ಜಾರ್ಖಂಡ್ನಲ್ಲಿ ಐವರು ನಕ್ಸಲರ ಬಂಧನ
ಹಜಾರಿಬಾಘ್,ಸೆಪ್ಟೆಂಬರ್ 1: ಜಾರ್ಖಂಡ್ನಲ್ಲಿ ಐವರು ನಕ್ಸಲರನ್ನು ಪೊಲೀಸರು ಬಂಧಿಸಿದ್ದಾರೆ.ಎರಡು ಪ್ರತ್ಯೇಕ ಸ್ಥಳಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ, ಐವರು ನಕ್ಸಲರನ್ನು ಬಂಧನಕ್ಕೊಳಪಡಿಸಿದ್ದಾರೆ.
ಬಂಧಿತರ ಪೈಕಿ ನಿಷೇಧಿತ ತೃತೀಯ ಪ್ರಸ್ತುತಿ ಕಮಿಟಿ(ಟಿಪಿಸಿ)ಯ ಸದಸ್ಯನೂ ಒಬ್ಬ ಇದ್ದಾನೆ. ಉಳಿದ ನಾಲ್ವರು ಪೀಪಲ್ಸ್ ಲಿಬರೇಶನ್ ಫ್ರಂಟ್ ಆಫ್ ಇಂಡಿಯಾ (ಪಿಎಲ್ಎಫ್ಐ) ಸದಸ್ಯರು.
ಈ ನಡುವೆ, ದುಮ್ಕಾ ಸೆಂಟ್ರಲ್ ಜೈಲಿನಲ್ಲಿ ಮನೋಜ್ ಕುಮಾರ್ ದೆಹ್ರಿ(60) ಎಂಬ ನಕ್ಸಲ್ ನಾಯಕನೊಬ್ಬ ಜೈಲಿನಲ್ಲಿ ಮೃತಪಟ್ಟಿದ್ದಾನೆ. ಆತ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ. 2008ರಿಂದ ಜೈಲಿನಲ್ಲಿದ್ದ. ಆತನಿಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದ ಸಮಸ್ಯೆ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಲತೇಹಾರ್ ಜಿಲ್ಲೆಯ ಬಾಲುಮಠ್ ಪ್ರದೇಶದಲ್ಲಿ ಟಿಪಿಸಿ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಸಾಹೇಂದ್ರ ಯಾದವ್ ಅಲಿಯಾಸ್ ನರಿಯನ್ ಲತೇಹಾರ್ ಜಿಲ್ಲೆಯ ಬಾರ್ಬಹ್ದಿಹ್ ಗ್ರಾಮಕ್ಕೆ ಬೇಟಿ ನೀಡುವ ಸಂದರ್ಭದಲ್ಲಿ ಬಂಧಿಸಲಾಗಿದೆ.
ಈತನ ತಲೆಗೆ ಒಂದು ಲಕ್ಷ ರೂಪಾಯಿ ಇನಾಮು ಘೋಷಿಸಲಾಗಿತ್ತು. ಲೂಟಿ, ಅಪಹರಣ ಮುಂತಾದವುಗಳು ಸೇರಿ 17 ಪ್ರಕರಣಗಳು ಈತನ ವಿರುದ್ಧ ದಾಖಲಾಗಿದ್ದವು.
ರಾಮಗಢ, ರಾಂಚಿ, ಹಜಾರಿಬಾಘ್, ಛಾತ್ರ ಜಿಲ್ಲೆಗಳಲ್ಲಿ ಭಯೋತ್ಪಾದನೆ ಉಂಟು ಮಾಡುತ್ತಿದ್ದ ಪಿಎಲ್ಎಫ್ಐಯ ನಾಲ್ವರು ಸದಸ್ಯರನ್ನು ಹಜಾರಿಬಾಘ್ ಜಿಲ್ಲೆಯಲ್ಲಿ ರಸ್ತೆ ಬದಿ ಹೋಟೆಲ್ನಲ್ಲಿ ಊಟಕ್ಕೆ ಬಂದಿದ್ದಾಗ ಬಂಧಿಸಲಾಗಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications