ಲೋಕಸಭಾ ಚುನಾವಣೆಯ ಜೊತೆಗೆ ಐದು ರಾಜ್ಯಗಳ ಅಸೆಂಬ್ಲಿ ಚುನಾವಣೆ?
Recommended Video

ನವದೆಹಲಿ, ಡಿ 3: ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯ ಜೊತೆಗೆ, ನಾಲ್ಕು ರಾಜ್ಯಗಳ ಅಸೆಂಬ್ಲಿ ಚುನಾವಣೆಯನ್ನೂ ಚುನಾವಣಾ ಆಯೋಗ ನಡೆಸುವ ಸಾಧ್ಯತೆಯಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಆಂಧ್ರಪ್ರದೇಶ, ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ಒಡಿಶಾ ರಾಜ್ಯದ ಅಸೆಂಬ್ಲಿ ಚುನಾವಣೆಯನ್ನು ಆಯೋಗ, ಲೋಕಸಭಾ ಚುನಾವಣೆಯ ಜೊತೆಗೆ ನಡೆಸುವ ಬಗ್ಗೆ, ಚಿಂತನೆ ನಡೆಸುತ್ತಿದೆ ಎಂದು ಆಯೋಗದ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಈ ಎಲ್ಲಾ ರಾಜ್ಯಗಳ ಹಾಲೀ ವಿಧಾನಸಭೆಯ ಅವಧಿ, ಬರುವ ವರ್ಷ ಮೇ ಮತ್ತು ಜೂನ್ ತಿಂಗಳಲ್ಲಿ ಮುಕ್ತಾಯಗೊಳ್ಳಲಿದೆ. ಇದರ ಜೊತೆಗೆ, ಅವಧಿಗೆ ಮುನ್ನ ಅಸೆಂಬ್ಲಿ ವಿಸರ್ಜನೆಗೊಂಡಿರುವ ಜಮ್ಮು ಮತ್ತು ಕಾಶ್ಮೀರದ ಚುನಾವಣೆಯನ್ನೂ ಆಯೋಗ ಕೈಗೆತ್ತಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.

ಅಸೆಂಬ್ಲಿ ವಿಸರ್ಜನೆಗೊಂಡ ಆರು ತಿಂಗಳೊಳಗೆ ಚುನಾವಣೆ ನಡೆಸಬೇಕಾಗಿರುವುದರಿಂದ, ಜಮ್ಮು ಮತ್ತು ಕಾಶ್ಮೀರದ ಚುನಾವಣೆಯೂ, ಸಾರ್ವತ್ರಿಕ ಚುನಾವಣೆಯ ಜೊತೆಗೆ ಅಥವಾ ಅದಕ್ಕೂ ಮುನ್ನ ನಡೆಯಬಹುದು ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಹೇಳಿದ್ದಾರೆ.
ಲೋಕಸಭಾ ಚುನಾವಣೆಯ ವೇಳೆ, ಈ ಎಲ್ಲಾ ರಾಜ್ಯಗಳಲ್ಲಿ ಭದ್ರತೆಯನ್ನು ಹೇಗೂ ಒದಗಿಸಬೇಕಾಗುತ್ತದೆ, ಅದರ ಜೊತೆಗೆ ವಿಧಾನಸಭಾ ಚುನಾವಣೆಯೂ ನಡೆದರೆ, ಹೆಚ್ಚುವರಿ ಖರ್ಚನ್ನು ತಗ್ಗಿಸಬಹುದಾಗಿದೆ ಎನ್ನುವುದು ಆಯೋಗದ ಲೆಕ್ಕಾಚಾರ.
ಐದು ರಾಜ್ಯಗಳ ಹಾಲೀ ಅಸೆಂಬ್ಲಿಯ ಅವಧಿ ಎಲ್ಲಿಯವರೆಗಿದೆ? ಇಲ್ಲಿದೆ ಮಾಹಿತಿ:
ಜಮ್ಮು ಮತ್ತು ಕಾಶ್ಮೀರ : 21.05.2019 ( ಈ ದಿನಾಂಕದೊಳಗೆ ಚುನಾವಣಾ ಪ್ರಕ್ರಿಯೆ ಮುಗಿದಿರಬೇಕು)
ಸಿಕ್ಕಿಂ : 27.05.2019
ಅರುಣಾಚಲ ಪ್ರದೇಶ: 01.06.2019
ಆಂಧ್ರಪ್ರದೇಶ: 18.06.2019
ಒಡಿಶಾ : 11.06.2019
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications