ಮಿಜೋರಾಂ ಚುನಾವಣೆಯಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ ಅಭ್ಯರ್ಥಿ ಡಾ. ಛಕ್ಮಾ
ಐಜ್ವಾಲ್, ಡಿಸೆಂಬರ್ 11: ಕಾಂಗ್ರೆಸ್ ಮುಕ್ತ ಭಾರತ ಕನಸು ಹೊತ್ತಿರುವ ಭಾರತೀಯ ಜನತಾ ಪಕ್ಷ(ಬಿಜೆಪಿ) ಕ್ಕೆ ಮಿಜೋರಾಂನಲ್ಲೂ ಶುಭ ಸುದ್ದಿ ಸಿಕ್ಕಿದೆ. ಆಡಳಿತಾರೂಢ ಕಾಂಗ್ರೆಸ್ ಹಿಂದಿಕ್ಕಿ ಮಿಜೋ ನ್ಯಾಷನಲ್ ಫ್ರಂಟ್(ಎಂಎನ್ಎಫ್) ಆಡಳಿತಕ್ಕೆ ಬರಲು ಸಜ್ಜಾಗುತ್ತಿದೆ.
3.40 ಸಮಯದ ಟ್ರೆಂಡ್ ನಂತೆ 40 ಸ್ಥಾನಗಳ ಪೈಕಿ ಎಂಎನ್ಎಫ್ 26 ಸ್ಥಾನಗಳಿಸಿದ್ದರೆ, ಕಾಂಗ್ರೆಸ್ 5 ಹಾಗೂ ಬಿಜೆಪಿ 1 ಸ್ಥಾನ ಗಳಿಸಿದೆ.
ಬಿಜೆಪಿ ಈ ಸಲ 39 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ, ಆದರೆ ಕೇವಲ ಓರ್ವ ಅಭ್ಯರ್ಥಿ ಮಾತ್ರ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಗೆಲುವಿನ ಖಾತೆ ತೆರೆದು ಹೊಸ ಇತಿಹಾಸ ಸೃಷ್ಟಿಸಿದೆ.
ಮಿಜೋರಾಂನಲ್ಲಿ ಇನ್ನೊಂದೆಡೆ ಹಾಲಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಲಾಲ್ ಥನ್ವಾಲಾ ಅವರು ಸೋಲು ಕಂಡಿದ್ದಾರೆ.

ಬಿಜೆಪಿ ಅಭ್ಯರ್ಥಿ ಡಾ. ಬಿ.ಡಿ ಛಕ್ಮಾಗೆ ಗೆಲುವಿನ ನಗೆ
ನಾಥುರಾಮ್ ಲಾಲ್ ತನ್ಹಾವಾಲ್ ಅವರ ಸರ್ಕಾರದಲ್ಲಿ ರೇಷ್ಮೆ ಹಾಗೂ ಮೀನುಗಾರಿಕೆ ಸಚಿವರಾಗಿ ಡಾ. ಬುದ್ಧ ಧನ್ ಛಕ್ಮಾ ಅವರು ಕಾರ್ಯನಿರ್ವಹಿಸುತ್ತಿದ್ದರು. ವಿಧಾನಸಭೆ ಚುನಾವಣೆಗೂ ಕೆಲ ತಿಂಗಳ ಹಿಂದೆಯಷ್ಟೇ ಡಾಕ್ಟರ್ ಬುದ್ಧ ಧನ್ ಛಕ್ಮಾ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ನಂತರ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.

ಮಿಜೋರಾಂನಲ್ಲಿ ಖಾತೆ ತೆರೆದ ಬಿಜೆಪಿ
ಬಿಜೆಪಿ ಈ ಸಲ 39 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ, ಆದರೆ ಕೇವಲ ಓರ್ವ ಅಭ್ಯರ್ಥಿ ಮಾತ್ರ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಗೆಲುವಿನ ಖಾತೆ ತೆರೆದು ಹೊಸ ಇತಿಹಾಸ ಸೃಷ್ಟಿಸಿದೆ.
ಮಾಜಿ ಸಚಿವ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಡಾಕ್ಟರ್ ಬುದ್ಧ ಧನ್ ಛಕ್ಮಾ ಅವರು ವಿಜಯ ಪತಾಕೆ ಹಾರಿಸಿದ್ದಾರೆ. ಇದು ಮಿಜೋರಾಂನಲ್ಲಿ ಬಿಜೆಪಿ ಪಕ್ಷಕ್ಕೆ ಸಿಕ್ಕಿರುವ ಮೊದಲ ಗೆಲುವಾಗಿದೆ.

ಮಿಜೋರಾಂ ಬಿಜೆಪಿ ಗೆಲುವು ಫಲಿತಾಂಶ
ತುಯಿಚಾಂಗ್(Tuichawng) ಕ್ಷೇತ್ರದಿಂದ ಸ್ಪರ್ಧಿಸಿದ್ದ ಬುದ್ಧ ಧನ್ ಛಕ್ಮಾ ಅವರು 11419 ಮತಗಳನ್ನು ಪಡೆದರೆ, ಸಮೀಪದ ಪ್ರತಿಸ್ಪರ್ಧಿ ಮಿಜೋ ನ್ಯಾಷನಲ್ ಫ್ರಂಟ್ ನ ರಸಿಕ್ ಮೋಹನ್ ಛಕ್ಮಾ ಅವರು 9825 ಮತಗಳನ್ನು ಗಳಿಸಿ, ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕಲಿ ಕುಮಾರ್ ತೊಂಗ್ಚಾಂಗ್ಯಾ ಅವರು 4353 ಮತಗಳನ್ನು ಗಳಿಸಿ ಮೂರನೇ ಸ್ಥಾನ ಗಳಿಸಿದ್ದಾರೆ.

ವಿದ್ಯಾರ್ಥಿಗಳಿಗಾಗಿ ಹೋರಾಡಿದ್ದ ಛಕ್ಮಾ
ಮಿಜೋರಾಂ ರಾಜ್ಯದ ಕೋಟಾದಡಿಯಲ್ಲಿ ನೀಟ್ ಪರೀಕ್ಷೆ ಬರೆದು ಎಂಬಿಬಿಎಸ್ ಸೀಟು ಗಳಿಸಿದ್ದ ನಾಲ್ವರು ವಿದ್ಯಾರ್ಥಿಗಳಿಗೆ ಕಾಲೇಜಿಗೆ ಪ್ರವೇಶ ಸಿಕ್ಕಿರಲಿಲ್ಲ. ಕೌನ್ಸಲಿಂಗ್ ಆದ ಮೇಲೆ ಸೀಟು ನೀಡಲು ನಿರಾಕರಿಸಲಾಗಿತ್ತು. ಇದನ್ನು ಖಂಡಿಸಿದ ಡಾ. ಬಿ. ಡಿ ಛಕ್ಮಾ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ನಂತರ ಬಿಜೆಪಿ ಸೇರಿ, ವಿಧಾನಸಭೆಗೆ ಸ್ಪರ್ಧಿಸಿದರು. ಛಕ್ಮಾ ಅವರಿಗೆ ವಿದ್ಯಾರ್ಥಿ ಸಂಘಟನೆಯಿಂದ ಪೂರ್ಣ ಬೆಂಬಲ ದೊರೆಯಿತು.

ತೇರವಾದ ಬೌದ್ಧ ಅನುಯಾಯಿಗಳು
ಬಾಂಗ್ಲಾ ಮೂಲದ ಚಿತ್ತಗಾಂಗ್ ನಿಂದ ವಲಸೆ ಬಂದು ಭಾರತದ ಈಶಾನ್ಯರಾಜ್ಯಗಳಲ್ಲಿ ನೆಲೆಸಿರುವ ಬೌದ್ಧ ಸಮುದಾಯದ ಛಕ್ಮಾ ಪಂಗಡದ ಮೇಲಿನ ದೌರ್ಜನ್ಯವನ್ನು ಖಂಡಿಸಿ ಡಾ. ಛಕ್ಮಾ ಅವರು ಹೋರಾಡುತ್ತಾ ಬಂದಿದ್ದಾರೆ. ಅರುಣಾಚಲಪ್ರದೇಶದಲ್ಲಿ ಬೌದ್ಧರ ಮೇಲೆ ನಡೆದ ದೌರ್ಜನ್ಯದ ಬಗ್ಗೆ ದನಿ ಎತ್ತಿದ್ದರು. ಛಕ್ಮಾ ಸಮುದಾಯದವರು ತೇರವಾದ ಬೌದ್ಧ ಅನುಯಾಯಿಗಳಾಗಿದ್ದು, ಬರ್ಮಾದ ರಾಜರಿಂದ ಸಂಸ್ಕೃತದ ಶಕ್ತಿಮಾನ್/ಶಕ್ತಿ ಪದ ಛಕ್ಮಾ ಆಗಿದೆ, ಮ್ಯಾನ್ಮಾರ್ ನಲ್ಲಿ ಉನ್ನತ ಹುದ್ದೆಗಳನ್ನು ಹೊಂದಿದ್ದರು. ಛಕ್ಮಾಗಳ ಬಗ್ಗೆ ಮಾಹಿತಿ ಇಲ್ಲಿದೆ
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications