ನೈತಿಕ ನೆಲೆಗಟ್ಟು ಕಳೆದುಕೊಂಡ ಬಿಜೆಪಿ, ಯಶವಂತ್ ಸಿನ್ಹಾ ವಾಗ್ದಾಳಿ
ಪಾಟ್ನಾ, ಅಕ್ಟೋಬರ್ 11: ದೇಶದ ಆರ್ಥಿಕ ಸ್ಥಿತಿಯನ್ನು ಕೇಂದ್ರ ಸರಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ ಎನ್ನುವ ಮೂಲಕ ಬಿಜೆಪಿಗೆ ಮುಜುಗರ ಉಂಟು ಮಾಡಿದ್ದ ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ, ಬುಧವಾರ ಮತ್ತೊಂದು ಸುತ್ತಿನ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯು ತನ್ನ ನೈತಿಕ ನೆಲೆಗಟ್ಟನ್ನು ಕಳೆದುಕೊಂಡಿದೆ ಎಂದಿದ್ದಾರೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಗ ಜಯ್ ಶಾನ ಕಂಪನಿಗೆ ಸಂಬಂಧಿಸಿದಂತೆ ಕೇಳಿಬಂದ ಆರೋಪಕ್ಕೆ ಯಶವಂತ್ ಸಿನ್ಹಾ ಪ್ರತಿಕ್ರಿಯಿಸಿದ್ದಾರೆ.
ಈ ವಿಚಾರದಲ್ಲಿ ಬಿಜೆಪಿಯು ಹಲವು ತಪ್ಪುಗಳನ್ನು ಎಸಗಿದೆ. ಸರಕಾರದ ಹಿರಿಯ ಸಚಿವರು ಅಮಿತ್ ಶಾ ಮಗನ ಸಮರ್ಥನೆಗೆ ನಿಂತರು. ಸರಕಾರದ ಹಿರಿಯ ವಕೀಲರಾದ ತುಷಾರ್ ಮೆಹ್ತಾ ನ್ಯಾಯಾಲಯದಲ್ಲಿ ಜಯ್ ಶಾ ಪರ ವಕಾಲತ್ತು ವಹಿಸಲು ನಿಂತರು ಎಂದು ಸಿನ್ಹಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಯ್ ಶಾ ಒಡೆತನದ ಕಂಪನಿಯು ಹದಿನಾರು ಸಾವಿರ ಪಟ್ಟು ಹೆಚ್ಚು ಲಾಭವನ್ನು ಘೋಷಿಸಿದೆ. ಇದು ಅನುಮಾನಾಸ್ಪದವಾಗಿದೆ ಎಂದು 'ದ ವೈರ್' ಸುದ್ದಿ ವೆಬ್ ಸೈಟ್ ವರದಿ ಮಾಡಿತ್ತು. ಆ ನಂತರ ಜಯ್ ಶಾ ಅವರು ವೆಬ್ ಸೈಟ್ ವಿರುದ್ಧ ನೂರು ಕೋಟಿ ರುಪಾಯಿಯ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
"ಇಂಧನ ಸಚಿವಾಲಯವು ಜಯ್ ಶಾಗೆ ಸಾಲ ನೀಡಿದ ರೀತಿ, ಮತ್ತು ಸಚಿವ ಪಿಯೂಷ್ ಗೋಯಲ್ ಅವರು ಜಯ್ ಶಾ ಸಮರ್ಥನೆಗೆ ಮುಂದಾದ ರೀತಿ ಇವೆಲ್ಲ ಏನೋ ತಪ್ಪಾಗಿದೆ ಎಂಬ ಭಾವನೆ ಮೂಡಿಸುತ್ತದೆ ಎಂದು ಸಿನ್ಹಾ ಹೇಳಿದ್ದಾರೆ.
ಅಡಿಷನಲ್ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಕೋರ್ಟ್ ನಲ್ಲಿ ಖಾಸಗಿ ವ್ಯಕ್ತಿಯೊಬ್ಬರನ್ನು ಪ್ರತಿನಿಧಿಸುವಂಥದ್ದು ಈ ಹಿಂದೆ ಎಂದೂ ಆಗಿಲ್ಲ ಎಂದು ಯಶವಂತ್ ಸಿನ್ಹಾ ಪಾಟ್ನಾದಲ್ಲಿ ಹೇಳಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೆಹ್ತಾ, ಕಾನೂನು ಸಚಿವಾಲಯದಿಂದ ಒಪ್ಪಿಗೆ ಪಡೆದ ನಂತರವೇ ಜಯ್ ಶಾಗೆ ಕಾನೂನು ಸಲಹೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
"ಈ ಪ್ರಕರಣದಲ್ಲಿ ಸರಕಾರದ ಹಲವು ಇಲಾಖೆಗಳು ಇವೆ. ಆದ್ದರಿಂದ ಈ ಬಗ್ಗೆ ತನಿಖೆಗೆ ಆದೇಶಿಸಬೇಕು" ಎನ್ನುವ ಮೂಲಕ ವಿರೋಧ ಪಕ್ಷಗಳು ಮಾಡುತ್ತಿರುವ ಒತ್ತಾಯಕ್ಕೆ ಧ್ವನಿಗೂಡಿಸಿದ್ದಾರೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications