ಮಕ್ಕಳಾಗಲು ಮಾನವನ ಮೂಳೆ ಪೌಡರ್ ತಿನ್ನುವಂತೆ ಒತ್ತಾಯ, ಪ್ರಕರಣ ದಾಖಲು
ಪುಣೆ, ಜನವರಿ 21: ಮಹಿಳೆಯೊಬ್ಬರಿಗೆ ಗರ್ಭಧರಿಸಲು ಸ್ಥಳೀಯ ತಂತ್ರಿಕ್ ಬಾಬಾ ಸೂಚಿಸಿದ ಮಾಟಮಂತ್ರದ ಆಚರಣೆಯ ಸತ್ತ ವ್ಯಕ್ತಿಯ ಮೂಳೆಗಳಿಂದ ತಯಾರಿಸಿದ ಪುಡಿಯನ್ನು ಆಕೆಯ ಅತ್ತೆ ಮತ್ತು ಅವಳ ಪತಿ ಸೇವಿಸುವಂತೆ ಒತ್ತಾಯ ಮಾಡಿದ್ದಾರೆ ಎಂದು ಆರೋಪಿಸಿದ ಪ್ರಕರಣ ದಾಖಲಾಗಿದೆ.
ಈ ಸಂಬಂಧ ಮಹಿಳೆಯ ನೀಡಿದ ದೂರು ನಂತರ, ಪುಣೆ ಸಿಟಿ ಪೊಲೀಸ್ನ ಸಿನ್ಗಡ್ ಪೊಲೀಸ್ ಠಾಣೆಯು ಬುಧವಾರ ದಾಖಲಿಸಿದ ಎಫ್ಐಆರ್ನಲ್ಲಿ ಆಕೆಯ ಪತಿ, ಅತ್ತೆಯಂದಿರು ಮತ್ತು ತಾಂತ್ರಿಕ ಬಾಬಾ ಸೇರಿದಂತೆ ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪುಣೆ ನಗರ ಪೊಲೀಸ್ನ ಉಪ ಪೊಲೀಸ್ ಆಯುಕ್ತ ಸುಹೇಲ್ ಶರ್ಮಾ ಅವರು ಮಾಹಿತಿ ನೀಡಿರುವ ಪ್ರಕಾರ, ಏಳು ಶಂಕಿತರ ವಿರುದ್ಧ ಮಾನವ ತ್ಯಾಗ ಮತ್ತು ಇತರ ಅಮಾನವೀಯ, ದುಷ್ಟ ಮತ್ತು ಅಘೋರಿ ಅಭ್ಯಾಸಗಳು ಮತ್ತು ಬ್ಲ್ಯಾಕ್ ಮ್ಯಾಜಿಕ್ ಆಕ್ಟ್, 2013) ಐಪಿಸಿಯ ಸೆಕ್ಷನ್ 498 ಎ, 323, 504, ಮತ್ತು 506 ಮತ್ತು ಮೂಢನಂಬಿಕೆ ವಿರೋಧಿ ಕಾಯ್ದೆಯ ಸೆಕ್ಷನ್ 3 (ಮಹಾರಾಷ್ಟ್ರ ತಡೆಗಟ್ಟುವಿಕೆ ಮತ್ತು ನಿರ್ಮೂಲನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವರದಿಗಳ ಪ್ರಕಾರ, ಮಹಿಳೆ ಪೊಲೀಸರಿಗೆ ನೀಡಿರುವ ಆರೋಪ ಪಟ್ಟಿಯಲ್ಲಿ ಮೊದಲ ಪ್ರಕರಣದಲ್ಲಿ ಸಂತ್ರಸ್ತೆ 2019ರಲ್ಲಿ ಮದುವೆಯ ಸಮಯದಲ್ಲಿ ತನ್ನ ಅತ್ತೆಯಂದಿರು ವರದಕ್ಷಿಣೆ ಕೇಳಿದ್ದರು. ಅದರಲ್ಲಿ ಸ್ವಲ್ಪ ಹಣ ಮತ್ತು ಚಿನ್ನ ಮತ್ತು ಬೆಳ್ಳಿಯಿಂದ ಮಾಡಿದ ಆಭರಣಗಳಿಗೆ ಬೇಡಿಕೆ ಇಡಲಾಗಿತ್ತು. ತದನಂತರ ಎರಡನೇ ದೂರಿನಲ್ಲಿ ಪೊಲೀಸರು ಮೂಢನಂಬಿಕೆ ಮತ್ತು ಬ್ಲ್ಯಾಕ್ ಮ್ಯಾಜಿಕ್ ವಿರೋಧಿ ಕಾಯ್ದೆಯ ಸೆಕ್ಷನ್ 3 ಅನ್ನು ಜಾರಿಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಹಿಳೆಯ ಅತ್ತೆಯಂದಿರು ಅವಳನ್ನು ಹಲವಾರು ಅಮವಾಸ್ಯೆಗಳಲ್ಲಿ ಮನೆಯಲ್ಲಿ ಕೆಲವು ಮೂಢನಂಬಿಕೆ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಒತ್ತಾಯಿಸಿದ್ದರು. ಇತರ ಆಚರಣೆಗಳಲ್ಲಿ ಸಂತ್ರಸ್ತೆಯನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಅಪರಿಚಿತ ಸ್ಮಶಾನಕ್ಕೆ ಎಳೆದುಕೊಂಡು ಹೋಗಿ ಕೆಲವು ಮೂಳೆ ತುಣುಕುಗಳನ್ನು ಸೇವಿಸುವಂತೆ ಒತ್ತಾಯಿಸಲಾಯಿತು ಎಂದು ತಿಳಿದು ಬಂದಿದೆ.

ಸಂತ್ರಸ್ತೆಯನ್ನು ಅತ್ತೆ ಮಾವಂದಿರು ಮಹಾರಾಷ್ಟ್ರದ ಕೊಂಕಣ ಪ್ರದೇಶದ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದರು. ಅಲ್ಲಿ ಮತ್ತೊಂದು ವಿಧದ ಆಚರಣೆಯ ಭಾಗವಾಗಿ ಜಲಪಾತದ ಪಕ್ಕದಲ್ಲಿ ಅಘೋರಿ ಪೂಜೆಯಲ್ಲಿ ಕೂರಿಸಿದ್ದರು. ಅವರು ಈ ಆಚರಣೆಯಲ್ಲಿ ತೊಡಗಿರುವಾಗ ಅವರು ತಾಂತ್ರಿಕ ಬಾಬಾರಿಂದ ವೀಡಿಯೊ ಕರೆಗಳ ಮೂಲಕ ನಿರ್ದೇಶನಗಳನ್ನು ಸ್ವೀಕರಿಸುತ್ತಿದ್ದರು ಎಂದು ಡಿಸಿಪಿ ಶರ್ಮಾ ತಿಳಿಸಿದ್ದಾರೆ.
ಈಗ ನಾವು ಏಳು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದೇವೆ ಮತ್ತು ದೂರನ್ನು ಗಂಭೀರವಾಗಿ ಪರಿಗಣಿಸಿದ ನಂತರ ತನಿಖೆ ಆರಂಭಿಸಿದ್ದೇವೆ. ಈ ಆಚರಣೆಗಳು ನಡೆದ ನಿರ್ದಿಷ್ಟ ಸ್ಮಶಾನವನ್ನು ನಾವು ಹುಡುಕಲು ಪ್ರಾರಂಭಿಸಿದ್ದೇವೆ. ಈ ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲಿದ್ದೇವೆ. ನಂತರ ಘಟನೆಯ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದು. ಎಸಿಪಿ ಶ್ರೇಣಿಯ ಪೊಲೀಸ್ ಅಧಿಕಾರಿಯೊಬ್ಬರು ಪ್ರಕರಣದ ತನಿಖೆಯನ್ನು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಇದೀಗ ನಾವು ಭರವಸೆ ನೀಡಬಹುದು. ಸಂತ್ರಸ್ತೆಯ ಕುಟುಂಬವು ಸುಶಿಕ್ಷಿತವಾಗಿದೆ ಆದರೂ ಇಂತಹ ಕೃತ್ಯ ಎಸಗಿದೆ ಎಂದು ಡಿಸಿಪಿ ಆಶ್ಚರ್ಯ ವ್ಯಕ್ತಪಡಿಸಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications