ಕೇಂದ್ರ ಬಜೆಟ್ ಮೇಲಿನ ಉದ್ಯೋಗಸ್ಥರ 5 ನಿರೀಕ್ಷೆಗಳು
Recommended Video

ನವದೆಹಲಿ, ಜನವರಿ 18: ಹಣಕಾಸು ಸಚಿವ ಅರುಣ್ ಜೇಟ್ಲಿ 2017ರ ಕೇಂದ್ರ ಬಜೆಟ್ ನಲ್ಲಿ ವಾರ್ಷಿಕ 2.5 ಲಕ್ಷ ರೂಪಾಯಿಯಿಂದ 5 ಲಕ್ಷ ರೂ. ವರೆಗೆ ಸಂಬಳ ಪಡೆಯುವ ನೌಕರರಿಗೆ ದೊಡ್ಡ ಕೊಡುಗೆ ನೀಡಿದ್ದರು. ವಾರ್ಷಿಕ ರೂ. 2.5 ಲಕ್ಷದಿಂದ 5 ಲಕ್ಷ ರೂಪಾಯಿ ಆದಾಯ ಪಡೆಯುವವರು ಪಾವತಿ ಮಾಡಬೇಕಾಗಿದ್ದ ತೆರಿಗೆ ಪ್ರಮಾಣವನ್ನು ಶೇಕಡಾ 10 ರಿಂದ 5ಕ್ಕೆ ಇಳಿಸಿದ್ದರು.
ಹೀಗಾಗಿ ಈ ಬಾರಿಯೂ ಅರುಣ್ ಜೇಟ್ಲಿಯವರ ಬಜೆಟ್ ಮೇಲೆ ತಿಂಗಳ ವೇತನ ಪಡೆಯುವ ನೌಕರರು ಹೆಚ್ಚಿನ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ.
ವೇತನ ಪಡೆಯುವ ನೌಕರರ ಪ್ರಮುಖ ಐದು ನಿರೀಕ್ಷೆಗಳು ಈ ಕೆಳಗಿನಂತಿವೆ,

ಉದ್ಯೋಗ ಸೃಷ್ಟಿ/ ರಾಷ್ಟ್ರೀಯ ಉದ್ಯೋಗ ನೀತಿ
ಉದ್ಯೋಗ ಸೃಷ್ಟಿ ಪ್ರಮಾಣ ಕಳೆದ ಆರು ವರ್ಷಗಳಲ್ಲೇ ಕನಿಷ್ಠ ಮಟ್ಟವನ್ನು ತಲುಪಿದ್ದರೆ ನಿರುದ್ಯೋಗ ಪ್ರಮಾಣ ಕಳೆದ ಐದು ವರ್ಷಗಳಲ್ಲೇ ಗರಿಷ್ಠ ಮಟ್ಟವನ್ನು ತಲುಪಿದೆ. ಹೀಗಾಗಿ ಉದ್ಯೋಗ ಸೃಷ್ಠಿಗೆ ಸಂಬಂಧಿಸಿದಂತೆ ಬಜೆಟ್ ನಲ್ಲಿ ಪ್ರಮುಖ ಘೋಷಣೆ ಹೊರಬೀಳುವ ನಿರೀಕ್ಷೆ ಇದೆ.
ಸದ್ಯಕ್ಕೆ ದೇಶದಲ್ಲಿ ರಾಷ್ಟ್ರೀಯ ಉದ್ಯೋಗ ಸೃಷ್ಟಿ ನೀತಿಗಳಿಲ್ಲ ಅಥವಾ ಉದ್ಯೋಗ ಸೃಷ್ಟಿಯ ಬಗ್ಗೆ ಯಾವುದೇ ನೀಲನಕ್ಷೆಗಳು ಸರಕಾರದ ಮುಂದಿಲ್ಲ. ಆದರೆ ಪ್ರತೀ ತಿಂಗಳು ದೇಶದ ಉದ್ಯೋಗ ಮಾರುಕಟ್ಟೆಗೆ 1 ಕೋಟಿ ಯುವ ಜನಾಂಗ ಸೇರ್ಪಡೆಯಾಗುತ್ತಿದ್ದು, ಉದ್ಯೋಗ ಸೃಷ್ಟಿ ತುರ್ತು ಅಗತ್ಯವಾಗಿದೆ.

ಆದಾಯ ತೆರಿಗೆ ಮಿತಿ ಏರಿಕೆ
ಆದಾಯ ತೆರಿಗೆ ಮಿತಿಯನ್ನು ಹಾಲಿ ರೂ. 2.5 ಲಕ್ಷದಿಂದ 3 ಲಕ್ಷಕ್ಕೆ ಏರಿಕೆ ಮಾಡಬಹುದು ಎಂದು ಜನರು ಕಾತರದಿಂದ ಕಾಯುತ್ತಿದ್ದಾರೆ. ಒಂದೊಮ್ಮೆ ಈ ಮಿತಿ 5 ಲಕ್ಷಕ್ಕೂ ಏರಿಕೆಯಾಗಬಹುದು ಎಂದು ಜನರು ಕಾಯುತ್ತಿದ್ದಾರೆ. ಆದಾಯ ಮಿತಿ ಏರಿಕೆಯಾದಲ್ಲಿ ಮಧ್ಯಮ ಆದಾಯ ಹೊಂದಿರುವ ಜನರಿಗೆ ಸಹಾಯಕವಾಗಲಿದೆ.

ಕನಿಷ್ಠ ವೇತನ
ದೇಶದ ಶೇಕಡಾ 90ರಷ್ಟು ಜನರು ಅಸಂಘಟಿತ ವಲಯದಲ್ಲಿ ದುಡಿಯುತ್ತಿದ್ದಾರೆ. ಹೀಗಾಗಿ ಕನಿಷ್ಟ ವೇತನ ಏರಿಕೆಯಿಂದ ಕಾರ್ಮಿಕರಿಗೆ ಲಾಭವಾಗುವುದರ ಜತೆಗೆ ದೇಶದ ಆರ್ಥಿಕತೆಗೂ ಸಹಾಯವಾಗಲಿದೆ. ಹಾಗಾಗಿ ಕನಿಷ್ಠ ಕೂಲಿ ಏರಿಕೆಯ ನಿರೀಕ್ಷೆಯಲ್ಲಿ ಕಾರ್ಮಿಕರಿದ್ದಾರೆ.

ಗರಿಷ್ಠ ತೆರಿಗೆ ವ್ಯಾಪ್ತಿ ಏರಿಕೆ
20 ಲಕ್ಷಕ್ಕಿಂತ ಹೆಚ್ಚಿನ ಆದಾಯ ಇರುವವರಿಗೆ ಮಾತ್ರ ಶೇಕಡಾ 30ರ ಗರಿಷ್ಠ ತೆರಿಗೆ ವಿಧಿಸಬೇಕು ಎಂಬುದು ಹೆಚ್ಚಿನ ಜನರ ಆಗ್ರಹವಾಗಿದೆ. ಈ ಬೇಡಿಕೆಯನ್ನು ಕೇಂದ್ರ ಸರಕಾರ ಮಾನ್ಯ ಮಾಡುತ್ತದೆಯೋ ಎಂಬುದನ್ನು ಕಾದು ನೋಡಬೇಕಾಗಿದೆ.

ಸ್ಟ್ಯಾಂಡರ್ಡ್ ಡಿಡಕ್ಷನ್
ಸ್ಟ್ಯಾಂಡರ್ಡ್ ಡಿಡಕ್ಷನ್ ಕೇಂದ್ರ ಬಜೆಟ್ ಮೇಲಿರುವ ಮತ್ತೊಂದು ನಿರೀಕ್ಷೆಯಾಗಿದೆ. ಈ ದೀರ್ಘಕಾಲದ ನೀತಿಯ ಮರು-ಪರಿಚಯದಿಂದ ವೇತನ ಪಡೆಯುವ ವ್ಯಕ್ತಿಗಳು ತೆರಿಗೆ ಹೊರೆಯಿಂದ ರೂ. 1 ಲಕ್ಷ ಪರಿಹಾರವನ್ಜು ಪಡೆಯಬಹುದಾಗಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications