Mehbooba Mufti : ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಬಂಧನ
ಪಿಡಿಪಿ ಪಕ್ಷದ ಹಲವಾರು ಕಾರ್ಯಕರ್ತರ ಜೊತೆಯಲ್ಲಿ ಮೆಹಬೂಬಾ ಮುಫ್ತಿ ಅವರು ನವದೆಹಲಿಯ ರೈಲ್ವೆ ಭವನದಿಂದ ಸಂಸತ್ತಿಗೆ ಮೆರವಣಿಗೆ ನಡೆಸಲು ಯೋಜಿಸಿದ್ದರು.
ನವದೆಹಲಿ, ಫೆಬ್ರವರಿ 8: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಅತಿಕ್ರಮಣ ವಿರೋಧಿ ಅಭಿಯಾನವನ್ನು ವಿರೋಧಿಸಿ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಬುಧವಾರ ಸಂಸತ್ತಿಗೆ ಪ್ರತಿಭಟನಾ ಮೆರವಣಿಗೆ ನಡೆಸುವುದನ್ನು ಪೊಲೀಸರು ತಡೆದರು.
ಪಿಡಿಪಿ ಪಕ್ಷದ ಹಲವಾರು ಕಾರ್ಯಕರ್ತರ ಜೊತೆಯಲ್ಲಿ ಮೆಹಬೂಬಾ ಮುಫ್ತಿ ಅವರು ನವದೆಹಲಿಯ ರೈಲ್ವೆ ಭವನದಿಂದ ಸಂಸತ್ತಿಗೆ ಮೆರವಣಿಗೆ ನಡೆಸಲು ಯೋಜಿಸಿದ್ದರು. ಅವರು ಜಮ್ಮು ಮತ್ತು ಕಾಶ್ಮೀರದ ಆಡಳಿತದ ಬುಲ್ಡೋಜರ್ ಅಕ್ರಮ ನೀತಿಗಳ ಕುರಿತು ಮಾಹಿತಿ ನೀಡಲು ಹೊರಟಿದ್ದರು.
ಆದಾಗ್ಯೂ, ಪೊಲೀಸರು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಯು ಆದ ಮೆಹಬೂಬಾ ಮುಫ್ತಿ ಅವರನ್ನು ಮತ್ತು ಅವರ ಪಕ್ಷದ ಕಾರ್ಯಕರ್ತರನ್ನು ಬಂಧಿಸಿ ಜಂತರ್ ಮಂತರ್ಗೆ ಕರೆದೊಯ್ದರು. ಜಂತರ್ ಮಂತರ್ನಿಂದ ಪ್ರತಿಭಟನಾಕಾರರು ಚದುರಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ಸಾರ್ವಜನಿಕರು, ವಿರೋಧ ಪಕ್ಷಗಳು ಮತ್ತು ಆಡಳಿತಾರೂಢ ಬಿಜೆಪಿಯ ಸದಸ್ಯರಿಗೆ ತಿಳಿಸಲು ನಾವು ಬಂದಿದ್ದೇವೆ. ನಮಗೆ ಸಂಸತ್ತಿಗೆ ಹೋಗಲು ಸಾಧ್ಯವಾಗದಿದ್ದರೆ, ನಾವು ಎಲ್ಲಿಗೆ ಹೋಗಬೇಕು ಎಂದು ನಾನು ಆಶ್ಚರ್ಯ ಪಡುತ್ತೇನೆ. ವಿಶ್ವಸಂಸ್ಥೆಯಲ್ಲಿ ನಮ್ಮ ಕುಂದುಕೊರತೆಗಳನ್ನು ಪರಿಹರಿಸಬೇಕೆಂದು ಸರ್ಕಾರ ಬಯಸುತ್ತದೆ ಮಾಜಿ ಸಿಎಂ ಮುಫ್ತಿ ತಿಳಿಸಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಕಾನೂನು ನಿಯಮಗಳಿಲ್ಲ. ನಾವು ನಮ್ಮ ನಮ್ಮ ಪರಿಸ್ಥಿತಿಯ ಬಗ್ಗೆ ತಿಳಿಸಲು ದೆಹಲಿಯವರೆಗೂ ಬಂದಿದ್ದೇವೆ. ಆದರೆ ಇಲ್ಲಿಯೂ ಸಾಮಾನ್ಯ ಜನರ ಧ್ವನಿಯನ್ನು ಅಡಗಿಸಲಾಗಿದೆ. ನಾವು ಸಂಸತ್ತಿಗೆ ಹೋಗಲು ಸಾಧ್ಯವಾಗದಿದ್ದರೆ, ನಾವು ಎಲ್ಲಿಗೆ ಹೋಗಬೇಕು ಎಂದು ನಾನು ಆಶ್ಚರ್ಯ ಪಡುತ್ತೇನೆ. ವಿಶ್ವಸಂಸ್ಥೆಯಲ್ಲಿ ನಮ್ಮ ಕುಂದುಕೊರತೆಗಳನ್ನು ಪರಿಹರಿಸಲು ಸರ್ಕಾರವು ಬಯಸುತ್ತದೆಯೇ ಎಂದು ಮೆಹಬೂಬಾ ಪ್ರಶ್ನಿಸಿದರು.

ಜಮ್ಮು ಮತ್ತು ಕಾಶ್ಮೀರದ ಪಿಡಿಪಿ ಮತ್ತು ಇತರ ರಾಜಕೀಯ ಪಕ್ಷಗಳು ಅತಿಕ್ರಮಣ ವಿರೋಧಿ ಅಭಿಯಾನವನ್ನು ಖಂಡಿಸಿದ್ದು, ಅದನ್ನು ನಿಲ್ಲಿಸುವಂತೆ ಆಡಳಿತವನ್ನು ಕೇಳಿಕೊಂಡಿವೆ. ಇದರಿಂದ ಬಡವರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications