Get Updates
Get notified of breaking news, exclusive insights, and must-see stories!

ಮುಂಬೈ,: ತೆಂಗಿನ ಮರ ಬಿದ್ದು ಮಾಜಿ ವಾರ್ತಾ ನಿರೂಪಕಿ ಸಾವು!

ಮುಂಬೈ, ಜುಲೈ 23 : ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ವೇಳೆ ತಲೆ ಮೇಲೆ ತೆಂಗಿನ ಮರ ಬಿದ್ದು ತೀವ್ರ ಗಾಯಗೊಂಡಿದ್ದ ದೂರದರ್ಶನದ ಮಾಜಿ ವಾರ್ತಾ ನಿರೂಪಕಿ ಶನಿವಾರ ಸಾವನ್ನಪ್ಪಿದ್ದಾರೆ.

ಮುಂಬೈನ ಚೆಂಬೂರ್ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ದೂರದರ್ಶನದ ಮಾಜಿ ವಾರ್ತಾ ನಿರೂಪಕಿ ಹಾಗೂ ಯೋಗ ಶಿಕ್ಷಕಿ ಕಾಂಚನ್ ನಾಥ್ (58) ಅವರ ಮೇಲೆ ತೆಂಗಿನ ಮರವೊಂದು ಬಿದ್ದು, ತೀವ್ರವಾಗಿ ಗಾಯಗೊಂಡಿದ್ದರು. ಆದರೆ, ಚಿಕಿತ್ಸೆ ಫಲಿಸಿದೆ ಶನಿವಾರ ಕೊನೆಯುಸಿರೆಳೆದರು.

former Doordarshan anchor died after a coconut tree fell on her in Mumbai

ಶುಕ್ರವಾರ ಮುಂಬೈನ ಚೆಂಬೂರ್‌ನಲ್ಲಿ ವಾಕಿಂಗ್ ಮಾಡುತ್ತಿದ್ದಾಗ ಸಂಭವಿಸಿದ ದುರ್ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಇದೇ ವೇಳೆ ಘಟನೆಗೆ ಮಹಾನಗರ ಪಾಲಿಕೆ ನಿರ್ಲಕ್ಷ್ಯವೇ ಕಾರಣ ಎಂದು ಕಾಂಚನ್ ಅವರ ಪತಿ ರಜತ್ ನಾಥ್ ಅವರು ಆರೋಪಿಸಿದ್ದಾರೆ. ತೆಂಗಿನ ಮರ ಯಾವುದೇ ಕ್ಷಣ ಬೀಳಬಹುದು ಎಂದು ದೂರು ನೀಡಿದ್ದರು. ಮರವನ್ನು ಕಡಿಯಲು ಪಾಲಿಕೆ ನಿರಾಕರಿಸಿತ್ತು ಎಂದು ದೂರಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+