ಮಾನವ ಹಕ್ಕುಗಳ ಆಯೋಗಕ್ಕೆ 'ಕನ್ನಡಿಗ' ದತ್ತು ಅಧ್ಯಕ್ಷ
ನವದೆಹಲಿ, ಫೆ. 24: ಸುಪ್ರೀಂಕೋರ್ಟಿನ ನಿವೃತ್ತ ಮುಖ್ಯ ನ್ಯಾಯಮೂರ್ತಿ, ಕರ್ನಾಟಕ ಮೂಲದ ಕನ್ನಡಿಗ ಹಂದ್ಯಾಳ ಲಕ್ಷ್ಮೀನಾರಾಯಣಸ್ವಾಮಿ ದತ್ತು (ಎಚ್.ಎಲ್. ದತ್ತು ) ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್ಎಚ್ಆರ್ಸಿ) ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿ ಎಚ್.ಎಲ್ ದತ್ತು ಅವರ ಹೆಸನ್ನು ಅಂತಿಮಗೊಳಿಸಿ, ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಅನುಮೋದನೆಗಾಗಿ ಕಳುಹಿಸಿದೆ. ಕೆ.ಜಿ. ಬಾಲಕೃಷ್ಣನ್ ಅವರ ನಿವೃತ್ತಿ(ಮೇ 11, 2015) ನಂತರ ಕಳೆದ ಏಳು ತಿಂಗಳಿಂದ ಎನ್ಎಚ್ಆರ್ಸಿ ಅಧ್ಯಕ್ಷರ ಹುದ್ದೆ ಖಾಲಿ ಇತ್ತು. ಡಿಸೆಂಬರ್ 2, 2015ರಂದು ಎಚ್ ಎಲ್ ದತ್ತು ಅವರು ನಿವೃತ್ತರಾಗಿದ್ದರು. ಸದ್ಯಕ್ಕೆ ಎನ್ ಎಚ್ ಆರ್ ಸಿ ಗೆ ಜಸ್ಟೀಸ್ ಸಿರಿಯಾಕ್ ಜೋಸೆಫ್ ಅವರು ಮಧ್ಯಂತರ ಅಧ್ಯಕ್ಷರಾಗಿದ್ದಾರೆ. [ಎಚ್ಎಲ್ ದತ್ತು ವ್ಯಕ್ತಿಚಿತ್ರ]
ಆಯ್ಕೆ ಸಮಿತಿಯಲ್ಲಿ ಯಾರಿದ್ದರು?: ಪ್ರಧಾನಿ ಜೊತೆ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ರಾಜ್ಯಸಭಾ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಮತ್ತು ರಾಜ್ಯಸಭಾ ಉಪ ಸಭಾಪತಿ ಪಿ.ಜೆ. ಕುರಿಯನ್ ಸಭೆಯಲ್ಲಿ ಹಾಜರಿದ್ದರು., ಲೋಕಸಭಾ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಗೈರು ಹಾಜರಿದ್ದರು.

ಮಾನವ ಹಕ್ಕುಗಳ ಸಂರಕ್ಷಣಾ ಕಾಯ್ದೆ, 1993ರ ಅಡಿಯಂತೆ ಎನ್ಎಚ್ಆರ್ಸಿ ಅಧ್ಯಕ್ಷ ಮತ್ತು ಸದಸ್ಯರನ್ನು ಪ್ರಧಾನಿ ನೇತೃತ್ವದ ಸಮಿತಿಯ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ನೇಮಿಸುತ್ತಾರೆ. ಮುಂದಿನ ಐದು ವರ್ಷಗಳ ಅವಧಿಗೆ ಎನ್ಎಚ್ಆರ್ಸಿ ಅಧ್ಯಕ್ಷರಾಗಿ ದತ್ತು ಮುಂದುವರಿಯುತ್ತಾರೆ.[ಕನ್ನಡಿಗ ದತ್ತು ಸುಪ್ರೀಂಕೋರ್ಟ್ ನೂತನ ಸಿಜೆ]
65 ವರ್ಷದ ಎಚ್.ಎಲ್. ದತ್ತು ಅವರು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ 2014ರ ಸೆ.28 ರಿಂದ 2015ರ ಡಿ.2ರವರೆಗೆ ಕಾರ್ಯನಿರ್ವಹಿಸಿದ್ದರು. 1975ರಲ್ಲಿ ವಕೀಲರಾಗಿ ಬೆಂಗಳೂರಿನಲ್ಲಿ ವೃತ್ತಿ ಜೀವನ ಆರಂಭಿಸಿದರು. 1983ರ ನಂತರ ಮಾರಾಟ ತೆರಿಗೆ ಇಲಾಖೆ, ಆದಾಯ ತೆರಿಗೆ ಇಲಾಖೆ ಸ್ಥಾಯಿ ಸಮಿತಿಗೆ ಸರ್ಕಾರಿ ವಕೀಲರಾಗಿ ಕಾರ್ಯನಿರ್ವಹಿಸಿದರು.
1995ರಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ, 2007ರಲ್ಲಿ ಛತ್ತೀಸಗಡ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನಂತರ ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು. 2ಜಿ ಹಗರಣ, ಕಪ್ಪು ಹಣ ವಾಪಸ್, ಗುಜರಾತ್ ಗಲಭೆ ಮುಂತಾದ ಪ್ರಕರಣಗಳ ವಿಚಾರಣೆಗೆ ನ್ಯಾಯಮೂರ್ತಿಗಳಾಗಿ ಕರ್ತವ್ಯ ನಿರ್ವಹಿಸಿದ್ದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications