ಸನಾತನ ಧರ್ಮ ನಿರ್ಮಲನೆಗಾಗಿಯೇ ಇಂಡಿಯಾ ಒಕ್ಕೂಟ ರಚನೆ: ತಮಿಳುನಾಡು ಸಚಿವ
ಚೆನ್ನೈ, ಸೆಪ್ಟೆಂಬರ್ 12: ಸನಾತನ ಧರ್ಮದ ನಿರ್ಮೂಲನೆ ಮಾಡಲು ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟವನ್ನು ರಚಿಸಲಾಗಿದೆ ಎಂದು ಡಿಎಂಕೆ ಸಚಿವ ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ ಅವರ ಹೇಳುವ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
"I.N.D.I.A alliance is formed to fight against the principles of Santana Dharma, we may have our differences among us but the 26 parties in the alliance are united in the fight against Santana Dharma but we need political power for that"
— Vishwatma 🇮🇳 (@HLKodo) September 11, 2023
DMK Minister Ponmudi. pic.twitter.com/tKQTTv1VsZ
ಸನಾತನ ಧರ್ಮದ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಈಗ ಮತ್ತೊಬ್ಬ ಸಚಿವರೂ ಹೀಗೆ ಹೇಳಿರುವುದು ಉರಿವ ಬೆಂಕಿಗೆ ತುಪ್ಪ ಸುರಿದಂತೆ ಆಗಿದೆ.

ಸನಾತನ ಧರ್ಮವನ್ನು ಮಲೇರಿಯಾ, ಕೊರೋನಾ ಮತ್ತು ಡೆಂಗ್ಯೂ ಕಾಯಿಲೆಗಳಿಗೆ ಹೋಲಿಸಿ ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ವಿವಾದ ಸೃಷ್ಟಿಸಿದ್ದರು. ನಂತರ, ಎ. ರಾಜಾ ಏಡ್ಸ್ಗೆ ಹೋಲಿಸಿದ್ದರು. ಈಗ ಮತ್ತೊಬ್ಬ ತಮಿಳುನಾಡು ಸಚಿವ ಮಾತನಾಡಿದ್ದು, ಸನಾತನ ಧರ್ಮ ನಿಮೂರ್ಲನೆ ಮಾಡಲೆಂದೇ ಇಂಡಿಯಾ ಒಕ್ಕೂಟವನ್ನು ರಚಿಸಲಾಗಿದೆ ಎಂದಿದ್ದಾರೆ.
ನಮ್ಮಲ್ಲಿ ಭಿನ್ನಾಭಿಪ್ರಾಯಗಳಿರಬಹುದು, ಆದರೆ ಇಂಡಿಯಾ ಮೈತ್ರಿಯಲ್ಲಿರುವ 26 ಪಕ್ಷಗಳು ಸನಾತನ ಧರ್ಮದ ವಿರುದ್ಧದ ಹೋರಾಟದಲ್ಲಿ ಒಂದಾಗಿವೆ. ಆದರೆ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ವಿಷಯಕ್ಕೆ ಬಂದಾಗ ನಾವೆಲ್ಲರೂ ಒಂದು ಅಂಶವನ್ನು ಒಪ್ಪುತ್ತೇವೆ. 26 ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಸಮಾನತೆ, ಸಾಮಾಜಿಕ ನ್ಯಾಯ, ಅಲ್ಪಸಂಖ್ಯಾತರ ರಕ್ಷಣೆ, ಲಿಂಗ ಸಮಾನತೆ ಇವೆಲ್ಲವೂ ಬೇಕು. ನೀವು ಮತ್ತು ನಾನು ಈ ಬಗ್ಗೆ ಮಾತನಾಡಬಹುದು, ಆದರೆ ನಾವು ರಾಜಕೀಯದಲ್ಲಿ ಗೆದ್ದಾಗ ಮಾತ್ರ, ನಾವು ಬದಲಾವಣೆಗಳನ್ನು ಮಾಡಬಹುದು ಎಂದು ಖಚಿತಪಡಿಸಿಕೊಳ್ಳಬಹುದು" ಎಂದು ಹೇಳಿದ್ದಾರೆ.
ಸನಾತನ ಧರ್ಮದ ವಿರುದ್ಧ ಹೋರಾಡಲು ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಸೆಪ್ಟೆಂಬರ್ 2 ರಂದು ಹೇಳಿಕೆ ನೀಡಿದ್ದ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಮಲೇರಿಯಾ, ಕೊರೋನಾ ಮತ್ತು ಡೆಂಗ್ಯೂ ಮುಂತಾದ ಕಾಯಿಲೆಗಳಿಗೆ ಹೋಲಿಸಿದ್ದರು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications