ಬಂಗಾಳದಲ್ಲಿ ಕಾಂಗ್ರೆಸ್, ಕೇರಳದಲ್ಲಿ ಬಿಜೆಪಿ ಶೂನ್ಯ ಸಾಧನೆ
ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಬಹುತೇಕ ಹೊರಬಿದ್ದಿದ್ದು ಫಲಿತಾಂಶ ಘೋಷಣೆಯ ಔಪಚಾರಿಕತೆ ಮಾತ್ರವೇ ಉಳಿದಿದೆ.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಆಸೆಗೆ ತಣ್ಣೀರು ಎರಚಿದೆ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ. ತಮಿಳುನಾಡಿನಲ್ಲಿ ಹತ್ತು ವರ್ಷದ ನಂತರ ಡಿಎಂಕೆ ಮತ್ತೆ ಅಧಿಕಾಕ್ಕೆ ಏರಿದೆ. ಕೇರಳದಲ್ಲಿ ಪಿಣರಾಯಿ ವಿಜಯನ್ ಅವರ ಉತ್ತಮ ಕಾರ್ಯಕ್ಕೆ ಮತದಾರರು ತಲೆದೂಗಿ ಮತ್ತೊಂದು ಅವಕಾಶ ನೀಡಿದ್ದಾರೆ. ಅಸ್ಸಾಂನಲ್ಲಿ ಬಿಜೆಪಿ ಹಾಗೂ ಪುದುಚೆರಿಯಲ್ಲಿ ಎನ್ಡಿಎ ಸರ್ಕಾರ ರಚಿಸಲಿವೆ.
ಆದರೆ ಎರಡು ದೊಡ್ಡ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಸಹ ಎರಡು ರಾಜ್ಯಗಳಲ್ಲಿ ಶೂನ್ಯ ಸಾಧನೆ ಮಾಡಿವೆ. ಅದರಲ್ಲಿಯೂ ಕಾಂಗ್ರೆಸ್ ಪಕ್ಷವಂತೂ ಈ ಚುನಾವಣೆಯಲ್ಲಿ ತಮ್ಮ ಕಳಪೆ ಸಾಧನೆಯನ್ನು ಮುಂದುವರೆಸಿದೆ.

ಕೇರಳ ರಾಜ್ಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಒಂದು ಸ್ಥಾನ ಗೆದ್ದಿದ್ದ ಬಿಜೆಪಿ ಪಕ್ಷ ಈ ಬಾರಿ ಆ ಸ್ಥಾನವನ್ನೂ ಕಳೆದುಕೊಂಡಿದೆ. ಈ ಬಾರಿ ಕನಿಷ್ಟ 4-5 ಸ್ಥಾನಗಳಲ್ಲಿ ಗೆಲ್ಲುವ ನಿರೀಕ್ಷೆ ಇರಿಸಿತ್ತು. ಆದರೆ ಕಳೆದ ಬಾರಿ ಗೆದ್ದಿದ್ದ ಸ್ಥಾನವನ್ನೂ ಉಳಿಸಿಕೊಳ್ಳಲು ವಿಫಲವಾಗಿದೆ ಬಿಜೆಪಿ.
113 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಿತ್ತು ಬಿಜೆಪಿ. ಈ ಬಾರಿ ಮೆಟ್ರೊ ಮ್ಯಾನ್ ಶ್ರೀಧರನ್ ಅವರನ್ನು ಕರೆತಂದಿತ್ತು, ಕೇರಳದ ಬಿಜೆಪಿ ಮುಖವನ್ನಾಗಿ ಶ್ರೀಧರನ್ ಅನ್ನು ಪ್ರೊಜೆಕ್ಟ್ ಮಾಡಲಾಗಿತ್ತು. ಪಲ್ಲಕ್ಕಾಡ್ನಿಂದ ಸ್ಪರ್ಧಿಸಿದ್ದ ಶ್ರೀಧರನ್ ಅವರು ಆರಂಭಿಕ ಮುನ್ನಡೆ ಪಡೆದರಾದರೂ ಅವರೂ ಸಹ ಕೊನೆಗೆ ಸೋಲು ಕಂಡರು.
Recommended Video
ಇನ್ನು ಕಾಂಗ್ರೆಸ್ ಪಕ್ಷ ತಮ್ಮ ಕಳಪೆ ಪ್ರದರ್ಶನವನ್ನು ಮುಂದುವರೆಸಿದ್ದು ಪಂಚ ರಾಜ್ಯಗಳಲ್ಲಿಯೂ ಚೇತೋಹಾರಿ ಪ್ರದರ್ಶನ ತೋರಲು ವಿಫಲವಾಗಿದೆ. ಅದರಲ್ಲೂ ಪಶ್ಚಿಮ ಬಂಗಾಳದಲ್ಲಿ ಒಂದು ಕ್ಷೇತ್ರದಲ್ಲೂ ಗೆಲುವು ಕಂಡಿಲ್ಲ ಕಾಂಗ್ರೆಸ್.
-
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications