ಮಾನವ ಹಕ್ಕುಗಳ ಆಯೋಗಕ್ಕೆ 'ಕನ್ನಡಿಗ' ದತ್ತು ಅಧ್ಯಕ್ಷ
ನವದೆಹಲಿ, ಫೆ. 24: ಸುಪ್ರೀಂಕೋರ್ಟಿನ ನಿವೃತ್ತ ಮುಖ್ಯ ನ್ಯಾಯಮೂರ್ತಿ, ಕರ್ನಾಟಕ ಮೂಲದ ಕನ್ನಡಿಗ ಹಂದ್ಯಾಳ ಲಕ್ಷ್ಮೀನಾರಾಯಣಸ್ವಾಮಿ ದತ್ತು (ಎಚ್.ಎಲ್. ದತ್ತು ) ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್ಎಚ್ಆರ್ಸಿ) ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿ ಎಚ್.ಎಲ್ ದತ್ತು ಅವರ ಹೆಸನ್ನು ಅಂತಿಮಗೊಳಿಸಿ, ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಅನುಮೋದನೆಗಾಗಿ ಕಳುಹಿಸಿದೆ. ಕೆ.ಜಿ. ಬಾಲಕೃಷ್ಣನ್ ಅವರ ನಿವೃತ್ತಿ(ಮೇ 11, 2015) ನಂತರ ಕಳೆದ ಏಳು ತಿಂಗಳಿಂದ ಎನ್ಎಚ್ಆರ್ಸಿ ಅಧ್ಯಕ್ಷರ ಹುದ್ದೆ ಖಾಲಿ ಇತ್ತು. ಡಿಸೆಂಬರ್ 2, 2015ರಂದು ಎಚ್ ಎಲ್ ದತ್ತು ಅವರು ನಿವೃತ್ತರಾಗಿದ್ದರು. ಸದ್ಯಕ್ಕೆ ಎನ್ ಎಚ್ ಆರ್ ಸಿ ಗೆ ಜಸ್ಟೀಸ್ ಸಿರಿಯಾಕ್ ಜೋಸೆಫ್ ಅವರು ಮಧ್ಯಂತರ ಅಧ್ಯಕ್ಷರಾಗಿದ್ದಾರೆ. [ಎಚ್ಎಲ್ ದತ್ತು ವ್ಯಕ್ತಿಚಿತ್ರ]
ಆಯ್ಕೆ ಸಮಿತಿಯಲ್ಲಿ ಯಾರಿದ್ದರು?: ಪ್ರಧಾನಿ ಜೊತೆ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ರಾಜ್ಯಸಭಾ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಮತ್ತು ರಾಜ್ಯಸಭಾ ಉಪ ಸಭಾಪತಿ ಪಿ.ಜೆ. ಕುರಿಯನ್ ಸಭೆಯಲ್ಲಿ ಹಾಜರಿದ್ದರು., ಲೋಕಸಭಾ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಗೈರು ಹಾಜರಿದ್ದರು.

ಮಾನವ ಹಕ್ಕುಗಳ ಸಂರಕ್ಷಣಾ ಕಾಯ್ದೆ, 1993ರ ಅಡಿಯಂತೆ ಎನ್ಎಚ್ಆರ್ಸಿ ಅಧ್ಯಕ್ಷ ಮತ್ತು ಸದಸ್ಯರನ್ನು ಪ್ರಧಾನಿ ನೇತೃತ್ವದ ಸಮಿತಿಯ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ನೇಮಿಸುತ್ತಾರೆ. ಮುಂದಿನ ಐದು ವರ್ಷಗಳ ಅವಧಿಗೆ ಎನ್ಎಚ್ಆರ್ಸಿ ಅಧ್ಯಕ್ಷರಾಗಿ ದತ್ತು ಮುಂದುವರಿಯುತ್ತಾರೆ.[ಕನ್ನಡಿಗ ದತ್ತು ಸುಪ್ರೀಂಕೋರ್ಟ್ ನೂತನ ಸಿಜೆ]
65 ವರ್ಷದ ಎಚ್.ಎಲ್. ದತ್ತು ಅವರು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ 2014ರ ಸೆ.28 ರಿಂದ 2015ರ ಡಿ.2ರವರೆಗೆ ಕಾರ್ಯನಿರ್ವಹಿಸಿದ್ದರು. 1975ರಲ್ಲಿ ವಕೀಲರಾಗಿ ಬೆಂಗಳೂರಿನಲ್ಲಿ ವೃತ್ತಿ ಜೀವನ ಆರಂಭಿಸಿದರು. 1983ರ ನಂತರ ಮಾರಾಟ ತೆರಿಗೆ ಇಲಾಖೆ, ಆದಾಯ ತೆರಿಗೆ ಇಲಾಖೆ ಸ್ಥಾಯಿ ಸಮಿತಿಗೆ ಸರ್ಕಾರಿ ವಕೀಲರಾಗಿ ಕಾರ್ಯನಿರ್ವಹಿಸಿದರು.
1995ರಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ, 2007ರಲ್ಲಿ ಛತ್ತೀಸಗಡ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನಂತರ ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು. 2ಜಿ ಹಗರಣ, ಕಪ್ಪು ಹಣ ವಾಪಸ್, ಗುಜರಾತ್ ಗಲಭೆ ಮುಂತಾದ ಪ್ರಕರಣಗಳ ವಿಚಾರಣೆಗೆ ನ್ಯಾಯಮೂರ್ತಿಗಳಾಗಿ ಕರ್ತವ್ಯ ನಿರ್ವಹಿಸಿದ್ದರು.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ












Click it and Unblock the Notifications