ಫೋರ್ಬ್ಸ್ ಭವಿಷ್ಯದ ಪ್ರಭಾವಿಗಳ ಪಟ್ಟಿಯಲ್ಲಿ ಪ್ರಶಾಂತ್, ಕನ್ಹಯ್ಯ
ಬೆಂಗಳೂರು, ಜನವರಿ 07: ಮುಂದಿನ ದಶಕದಲ್ಲಿ ಅತ್ಯಂತ ಪ್ರಭಾವ ಬೀರಬಲ್ಲ ಟಾಪ್ 20 ವ್ಯಕ್ತಿಗಳ ಪಟ್ಟಿಯನ್ನು ಫೋರ್ಬ್ಸ್ ಇಂಡಿಯಾ ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಬಿಹಾರದಿಂದ ಇಬ್ಬರು ಸೇರಿದ್ದಾರೆ
ಬಿಹಾರ ಮೂಲದ ಚುನಾವಣಾ ತಂತ್ರಗಾರ ಪ್ರಶಾಂತ ಕಿಶೋರ್ ಮತ್ತು ಜೆಎನ್ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರು ವಿಶ್ವದ 20 ಭವಿಷ್ಯದ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ಫೋರ್ಬ್ಸ್ ಇಂಡಿಯಾ ಮ್ಯಾಗಝಿನ್ ಪ್ರಕಟಿಸಿದೆ. ಮುಂದಿನ ದಶಕದಲ್ಲಿನ ನಿರ್ಣಾಯಕ ವ್ಯಕ್ತಿತ್ವಗಳಾಗಬಹುದು ಎಂದು ಹೇಳಲಾಗಿದೆ.
ಪ್ರಶಾಂತ್ ಅವರು ಬಿಹಾರದ ರೋಹ್ತಾಸ್ ಜಿಲ್ಲೆಯ ಸಸಾರಾಂ ಬಳಿಯ ಗ್ರಾಮದವರಾದರು. ಕನ್ಹಯ್ಯ ಅವರು ಬೇಗುಸರಾಯಿ ಜಿಲ್ಲೆಯ ಗ್ರಾಮಕ್ಕೆ ಸೇರಿದವರಾಗಿದ್ದಾರೆ. ಇವರಿಬ್ಬರಲ್ಲದೆ ಹರ್ಯಾಣದ ಉಪ ಮುಖ್ಯಮಂತ್ರಿ ದುಷ್ಯಂತ ಚೌಟಾಲಾ, ಟಿಎಂಸಿಯ ಸಂಸದೆ ಮಹುವಾ ಮೊಯಿತ್ರಾ, ಉದ್ಯಮಿ ಆದಿ ಗಾದ್ರೆಜ್ ಅವರ ಗಾದ್ರೆಜ್ ಕುಟುಂಬ ಮತ್ತು ಮಿಚೆಲಿಯನ್ ಸ್ಟಾರ್ ಪಡೆದ ಮೊದಲ ಭಾರತಿಯ ಮಹಿಳೆ, ಶೆಫ್ ಗರಿಮಾ ಅರೋರಾ ಅವರು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಭಾರತೀಯ ಮೂಲದ ಗಣ್ಯರಾದ ಅಮೆರಿಕ ಸಂಜಾತ ಹಾಸ್ಯ ಕಲಾವಿದ ಮತ್ತು ರಾಜಕೀಯ ವೀಕ್ಷಕ ಹಸನ್ ಮಿನ್ಹಾಜ್ ಮತ್ತು ಆರ್ಸೆಲರ್ ಮಿತ್ತಲ್ ಯುರೋಪ್ನ ಸಿಇಒ ಆದಿತ್ಯ ಮಿತ್ತಲ್ ಅವರನ್ನು ಪಟ್ಟಿಯಲ್ಲಿ ಕಾಣಬಹುದು.

ಜಾಗತಿಕವಾಗಿ ಶ್ರೀಲಂಕಾದ ಅಧ್ಯಕ್ಷ ಗೋತಬಯ ರಾಜಪಕ್ಸ, ಸೌದಿ ಅರೇಬಿಯಾದ ಪ್ರಿನ್ಸ್ ಮುಹಮ್ಮದ್ ಬಿನ್ ಸಲ್ಮಾನ್, ನ್ಯೂಜಿಲೆಂಡ್ ನ ಪ್ರಧಾನಿ ಜಸಿಂಡಾ ಅರ್ಡೆರ್ನ್, ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್, ಫಿನ್ಲೆಂಡ್ ಪ್ರಧಾನಿ ಸನಾ ಮರೀನ್, ಅಮೆರಿಕದ ಸಂಸದೆ ಅಲೆಕ್ಸಾಂಡ್ರಿಯಾ ಒಕಾಸಿಯೊ-ಕಾರ್ಟೆಜ್ ಮತ್ತು ಯುವ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್ಬರ್ಗ್ ಅವರು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
2011ರಲ್ಲಿ ಗುಜರಾತ್ ನಲ್ಲಿ ಮೋದಿ-ಬಿಜೆಪಿ ಗೆಲುವಿಗೆ ಕಾರಣರಾಗಿದ್ದ ಪ್ರಶಾಂತ್ ಕಿಶೋರ್ 2014ರ ಲೋಕಸಭೆ ಚುನಾವಣೆಯಲ್ಲೂ ನೆರವಾಗಿದ್ದರು. ಭಾರತೀಯ ರಾಜಕೀಯ ಕ್ರಿಯಾ ಸಮಿತಿ ಸಂಸ್ಥೆಯ ಮಾರ್ಗದರ್ಶಕರಾಗಿರುವ ಪ್ರಶಾಮ್ತ್ ಅವರು ಸದ್ಯ ಬಿಹಾರದಲ್ಲಿ ಜೆಡಿಯು ಅಧಿಕಾರಕ್ಕೇರುವಂತೆ ಮಾಡಿದ್ದಲ್ಲದೆ, ಉನ್ನತ ಹುದ್ದೆಯನ್ನು ಪಡೆದುಕೊಂಡಿದ್ದಾರೆ.
2016ರಲ್ಲಿ ದೇಶದ್ರೋಹದ ಆರೋಪ ಹೊತ್ತಿದ್ದ ಕನ್ಹಯ್ಯ ಕುಮಾರ್ ಅವರು ವಿದ್ಯಾರ್ಥಿ ಸಂಘಟನೆ ನಾಯಕರಾಗಿ ಬೆಳೆದು, ರಾಜಕೀಯಕ್ಕೆ ಕಾಲಿಟ್ಟವರು. 2019ರ ಲೋಕಸಭೆ ಚುನಾವಣೆಯಲ್ಲಿ ಬೇಗುಸರಾಯಿಯಲ್ಲಿ ಸ್ಪರ್ಧಿಸಿ, ಶೇ 22 ರಷ್ಟು ಮತಗಳಿಸಿದ್ದರು. ಮೋದಿ ಸರ್ಕಾರದ ನೀತಿ, ನಿಯಮವನ್ನು ಕಾಲಕಾಲಕ್ಕೆ ಪ್ರಶ್ನಿಸುತ್ತಾ ಬಂದಿರುವ ಕನ್ಹಯ್ಯ ಅವರನ್ನು ಮುಂದಿನ ದಶದಕ ಪ್ರಭಾವಿ ವ್ಯಕ್ತಿ ಎಂದು ಫೋರ್ಬ್ಸ್ ಇಂಡಿಯಾ ಹೆಸರಿಸಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications