ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬರುವ 5 ದಿನಗಳ ಕಾಲ ದೆಹಲಿಯ ಜನರಿಗೆ ಬಿಸಿಲಿನ ತಾಪದಿಂದ ಮುಕ್ತಿ

|
Google Oneindia Kannada News

ಹೊಸದಿಲ್ಲಿ ಮೇ 28: ಮುಂಬರುವ 5 ದಿನಗಳ ಕಾಲ ದಿಲ್ಲಿಯ ಜನರಿಗೆ ಬಿಸಿಲಿನ ತಾಪದಿಂದ ಮುಕ್ತಿ ಸಿಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಮುಂದಿನ ಐದು ದಿನಗಳವರೆಗೆ ರಾಷ್ಟ್ರ ರಾಜಧಾನಿಯಲ್ಲಿ ಶಾಖದ ಅಲೆಯ ಪರಿಸ್ಥಿತಿಗಳ ಸಾಧ್ಯತೆಯಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ದೆಹಲಿಯ ಗರಿಷ್ಠ ತಾಪಮಾನ 39.3 ಡಿಗ್ರಿ ಸೆಲ್ಸಿಯಸ್‌ಗೆ (ಡಿಗ್ರಿ ಸೆಲ್ಸಿಯಸ್) ಏರಿಕೆಯಾಗಿದೆ. ಇದು ವರ್ಷದ ಈ ಸಮಯಕ್ಕೆ ಸಾಮಾನ್ಯಕ್ಕಿಂತ ಕಡಿಮೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಮತ್ತೊಂದೆಡೆ, ಈಶಾನ್ಯ ಭಾರತ, ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದಿದೆ.

ಮಳೆ ನಂತರ ಮುಂದುವರೆದ ಶಾಖ

ಮಳೆ ನಂತರ ಮುಂದುವರೆದ ಶಾಖ

ಈ ವಾರದ ಆರಂಭದಲ್ಲಿ ದೆಹಲಿಯಲ್ಲಿ ಗುಡುಗು ಸಹಿತ ಮಳೆ ಸುರಿಯಲಿದ್ದು ಗಾಳಿಯ ವೇಗ ಗಂಟೆಗೆ 60 ಕಿಮೀ ತಲುಪುವುದರೊಂದಿಗೆ ದಿನದ ತಾಪಮಾನವನ್ನು ಗಣನೀಯವಾಗಿ ಕಡಿಮೆ ಮಾಡಿತು. ಮಳೆಯಿಂದಾಗಿ ದೆಹಲಿಯ ತಾಪಮಾನ ಕಡಿಮೆಯಾಗಿತ್ತು. ಬಳಿಕ ನಗರದ ಕನಿಷ್ಠ ಎರಡು ಭಾಗಗಳಲ್ಲಿ ತಾಪಮಾನ 49 ಡಿಗ್ರಿ ಸೆಲ್ಸಿಯಸ್ ದಾಟಿದೆ. ಸೋಮವಾರ ಮತ್ತು ಮಂಗಳವಾರದ ಬಳಿಕ ಮತ್ತೆ ತಾಪಮಾನ ಹೆಚ್ಚಾಗಿದೆ ಎಂದು ಹವಾಮಾನ ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿಯ 11 ಹವಾಮಾನ ಕೇಂದ್ರಗಳಲ್ಲಿ ಐದರಲ್ಲಿ ಗರಿಷ್ಠ ತಾಪಮಾನ ಶುಕ್ರವಾರ 40 ಡಿಗ್ರಿ ಸೆಲ್ಸಿಯಸ್ ದಾಟಿದೆ.

ತಾಪಮಾನದಿಂದ ಮುಕ್ತಿ

ತಾಪಮಾನದಿಂದ ಮುಕ್ತಿ

ಮುಂದಿನ ಎರಡು ದಿನಗಳಲ್ಲಿ ರಾಜಧಾನಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ಐಎಂಡಿ ವಿಜ್ಞಾನಿ ಆರ್‌ಕೆ ಜೆನಮಣಿ ತಿಳಿಸಿದ್ದಾರೆ. ದೆಹಲಿಯ ನೆರೆಯ ಪ್ರದೇಶಗಳಾದ ದಕ್ಷಿಣ ಹರಿಯಾಣ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಮಳೆಯಿಂದಾಗಿ ಮುಂಬರುವ ದಿನಗಳಲ್ಲಿ ತಾಪಮಾನವು ಗಮನಾರ್ಹವಾಗಿ ಏರುವ ನಿರೀಕ್ಷೆಯಿಲ್ಲ ಎಂದು ಅವರು ಹೇಳಿದ್ದಾರೆ. "ದಕ್ಷಿಣ ಹರಿಯಾಣದ ನುಹ್ ಮತ್ತು ಗುರುಗ್ರಾಮ್ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಶುಕ್ರವಾರ ಮಳೆಯಾಗಿರುವುದರಿಂದ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇದೆ. ಮುಂದಿನ ಐದು ದಿನಗಳವರೆಗೆ ಶಾಖದ ಅಲೆಯ ಪರಿಸ್ಥಿತಿಗಳನ್ನು ನಿರೀಕ್ಷಿಸಲಾಗುವುದಿಲ್ಲ. ಒಟ್ಟಾರೆ ಮೇ ತಿಂಗಳ ನಂತರ ಉತ್ತಮವಾಗಿದೆ' ಎಂದು ಐಎಂಡಿ ವಿಜ್ಞಾನಿ ಆರ್‌ಕೆ ಜೆನಾಮಣಿ ಹೇಳಿದ್ದಾರೆ.

ಕರ್ನಾಟಕದಲ್ಲೂ ಮಳೆ ಸಾಧ್ಯತೆ

ಕರ್ನಾಟಕದಲ್ಲೂ ಮಳೆ ಸಾಧ್ಯತೆ

ಮುಂದಿನ 24 ಗಂಟೆಗಳಲ್ಲಿ, ಈಶಾನ್ಯ ಭಾರತ, ತಮಿಳುನಾಡು, ಕೇರಳ, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮತ್ತೊಂದೆಡೆ, ಪಶ್ಚಿಮ ಹಿಮಾಲಯ ಮತ್ತು ದಕ್ಷಿಣ ಮತ್ತು ಕರಾವಳಿ ಕರ್ನಾಟಕದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

ಈಶಾನ್ಯ ಭಾಗಗಳಲ್ಲಿ ಚಂಡಮಾರುತ ಮತ್ತು ಗುಡುಗು ಸಹಿತ ಮಳೆ

ಈಶಾನ್ಯ ಭಾಗಗಳಲ್ಲಿ ಚಂಡಮಾರುತ ಮತ್ತು ಗುಡುಗು ಸಹಿತ ಮಳೆ

ಹವಾಮಾನ ಇಲಾಖೆಯ ಪ್ರಕಾರ, ಬಿಹಾರ, ಜಾರ್ಖಂಡ್, ಒಡಿಶಾ, ಛತ್ತೀಸ್‌ಗಢ, ಉತ್ತರ ಪ್ರದೇಶ, ಪೂರ್ವ ಮಧ್ಯಪ್ರದೇಶ ಮತ್ತು ತೆಲಂಗಾಣ ಮತ್ತು ಆಂಧ್ರಪ್ರದೇಶದ ಪ್ರತ್ಯೇಕ ಭಾಗಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಪ್ರದೇಶದ ಈಶಾನ್ಯ ರಾಜಸ್ಥಾನ, ದೆಹಲಿ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ಧೂಳಿನ ಚಂಡಮಾರುತ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

English summary
The Indian Meteorological Department (IMD) has said that for the next 5 days, the people of Delhi will be free from the heat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X