ವಂದೇ ಮಾತರಂ ಹಾಡದ ಮುಸ್ಲಿಂ ಕೌನ್ಸಿಲರ್ ಗಳಿಗೆ ಬಹಿಷ್ಕಾರ
ಉತ್ತರ ಪ್ರದೇಶದಲ್ಲಿ ಈಗ ಯೋಗಿ ಆದಿತ್ಯನಾಥ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ, ಅಲ್ಲಿ ಭಾರತೀಯತೆಯ ಭಾವನೆಗಳಿಗೆ ಧಕ್ಕೆ ತರುವಂಥ ಯಾವುದೇ ಪ್ರಕರಣಗಳಾಗಲೀ ಕ್ರಮ ಖಾತ್ರಿ ಎಂಬಂತಹ ವಾತಾವರಣ ನಿರ್ಮಾಣವಾಗಿದೆ.
ಮೀರತ್, ಮಾರ್ಚ್ 31: ವಂದೇ ಮಾತರಂ ಹಾಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಪುರಸಭೆಯ ಏಳು ಕೌನ್ಸಿಲರ್ ಗಳನ್ನು ನಗರ ಸಭೆಯ ಸಭೆಯಿಂದ ಬಹಿಷ್ಕಾರ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮಂಗಳವಾರ ಬೆಳಗ್ಗೆ ಎಂದಿನಂತೆ ಕಲಾಪ ಆರಂಭವಾಗಿತ್ತು. ಕಲಾಪಕ್ಕೂ ಮೊದಲು ವಂದೇ ಮಾತರಂ ಹಾಡಲಾಯಿತು. ಆದರೆ, ಕೌನ್ಸಿಲ್ ಸಭೆಗೆ ಹಾಜರಾಗಿದ್ದ ಮುಸ್ಲಿಂ ಕೌನ್ಸಿಲರ್ ಗಳು ವಂದೇ ಮಾತರಂ ಹಾಡುತ್ತಿರುವಾಗ ಸಭೆಯಿಂದ ಹೊರನಡೆದಿದ್ದರು.

ಹಾಗೆ, ಅವರು ಸಭೆಯಿಂದ ಹೊರನಡೆಯುವಾಗ ಸಹ ಸದಸ್ಯರು ಅವರನ್ನು ತಡೆದರೂ ಅವರು ನಿಲ್ಲಲಿಲ್ಲ. ಹಾಗಾಗಿ, ಸಭಾಧ್ಯಕ್ಷರಾದ ಶ್ರೀಕಾಂತ್ ಅಹ್ಲುವಾಲಿಯಾ ಅವರು ಸದಸ್ಯರನ್ನು ಸಭೆಯಿಂದ ಬಹಿಷ್ಕಾರಗೊಳಿಸಿ ಆದೇಶ ನೀಡಿದರು.
ಹಿಂದಿನಿಂದಲೂ ಇಲ್ಲಿ ಇದೇ ಪದ್ಧತಿಯಿತ್ತು. ವಂದೇ ಮಾತರಂ ಹಾಡುವಾಗ ಆ ಹಾಡನ್ನು ಹಾಡಲು ಇಷ್ಟವಿಲ್ಲದವರು ಸಭೆಯಿಂದ ಹೊರನಡೆಯಬಹುದಾಗಿತ್ತು. ಹಾಡು ಮುಗಿದ ಮೇಲೆ ಸಭೆಗೆ ಹಿಂದಿರುಗಬಹುದಾಗಿತ್ತು.
ಆದರೆ, ಉತ್ತರ ಪ್ರದೇಶದಲ್ಲಿ ಈಗ ಯೋಗಿ ಆದಿತ್ಯನಾಥ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ, ಅಲ್ಲಿ ಭಾರತೀಯತೆಯ ಭಾವನೆಗಳಿಗೆ ಧಕ್ಕೆ ತರುವಂಥ ಯಾವುದೇ ಪ್ರಕರಣಗಳಾಗಲೀ ಕ್ರಮ ಖಾತ್ರಿ ಎಂಬಂತಹ ವಾತಾವರಣ ನಿರ್ಮಾಣವಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications