕ್ಮಾ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ನಂತರ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.

ಮಿಜೋರಾಂನಲ್ಲಿ ಖಾತೆ ತೆರೆದ ಬಿಜೆಪಿ

ಮಿಜೋರಾಂನಲ್ಲಿ ಖಾತೆ ತೆರೆದ ಬಿಜೆಪಿ

ಬಿಜೆಪಿ ಈ ಸಲ 39 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ, ಆದರೆ ಕೇವಲ ಓರ್ವ ಅಭ್ಯರ್ಥಿ ಮಾತ್ರ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಗೆಲುವಿನ ಖಾತೆ ತೆರೆದು ಹೊಸ ಇತಿಹಾಸ ಸೃಷ್ಟಿಸಿದೆ.

ಮಾಜಿ ಸಚಿವ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಡಾಕ್ಟರ್ ಬುದ್ಧ ಧನ್ ಛಕ್ಮಾ ಅವರು ವಿಜಯ ಪತಾಕೆ ಹಾರಿಸಿದ್ದಾರೆ. ಇದು ಮಿಜೋರಾಂನಲ್ಲಿ ಬಿಜೆಪಿ ಪಕ್ಷಕ್ಕೆ ಸಿಕ್ಕಿರುವ ಮೊದಲ ಗೆಲುವಾಗಿದೆ.

ಮಿಜೋರಾಂ ಬಿಜೆಪಿ ಗೆಲುವು ಫಲಿತಾಂಶ

ಮಿಜೋರಾಂ ಬಿಜೆಪಿ ಗೆಲುವು ಫಲಿತಾಂಶ

ತುಯಿಚಾಂಗ್(Tuichawng) ಕ್ಷೇತ್ರದಿಂದ ಸ್ಪರ್ಧಿಸಿದ್ದ ಬುದ್ಧ ಧನ್ ಛಕ್ಮಾ ಅವರು 11419 ಮತಗಳನ್ನು ಪಡೆದರೆ, ಸಮೀಪದ ಪ್ರತಿಸ್ಪರ್ಧಿ ಮಿಜೋ ನ್ಯಾಷನಲ್ ಫ್ರಂಟ್ ನ ರಸಿಕ್ ಮೋಹನ್ ಛಕ್ಮಾ ಅವರು 9825 ಮತಗಳನ್ನು ಗಳಿಸಿ, ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕಲಿ ಕುಮಾರ್ ತೊಂಗ್ಚಾಂಗ್ಯಾ ಅವರು 4353 ಮತಗಳನ್ನು ಗಳಿಸಿ ಮೂರನೇ ಸ್ಥಾನ ಗಳಿಸಿದ್ದಾರೆ.

ವಿದ್ಯಾರ್ಥಿಗಳಿಗಾಗಿ ಹೋರಾಡಿದ್ದ ಛಕ್ಮಾ

ವಿದ್ಯಾರ್ಥಿಗಳಿಗಾಗಿ ಹೋರಾಡಿದ್ದ ಛಕ್ಮಾ

ಮಿಜೋರಾಂ ರಾಜ್ಯದ ಕೋಟಾದಡಿಯಲ್ಲಿ ನೀಟ್ ಪರೀಕ್ಷೆ ಬರೆದು ಎಂಬಿಬಿಎಸ್ ಸೀಟು ಗಳಿಸಿದ್ದ ನಾಲ್ವರು ವಿದ್ಯಾರ್ಥಿಗಳಿಗೆ ಕಾಲೇಜಿಗೆ ಪ್ರವೇಶ ಸಿಕ್ಕಿರಲಿಲ್ಲ. ಕೌನ್ಸಲಿಂಗ್ ಆದ ಮೇಲೆ ಸೀಟು ನೀಡಲು ನಿರಾಕರಿಸಲಾಗಿತ್ತು. ಇದನ್ನು ಖಂಡಿಸಿದ ಡಾ. ಬಿ. ಡಿ ಛಕ್ಮಾ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ನಂತರ ಬಿಜೆಪಿ ಸೇರಿ, ವಿಧಾನಸಭೆಗೆ ಸ್ಪರ್ಧಿಸಿದರು. ಛಕ್ಮಾ ಅವರಿಗೆ ವಿದ್ಯಾರ್ಥಿ ಸಂಘಟನೆಯಿಂದ ಪೂರ್ಣ ಬೆಂಬಲ ದೊರೆಯಿತು.

ತೇರವಾದ ಬೌದ್ಧ ಅನುಯಾಯಿಗಳು

ತೇರವಾದ ಬೌದ್ಧ ಅನುಯಾಯಿಗಳು

ಬಾಂಗ್ಲಾ ಮೂಲದ ಚಿತ್ತಗಾಂಗ್ ನಿಂದ ವಲಸೆ ಬಂದು ಭಾರತದ ಈಶಾನ್ಯರಾಜ್ಯಗಳಲ್ಲಿ ನೆಲೆಸಿರುವ ಬೌದ್ಧ ಸಮುದಾಯದ ಛಕ್ಮಾ ಪಂಗಡದ ಮೇಲಿನ ದೌರ್ಜನ್ಯವನ್ನು ಖಂಡಿಸಿ ಡಾ. ಛಕ್ಮಾ ಅವರು ಹೋರಾಡುತ್ತಾ ಬಂದಿದ್ದಾರೆ. ಅರುಣಾಚಲಪ್ರದೇಶದಲ್ಲಿ ಬೌದ್ಧರ ಮೇಲೆ ನಡೆದ ದೌರ್ಜನ್ಯದ ಬಗ್ಗೆ ದನಿ ಎತ್ತಿದ್ದರು. ಛಕ್ಮಾ ಸಮುದಾಯದವರು ತೇರವಾದ ಬೌದ್ಧ ಅನುಯಾಯಿಗಳಾಗಿದ್ದು, ಬರ್ಮಾದ ರಾಜರಿಂದ ಸಂಸ್ಕೃತದ ಶಕ್ತಿಮಾನ್/ಶಕ್ತಿ ಪದ ಛಕ್ಮಾ ಆಗಿದೆ, ಮ್ಯಾನ್ಮಾರ್ ನಲ್ಲಿ ಉನ್ನತ ಹುದ್ದೆಗಳನ್ನು ಹೊಂದಿದ್ದರು. ಛಕ್ಮಾಗಳ ಬಗ್ಗೆ ಮಾಹಿತಿ ಇಲ್ಲಿದೆ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+