ಸಿಬಿಐ ಮಾಜಿ ನಿರ್ದೇಶಕ ರಾಕೇಶ್ ಆಸ್ತಾನಾ ಈಗ BSF ಡಿಜಿ
ನವದೆಹಲಿ, ಆ. 17: ಸಿಬಿಐನಲ್ಲಿ ನಿರ್ದೇಶಕರಾಗಿದ್ದ ಅಲೋಕ್ ವರ್ಮಾ ಅವರೊಂದಿಗೆ ಜಗಳವಾಡುವ ಮೂಲಕ ವಿವಾದಕ್ಕೀಡಾಗಿ ಸುದ್ದಿಯಾಗಿದ್ದ ಸಿಬಿಐನ ಮಾಜಿ ವಿಶೇಷ ನಿರ್ದೇಶಕ ರಾಕೇಶ್ ಆಸ್ತಾನಾ ಮತ್ತೆ ಸುದ್ದಿಯಲ್ಲಿದ್ದಾರೆ. ನಾಗರಿಕ ವಿಮಾನಯಾನ ಭದ್ರತಾ ಇಲಾಖೆಗೆ ವರ್ಗಾವಣೆಯಾಗಿದ್ದ ರಾಕೇಶ್ ಆಸ್ತಾನಾ ಅವರಿಗೆ ಮಾದಕ ವಸ್ತು ನಿಯಂತ್ರಣ ಬ್ಯೂರೋದ ಹೆಚ್ಚುವರಿ ಅಧಿಕಾರ ನೀಡಲಾಗಿತ್ತು. ಈಗ ಗಡಿ ಭದ್ರತಾ ಪಡೆ(BSF) ಪ್ರಧಾನ ನಿರ್ದೇಶಕ (DG) ರನ್ನಾಗಿ ನೇಮಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟ ನೇಮಕಾತಿ ಸಮಿತಿಯು ಆಸ್ತಾನಾ ಅವರನ್ನು ಮಾದಕವಸ್ತು ನಿಯಂತ್ರಣ ಬ್ಯೂರೋದ (ಎನ್ಸಿಬಿ) ಮಹಾ ನಿರ್ದೇಶಕರನ್ನಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಿತ್ತು. ಇದಲ್ಲದೆ ರಾಕೇಶ್ ಅವರ ಅಧಿಕಾರ ಅವಧಿಯನ್ನು ಮೊಟಕುಗೊಳಿಸಲಾಗಿದ್ದು, ಸಿಬಿಐನಿಂದ ಕೂಡಾ ವರ್ಗಾಯಿಸಿ ಆದೇಶ ಹೊರಡಿಸಲಾಗಿತ್ತು. ರಾಕೇಶ್ ಆಸ್ತಾನ ಅವರ ಅಧಿಕಾರ ಅವಧಿ ಜುಲೈ 2021ರ ತನಕವಿತ್ತು.
ಸಿಬಿಐ ಮಾಜಿ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಅವರ ಸ್ಥಾನದಿಂದ ಕೆಳಗಿಳಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ. ಅಲೋಕ್ ವರ್ಮಾ ಅವರನ್ನು ಅಗ್ನಿಶಾಮಕ ದಳ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು. ಆದರೆ, ಆ ಹುದ್ದೆಯನ್ನು ಒಪ್ಪಿಕೊಳ್ಳದೆ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಅಲೋಕ್ ವರ್ಮಾ ಹಾಗೂ ರಾಕೇಶ್ ಆಸ್ತಾನ ಇಬ್ಬರು ಪರಸ್ಪರ ಭ್ರಷ್ಟಾಚಾರದ ಆರೋಪ ಹೊರೆಸಿ, ಕಿತ್ತಾಡಿಕೊಂಡಿದ್ದು, ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಲಂಚ ಮತ್ತು ಸುಲಿಗೆ ಆರೋಪಗಳನ್ನು ಎದುರಿಸುತ್ತಿದ್ದ ಸುಪ್ರೀಂಕೋರ್ಟ್ನ ಮಾಜಿ ವಿಶೇಷ ನಿರ್ದೇಶಕ ರಾಕೇಶ್ ಆಸ್ತಾನಾ ಮತ್ತು ಡಿಎಸ್ಪಿ ದೇವೇಂದರ್ ಕುಮಾರ್ ಹಾಗೂ ಇತರರಿಗೆ ಸಿಬಿಐ ಮಂಗಳವಾರ ಕ್ಲೀನ್ ಚಿಟ್ ನೀಡಿತ್ತು.
ವಿಜಯ್ ಮಲ್ಯ ಮನಿಲಾಂಡ್ರಿಂಗ್ ಕೇಸ್, ಅಗಸ್ಟಾ ವೆಸ್ಟ್ ಲ್ಯಾಂಡ್ ಕೇಸ್, ಐಎಎಫ್ ಮುಖ್ಯಸ್ಥರಾಗಿದ್ದ ಎಸ್ ಪಿ ತ್ಯಾಗಿ ಬಂಧನ ಎಲ್ಲವೂ ರಾಕೇಶ್ ಆಸ್ತಾನ ಅವರ ಅವಧಿಯಲ್ಲಿನ ಬೆಳವಣಿಗೆಗಳು, ಗುಜರಾತ್ ಕೇಡರ್ ನ ಐಪಿಎಸ್ ಅಧಿಕಾರಿ ಅವರು ಏಪ್ರಿಲ್ 2016ರಲ್ಲಿ ಸಿಬಿಐ ಸೇರಿದರು, ಡಿಸೆಂಬರ್ 2016ರಿಂದ ಜನವರಿ 2017ರ ತನಕ ಸಿಬಿಐನ ಮಧ್ಯಂತರ ನಿರ್ದೇಶಕರಾಗಿದ್ದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications