ಲೋಕಸಭಾ ಚುನಾವಣೆಯ ಜೊತೆಗೆ ಐದು ರಾಜ್ಯಗಳ ಅಸೆಂಬ್ಲಿ ಚುನಾವಣೆ?
Recommended Video

ನವದೆಹಲಿ, ಡಿ 3: ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯ ಜೊತೆಗೆ, ನಾಲ್ಕು ರಾಜ್ಯಗಳ ಅಸೆಂಬ್ಲಿ ಚುನಾವಣೆಯನ್ನೂ ಚುನಾವಣಾ ಆಯೋಗ ನಡೆಸುವ ಸಾಧ್ಯತೆಯಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಆಂಧ್ರಪ್ರದೇಶ, ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ಒಡಿಶಾ ರಾಜ್ಯದ ಅಸೆಂಬ್ಲಿ ಚುನಾವಣೆಯನ್ನು ಆಯೋಗ, ಲೋಕಸಭಾ ಚುನಾವಣೆಯ ಜೊತೆಗೆ ನಡೆಸುವ ಬಗ್ಗೆ, ಚಿಂತನೆ ನಡೆಸುತ್ತಿದೆ ಎಂದು ಆಯೋಗದ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಈ ಎಲ್ಲಾ ರಾಜ್ಯಗಳ ಹಾಲೀ ವಿಧಾನಸಭೆಯ ಅವಧಿ, ಬರುವ ವರ್ಷ ಮೇ ಮತ್ತು ಜೂನ್ ತಿಂಗಳಲ್ಲಿ ಮುಕ್ತಾಯಗೊಳ್ಳಲಿದೆ. ಇದರ ಜೊತೆಗೆ, ಅವಧಿಗೆ ಮುನ್ನ ಅಸೆಂಬ್ಲಿ ವಿಸರ್ಜನೆಗೊಂಡಿರುವ ಜಮ್ಮು ಮತ್ತು ಕಾಶ್ಮೀರದ ಚುನಾವಣೆಯನ್ನೂ ಆಯೋಗ ಕೈಗೆತ್ತಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.

ಅಸೆಂಬ್ಲಿ ವಿಸರ್ಜನೆಗೊಂಡ ಆರು ತಿಂಗಳೊಳಗೆ ಚುನಾವಣೆ ನಡೆಸಬೇಕಾಗಿರುವುದರಿಂದ, ಜಮ್ಮು ಮತ್ತು ಕಾಶ್ಮೀರದ ಚುನಾವಣೆಯೂ, ಸಾರ್ವತ್ರಿಕ ಚುನಾವಣೆಯ ಜೊತೆಗೆ ಅಥವಾ ಅದಕ್ಕೂ ಮುನ್ನ ನಡೆಯಬಹುದು ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಹೇಳಿದ್ದಾರೆ.
ಲೋಕಸಭಾ ಚುನಾವಣೆಯ ವೇಳೆ, ಈ ಎಲ್ಲಾ ರಾಜ್ಯಗಳಲ್ಲಿ ಭದ್ರತೆಯನ್ನು ಹೇಗೂ ಒದಗಿಸಬೇಕಾಗುತ್ತದೆ, ಅದರ ಜೊತೆಗೆ ವಿಧಾನಸಭಾ ಚುನಾವಣೆಯೂ ನಡೆದರೆ, ಹೆಚ್ಚುವರಿ ಖರ್ಚನ್ನು ತಗ್ಗಿಸಬಹುದಾಗಿದೆ ಎನ್ನುವುದು ಆಯೋಗದ ಲೆಕ್ಕಾಚಾರ.
ಐದು ರಾಜ್ಯಗಳ ಹಾಲೀ ಅಸೆಂಬ್ಲಿಯ ಅವಧಿ ಎಲ್ಲಿಯವರೆಗಿದೆ? ಇಲ್ಲಿದೆ ಮಾಹಿತಿ:
ಜಮ್ಮು ಮತ್ತು ಕಾಶ್ಮೀರ : 21.05.2019 ( ಈ ದಿನಾಂಕದೊಳಗೆ ಚುನಾವಣಾ ಪ್ರಕ್ರಿಯೆ ಮುಗಿದಿರಬೇಕು)
ಸಿಕ್ಕಿಂ : 27.05.2019
ಅರುಣಾಚಲ ಪ್ರದೇಶ: 01.06.2019
ಆಂಧ್ರಪ್ರದೇಶ: 18.06.2019
ಒಡಿಶಾ : 11.06.2019
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications