ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೀರಪ್ಪನ್ ಹತ್ಯೆ ರೂವಾರಿಗೆ ಮತ್ತೊಂದು ದೊಡ್ಡ ಜವಾಬ್ದಾರಿ!

|
Google Oneindia Kannada News

ನವದೆಹಲಿ, ಡಿಸೆಂಬರ್ 6; ಕರ್ನಾಟಕ ಹಾಗೂ ತಮಿಳುನಾಡಿಗೆ ಕಂಟಕವಾಗಿದ್ದ ಕಾಡುಗಳ್ಳ ವೀರಪ್ಪನ್ ಅಟ್ಟಹಾಸಕ್ಕೆ ಪೂರ್ಣ ವಿರಾಮ ಹಾಕುವಲ್ಲಿ ಪ್ರಮುಖ ಕಾರಣವಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ.ವಿಜಯಕುಮಾರ ಅವರನ್ನು ಕೇಂದ್ರ ಸರ್ಕಾರ ತನ್ನ ಗೃಹ ಸಚಿವಾಲಯಕ್ಕೆ ಭದ್ರತಾ ಸಲಹೆಗಾರರನ್ನಾಗಿ ನೇಮಿಸಿದೆ.

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಡಿಸೆಂಬರ್ 3 ರಂದು ಈ ನೇಮಕಾತಿ ಮಾಡಿದ್ದು, ಕೆ.ವಿಜಯಕುಮಾರ ಅವರು, ಒಂದು ವರ್ಷದ ಅವಧಿ ವರೆಗೆ ಕೇಂದ್ರ ಸರ್ಕಾರಕ್ಕೆ ಆಂತರಿಕ ಭದ್ರತೆಗೆ ಸಂಬಂಧಿಸಿದಂತೆ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ.

ವೀರಪ್ಪನ್ ಹತ್ಯೆ ರೂವಾರಿಗೆ ಮತ್ತೊಂದು ದೊಡ್ಡ ಜವಾಬ್ದಾರಿ!

1975 ರ ಬ್ಯಾಚ್ ನ ತಮಿಳುನಾಡು ಕೇಡರ್ ನ ಐಪಿಎಸ್ ಅಧಿಕಾರಿಯಾಗಿರುವ ಕೆ ವಿಜಯ ಕುಮಾರ್ ಅವರು, ಕೇಂದ್ರ ಮೀಸಲು ಪೊಲೀಸ್ ಪಡೆಯ (CRPF) ಮಹಾ ನಿರ್ದೇಶಕರಾಗಿ ಹಾಗೂ ಹೈದ್ರಾಬಾದ್ ನ ರಾಷ್ಟೀಯ ಪೊಲೀಸ್ ಅಕಾಡೆಮಿಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ ಕಳೆದ ವರ್ಷ ಕೇಂದ್ರ ಸರ್ಕಾರ ಅವರನ್ನು ಜಮ್ಮು ಮತ್ತು ಕಾಶ್ಮೀರದ ಲೆಪ್ಟಿನಂಟ್ ಗವರ್ನರ್ ಗೆ ವಿಶೇಷ ಸಲಹೆಗಾರರಾಗಿದ್ದರು.

English summary
Formar IPS Ifficer K Vijay Kumar appointed as Central Home ministry advisor. this appoint by central Home minister Amith Sha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X