ಕೊರೊನಾ ಹೆಚ್ಚಳ: ವಿಮಾನಗಳಲ್ಲಿ ಕೋವಿಡ್ ನಿಯಮ ಕಡ್ಡಾಯ ಪಾಲನೆಗೆ ಸೂಚನೆ
ದೇಶದ ಹಲವಾರು ಭಾಗಗಳಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಬುಧವಾರ ಪ್ರಯಾಣಿಕರು ಕೋವಿಡ್ ನಿಯಮಗಳನ್ನು ಅನುಸರಿಸುವುದನ್ನು ಮತ್ತು ವಿಮಾನದೊಳಗೆ ತಮ್ಮ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಒಂದು ವೇಳೆ ಪ್ರಯಾಣಿಕರು ನಿಯಮ ಅನುಸರಿಸಲು ನಿರಾಕರಿಸಿದರೆ, ವಿಮಾನಯಾನ ಸಂಸ್ಥೆಯು ಡಿಬೋರ್ಡಿಂಗ್ ಸೇರಿದಂತೆ ಕಠಿಣ ಕ್ರಮವನ್ನು ತೆಗೆದುಕೊಳ್ಳಬಹುದು ಎಂದು ತಿಳಿಸಿದೆ.
ವಿಮಾನಯಾನ ನಿಯಂತ್ರಕವು ಎಲ್ಲಾ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಪ್ರೋಟೋಕಾಲ್ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತು ಪ್ರಯಾಣಿಕರು ಮಾಸ್ಕ್ಗಳನ್ನು ಸರಿಯಾಗಿ ಧರಿಸಿರುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ನಿಯಮಗಳನ್ನು ಅನುಸರಿಸಲು ವಿಫಲರಾದವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದೆ.
ವಿಮಾನ ನಿಲ್ದಾಣಗಳಲ್ಲಿ ಮತ್ತು ವಿಮಾನಗಳ ಒಳಗೆ ದಿಢೀರ್ ತಪಾಸಣೆಗಳನ್ನು ಸಹ ಕೈಗೊಳ್ಳಲಾಗುತ್ತದೆ. ವಿವಿಧ ಪ್ಲಾಟ್ಫಾರ್ಮ್ಗಳ ಮೂಲಕ ಪ್ರಯಾಣಿಕರಿಗೆ ಸರಿಯಾದ ಮಾಹಿತಿ ಇದೆ ಎಂದು ಏರ್ಲೈನ್ಸ್ ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದೆ.

ವಿಮಾನ ನಿಲ್ದಾಣಗಳು ಮತ್ತು ವಿಮಾನಯಾನ ಸಂಸ್ಥೆಗಳು ಮತ್ತು ಪ್ರಯಾಣಿಕರ ಮೇಲೆ ಅಚ್ಚರಿಯ ತಪಾಸಣೆ ನಡೆಸಲಾಗುವುದು ಎಂದು ಡಿಜಿಸಿಎ ತಿಳಿಸಿದೆ. ಜೂನ್ನಲ್ಲಿ ಹೊರಡಿಸಲಾದ ಸುತ್ತೋಲೆಯನ್ನು ಸೂಚಿಸಿದ ಡಿಜಿಸಿಎ ಕಟ್ಟುನಿಟ್ಟಾದ ಅನುಸರಣೆ ಇರಬೇಕು ಎಂದು ಹೇಳಿದೆ.
ದೇಶದಲ್ಲಿ ಕೊರೊನಾ ಪ್ರಕರಣ ಸಂಖ್ಯೆ ಹೆಚ್ಚಳ
ಜೂನ್ನಲ್ಲಿ ಹೊರಡಿಸಲಾದ ಆದೇಶಗಳ ಅಡಿಯಲ್ಲಿ, ವಿಶೇಷ ಸಂದರ್ಭಗಳಲ್ಲಿ ಮತ್ತು ಅನುಮತಿಸಲಾದ ಕಾರಣಗಳಿಗಾಗಿ ಮಾತ್ರ ಮಾಸ್ಕ್ಗಳನ್ನು ತೆಗೆದುಹಾಕಬಹುದು. ಮಾಸ್ಕ್ ಧರಿಸದವರಿಗೆ ವಿಮಾನ ನಿಲ್ದಾಣಕ್ಕೆ ಪ್ರವೇಶ ನಿರಾಕರಿಸಲು ಕೇಳಲಾಗಿದೆ. ವಿಮಾನ ನಿಲ್ದಾಣದ ಒಳಗೆ ಪ್ರಮುಖ ಸ್ಥಳಗಳಲ್ಲಿ ಸ್ಯಾನಿಟೈಸರ್ಗಳನ್ನು ಒದಗಿಸುವುದು ಸೇರಿದಂತೆ ಸರಿಯಾದ ಸ್ವಚ್ಛತಾ ಕ್ರಮಗಳನ್ನು ತೆಗೆದುಕೊಳ್ಳಲು ಸಲಹೆ ನೀಡಲಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ (MoHFW) ದೈನಂದಿನ ಬುಲೆಟಿನ್ ಪ್ರಕಾರ, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9,062 ಕೊರೊನ ವೈರಸ್ ಸೋಂಕುಗಳು ವರದಿಯಾಗಿದ್ದು, 36 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಹೇಳಿದೆ.

ಮುನ್ನೆಚ್ಚರಿಕೆ ವಹಿಸಲು ಸೂಚನೆ
ಸಚಿವಾಲಯದ ಅಂಕಿಅಂಶಗಳ ಪ್ರಕಾರ, ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ 1,05,058 ರಷ್ಟಿದೆ, ಇದು ಒಟ್ಟಾರೆ ಸಂಖ್ಯೆಯ ಶೇಕಡಾ 0.24 ರಷ್ಟಿದೆ. ಸಚಿವಾಲಯದ ಅಂಕಿಅಂಶಗಳ ಪ್ರಕಾರ ಒಟ್ಟಾರೆ ಸಾವಿನ ಸಂಖ್ಯೆ 527,134 ಕ್ಕೆ ಏರಿಕೆಯಾಗಿದೆ.
ನೀತಿ ಆಯೋಗದ ಆರೋಗ್ಯ ವಿಭಾಗದ ಸದಸ್ಯ ಡಾ. ವಿ.ಕೆ ಪಾಲ್, ಕೋವಿಡ್ -19 ಇನ್ನೂ ಸಂಪೂರ್ಣವಾಗಿ ಮುಗಿದಿಲ್ಲ. ಜನರು ಜಾಗರೂಕರಾಗಿರಬೇಕು, ಎಲ್ಲರೂ ಮೂರನೇ ಡೋಸ್ ತೆಗೆದುಕೊಳ್ಳಬೇಕು ಎಂದು ಹೇಳಿದರು.
"ಪ್ರಕರಣಗಳ ಸಂಖ್ಯೆಯಲ್ಲಿನ ಬದಲಾವಣೆಗಳನ್ನು ನಾವು ಊಹಿಸಲು ಸಾಧ್ಯವಿಲ್ಲ, ಆದ್ದರಿಂದ ನಾವು ಮುಂಜಾಗ್ರತೆ ವಹಿಸಬೇಕು ಮತ್ತು ಮುನ್ನೆಚ್ಚರಿಕೆಯಾಗಿ ಲಸಿಕೆ ಪಡೆಯಬೇಕು. ಕಾರ್ಬೆವ್ಯಾಕ್ಸ್ ಲಸಿಕೆಯನ್ನು ಈಗ ಕೋವಾಕ್ಸಿನ್ ಮತ್ತು ಕೋವಿಶೀಲ್ಡ್ ಪಡೆದವರಿಗೂ ನೀಡಬಹುದು" ಎಂದು ಡಾ. ಪಾಲ್ ತಿಳಿಸಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications